ಮೈಸೂರು: ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಸೋಮವಾರ ಹುಣಸೂರು, ಕೆ.ಆರ್.ನಗರ ಹಾಗೂ ಪಿರಿಯಾಪಟ್ಟಣ ತಾಲೂಕಿನಲ್ಲಿ ವಾಸಿಸುತ್ತಿರುವ ಅಲೆಮಾರಿ ದೊಂಬರ ಸಮುದಾಯ, ಹಂದಿಜೋಗಿ, ಡೊಂಗ್ರಿ ಗರಾಸಿಯಾ, ಜೇನು ಕುರುಬ ಹಾಗೂ ಸೋಲಿಗ ಸಮುದಾಯದವರ ಕುಂದು-ಕೊರತೆಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಎಸ್.ಸಿ, ಎಸ್.ಟಿ ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹತ್ತಾರು ಯೋಜನೆಗಳನ್ನು ನೀಡಿದೆ. ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದಕ್ಕಾಗಿ ಶಿಕ್ಷಣ ಪಡೆದುಕೊಳ್ಳಬೇಕು. ವಸತಿ ಶಾಲೆಗಳಲ್ಲಿ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದೆ ಶಾಲೆಗೆ ಸೇರಿಸಿಕೊಳ್ಳುವ ಅವಕಾಶ ನೀಡಿದ್ದು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೊದಲ ಬಾರಿ ಸಿಎಂ ಆಗಿದ್ದಾಗಲೇ ಅಲೆಮಾರಿ ಸಮುದಾಯಗಳನ್ನು ಮೇಲೆತ್ತುವ ಸಲುವಾಗಿ ಅಲೆಮಾರಿ ಕೋಶ ಮಾಡಿ, ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದ್ದು, ರಕ್ಷಣೆ ನೀಡುತ್ತಿದೆ. ದೌರ್ಜನ್ಯಗಳು ನಡೆದರೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ, ಪೊಲೀಸರಿಗೆ, ನಿಗಮಕ್ಕೆ ಮಾಹಿತಿ ನೀಡುವಂತೆ ಹೇಳಿದರು.
ಮೈಸೂರು ಪ್ರವಾಸ ವೇಳೆ ಅಲೆಮಾರಿಗಳ ಸಮುದಾಯಗಳಿಂದ ಸಮುದಾಯಗಳಿಂದ ಸಮಸ್ಯೆಗಳನ್ನು ಆಲಿಸಿದ ಅವರು ಹುಣಸೂರು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದ ದೊಂಬರ ಕಾಲೋನಿಯಲ್ಲಿ ೨೨ ಕುಟುಂಬಗಳಿದ್ದು, ೫೦ ವರ್ಷಗಳ ನಂತರ ಮನೆ ಹಕ್ಕು ಪತ್ರ ನೀಡಲಾಗಿದೆ. ಸ್ಮಶಾನವಿಲ್ಲದೆ ಅಂತ್ಯಕ್ರಿಯೆ ನಡೆಸಲು ಪರದಾಡುತಿದ್ದೇವೆ. ರಸ್ತೆ-ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಯಿತು.
ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟ್(ಕೊಪ್ಪ ಸಮೀಪ) ಬಳಿ ವಾಸವಿರುವ ಜೇನು ಕುರುಬ ಮತ್ತು ಸೋಲಿಗ ಸಮುದಾಯದವರಿಂದಲೂ ಸಮಸ್ಯೆಗಳ ಮನವಿಯನ್ನು ಸ್ವೀಕರಿಸಲಾಯಿತು.
ಈ ವೇಳೆ ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯಾಧ್ಯಕ್ಷ ಶಿವಾನಂದ ಎಂ.ಭಜಂತ್ರಿ, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಆನಂದ್ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ರಂಗಸ್ವಾಮಿ, ನೌಕರರ ಘಟಕದ ಎನ್.ರವಿಕುಮಾರ್, ದಸಂಸ ಮುಖಂಡ ನಿಂಗರಾಜ್ ಮಲ್ನಾಡಿ, ಮೈಸೂರು ಜಿಲ್ಲಾ ಕುಳುವ ಮಹಾಸಂಘದ ಅಧ್ಯಕ್ಷ ಮುತ್ತುರಾಜ್, ಎಸ್ಸಿ, ಎಸ್ಟಿ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯ ರವಿಕುಮಾರ್ ಎನ್.ಕೊಡಗಳ್ಳಿ, ಪ್ರಧಾನ ಕಾರ್ಯದರ್ಶಿ ಮೋಹನ್ ಕಾಯಕ, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಸತ್ಯನಾರಾಯಣ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.
ನಾಳೆಯಿಂದ ಬಿಜೆಪಿ ಪ್ರತಿಭಟನೆ: ಸಂಸದರ ಮಾಹಿತಿ ಮೈಸೂರು : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕುರಿತ ಅವಹೇಳನಕಾರಿ ವೀಡಿಯೋ ಮಾಡಿದವರ…
ಬೆಳಗಾವಿ : ಮುಂದಿನ ಮಾರ್ಚ್ನಿಂದ ಎರಡೂವರೆ ಸಾವಿರ ಮೆಗಾ ವ್ಯಾಟ್ ಸೌರಶಕ್ತಿ ವಿದ್ಯುತ್ ಸೇರ್ಪಡೆಯಾಗುತ್ತಿದ್ದು, ಗೃಹ ಬಳಕೆ ಹಾಗೂ ಕೈಗಾರಿಕೆಗಳಿಗೆ…
ಬೆಳಗಾವಿ : ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ಕೈದಿಗಳಿಗೆ ರಾಜ್ಯಾಥಿತ್ಯ ಸೌಲಭ್ಯಗಳು ಸಿಗುತ್ತಿರುವ ಬಗ್ಗೆ ವಿಧಾನಪರಿಷತ್ನಲ್ಲಿ ಪ್ರಸ್ತಾಪವಾಯಿತು. ಶೂನ್ಯವೇಳೆಯಲ್ಲಿ ಸದಸ್ಯ ಧನಂಜಯ್…
ಬೆಂಗಳೂರು : ನಟ ದರ್ಶನ್ ಅವರ ಅನುಪಸ್ಥಿತಿಯಲ್ಲಿ ದಿ ಡೆವಿಲ್ ಸಿನಿಮಾ ಬಿಡುಗಡೆ ಮಾಡಲಾಗಿದೆ. ಈ ಸಿನಿಮಾವನ್ನು ಅಭಿಮಾನಿಗಳು, ದರ್ಶನ್…
ಬೆಳಗಾವಿ : ರಾಜ್ಯದಲ್ಲಿ ಹೊಸ ಶಾಲಾ ಕೊಠಡಿಗಳ ನಿರ್ಮಾಣಕ್ಕೆ 360 ಕೋಟಿ ರೂ. ಬಿಡುಗಡೆ ಮಾಡಲಾಗುವುದು ಎಂದು ಶಾಲಾ ಶಿಕ್ಷಣ…
ಬೆಳಗಾವಿ : ರಾಜ್ಯದಲ್ಲಿ ಹೊಸ ತಾಲ್ಲೂಕುಗಳಲ್ಲಿ ಸದ್ಯಕ್ಕೆ ತಾಲ್ಲೂಕು ಮಟ್ಟದ ಆಸ್ಪತ್ರೆಗಳ ಮಂಜೂರಾತಿ ಇಲ್ಲ ಎಂದು ಆರೋಗ್ಯ ಮತ್ತು ಕುಟುಂಬ…