ಮೈಸೂರು

ಮೈಸೂರು: ರಾಷ್ಟ್ರೀಯ ಲೋಕ್ ಅದಾಲತ್ 13 ಕ್ಕೆ

ಮೈಸೂರು: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ವತಿಯಿಂದ ಜು.13 ರಂದು ರಾಷ್ಟ್ರೀಯ/ಮೆಗಾ ಲೋಕ್ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದ್ದು, ಲೋಕ್ ಅದಾಲತ್‌ನಲ್ಲಿ ಈ ಕೆಳಗಿನ ಪ್ರಕರಣಗಳನ್ನು ರಾಜೀ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬoಧಿಸಿದ ಕ್ಲೇಮುಗಳು,ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು (Consumer Disputes), ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂ ಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬoಧಿಸಿದ ಸೇವಾ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತತೆ ಸೇವೆಗಳ ಸಂಬoಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ/ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನವನ್ನು ಹೊರತುಪಡಿಸಿ) ಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧ್ಯವವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗುವುದು. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರುಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಹೆಚ್ಚಿನ ಮಾಹಿತಿಗಾಗಿ ಮೈಸೂರು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ (ಮೈಸೂರು ನಗರಕ್ಕೆ ಸಂಬoಧಿದoತೆ ಮಾತ್ರ) ದೂ.ಸಂ:1800-425-0131 ಹಾಗೂ ತಾಲ್ಲೂಕುಗಳಿಗೆ ಸಂಬoಧಿಸಿದoತೆ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ನೇರವಾಗಿ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಈಡೇರಿದ ಭಾರತ್ ಜೋಡೋ ಪಾದಯಾತ್ರೆ ಆಶ್ವಾಸನೆ

ಚಾಮರಾಜನಗರ ಆಕ್ಸಿಜನ್ ದುರಂತದಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಸರ್ಕಾರಿ ಉದ್ಯೋಗ ಪತ್ರ ನೀಡಲಾಗಿದೆ. ೨೦೨೩ರಲ್ಲಿ ಕಾಂಗ್ರೆಸ್ ನಾಯಕ…

1 hour ago

ಓದುಗರ ಪತ್ರ: ಅರ್ಥಪೂರ್ಣ ಲೇಖನ

‘ಆಂದೋಲನ’ ದಿನ ಪತ್ರಿಕೆಯ ಏ.೧೯ರ ‘ಹಾಡು ಪಾಡು’ ಸಂಚಿಕೆಯಲ್ಲಿ ‘ಪಂಪ ಪ್ರಶಸ್ತಿ’ ಸಂದ ಹಿನ್ನೆಲೆಯಲ್ಲಿ ದೇವನೂರ ಮಹಾದೇವ ಅವರ ಬಗ್ಗೆ…

1 hour ago

ಓದುಗರ ಪತ್ರ: ಹಾರ್ಡಿಂಜ್ ವೃತ್ತದಲ್ಲಿರುವ ನಿಲ್ದಾಣದಲ್ಲೇ ಬಸ್ ನಿಲುಗಡೆಯಾಗಲಿ

ಮೈಸೂರಿನ ಹಾರ್ಡಿಂಜ್ ವೃತ್ತದ ಮೂಲಕ ಮೈಸೂರಿನಿಂದ- ಚಾಮರಾಜ ನಗರ, ಗುಂಡ್ಲುಪೇಟೆ, ಹಾಸನ, ಮಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಹಾಗೂ ಇನ್ನಿತರ ಸ್ಥಳಗಳ…

1 hour ago

ಕರ್ನಾಟಕ ಸಂಘದ 2 ಪ್ರತಿಷ್ಠಿತ ಪ್ರಶಸ್ತಿಗಳ ಪ್ರದಾನಕ್ಕೆ ಸಜ್ಜು

ಪ್ರೊ.ಬಿ.ಜಯಪ್ರಕಾಶ್‌ಗೌಡ  ಡಾ.ರಾಮೇಗೌಡ, ದಿ.ಸಿಂಗಾರಿಗೌಡ ಹೆಸರಲ್ಲಿ ಗೌರವ  ವಿಮರ್ಶಕ, ಜಾನಪದ ತಜ್ಞ ಡಾ.ರಾಮೇಗೌಡ ಮತ್ತು ಸರಳ ಸಜ್ಜನ ರಾಜಕಾರಣಿ ದಿ. ಸಿಂಗಾರಿಗೌಡ…

1 hour ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡಿಗರ ಕಣ್ಮಣಿ ಡಾ.ರಾಜಕುಮಾರ್ ನೆನಪಿನಂಗಳದಲ್ಲಿ ಗಾಜನೂರು

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ  ಏಪ್ರಿಲ್ ೧೨, ೨೦೦೬. ಶಿವರಾಜಕುಮಾರ್ ಅಭಿನಯದ ‘ಕುಮಾರ ರಾಮ; ಚಿತ್ರದ ಚಿತ್ರೀಕರಣ. ಭಾರ್ಗವ ನಿರ್ದೇಶಕರು. ಹಂಪಿಯಲ್ಲಿ…

2 hours ago

ಎಸ್‌ಎಸ್‌ಎಲ್‌ಸಿ ಫಲಿತಾಂಶ; ಕೊಡಗಿಗೆ 8ನೇ ಸ್ಥಾನ

ನವೀನ್ ಡಿಸೋಜ ಮಡಿಕೇರಿ: ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಳೆದ ಬಾರಿ ನಾಲ್ಕನೇ ಸ್ಥಾನದಲ್ಲಿದ್ದ ಕೊಡಗು ಈ ಬಾರಿ ೮ನೇ…

2 hours ago