ಮೈಸೂರು

ಮೈಸೂರು: ಎಸ್‌ಸಿ, ಎಸ್‌ಟಿ ಅಲೆಮಾರಿ ನಿಗಮ ಅಧ್ಯಕ್ಷರಿಂದ ಅಹವಾಲು ಸ್ವೀಕಾರ

ಮೈಸೂರು:  ಜಿಲ್ಲೆಯಲ್ಲಿ ಮೂರು ದಿನಗಳ ಪ್ರವಾಸ ಕೈಗೊಂಡಿರುವ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಜಿ.ಪಲ್ಲವಿ, ಸೋಮವಾರ ಹುಣಸೂರು, ಕೆ.ಆರ್.ನಗರ ಹಾಗೂ ಪಿರಿಯಾಪಟ್ಟಣ ತಾಲೂಕಿನಲ್ಲಿ ವಾಸಿಸುತ್ತಿರುವ ಅಲೆಮಾರಿ ದೊಂಬರ ಸಮುದಾಯ, ಹಂದಿಜೋಗಿ, ಡೊಂಗ್ರಿ ಗರಾಸಿಯಾ, ಜೇನು ಕುರುಬ ಹಾಗೂ ಸೋಲಿಗ ಸಮುದಾಯದವರ ಕುಂದು-ಕೊರತೆಗಳನ್ನು ಆಲಿಸಿ, ಸಮಸ್ಯೆಗಳನ್ನು ಬಗೆಹರಿಸುವ ಭರವಸೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಎಸ್‌.ಸಿ, ಎಸ್‌.ಟಿ ಅಲೆಮಾರಿ ಸಮುದಾಯಗಳ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹತ್ತಾರು ಯೋಜನೆಗಳನ್ನು ನೀಡಿದೆ. ಸರ್ಕಾರ ಯೋಜನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳುವುದಕ್ಕಾಗಿ ಶಿಕ್ಷಣ ಪಡೆದುಕೊಳ್ಳಬೇಕು. ವಸತಿ ಶಾಲೆಗಳಲ್ಲಿ ಯಾವುದೇ ಪ್ರವೇಶ ಪರೀಕ್ಷೆ ಇಲ್ಲದೆ ಶಾಲೆಗೆ ಸೇರಿಸಿಕೊಳ್ಳುವ ಅವಕಾಶ ನೀಡಿದ್ದು ಸದ್ಬಳಕೆ ಮಾಡಿಕೊಳ್ಳುವಂತೆ ತಿಳಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮೊದಲ ಬಾರಿ ಸಿಎಂ ಆಗಿದ್ದಾಗಲೇ ಅಲೆಮಾರಿ ಸಮುದಾಯಗಳನ್ನು ಮೇಲೆತ್ತುವ ಸಲುವಾಗಿ ಅಲೆಮಾರಿ ಕೋಶ ಮಾಡಿ, ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರ ಬಡವರ ಪರವಾಗಿದ್ದು, ರಕ್ಷಣೆ ನೀಡುತ್ತಿದೆ. ದೌರ್ಜನ್ಯಗಳು ನಡೆದರೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳಿಗೆ, ಪೊಲೀಸರಿಗೆ, ನಿಗಮಕ್ಕೆ ಮಾಹಿತಿ ನೀಡುವಂತೆ ಹೇಳಿದರು.

ಮೈಸೂರು ಪ್ರವಾಸ ವೇಳೆ ಅಲೆಮಾರಿಗಳ ಸಮುದಾಯಗಳಿಂದ ಸಮುದಾಯಗಳಿಂದ ಸಮಸ್ಯೆಗಳನ್ನು ಆಲಿಸಿದ ಅವರು ಹುಣಸೂರು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದ ದೊಂಬರ ಕಾಲೋನಿಯಲ್ಲಿ ೨೨ ಕುಟುಂಬಗಳಿದ್ದು, ೫೦ ವರ್ಷಗಳ ನಂತರ ಮನೆ ಹಕ್ಕು ಪತ್ರ ನೀಡಲಾಗಿದೆ. ಸ್ಮಶಾನವಿಲ್ಲದೆ ಅಂತ್ಯಕ್ರಿಯೆ ನಡೆಸಲು ಪರದಾಡುತಿದ್ದೇವೆ. ರಸ್ತೆ-ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಕೂಡಲೇ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಲಾಯಿತು.

ಪಿರಿಯಾಪಟ್ಟಣ ತಾಲೂಕಿನ ರಾಣಿ ಗೇಟ್(ಕೊಪ್ಪ ಸಮೀಪ) ಬಳಿ ವಾಸವಿರುವ ಜೇನು ಕುರುಬ ಮತ್ತು ಸೋಲಿಗ ಸಮುದಾಯದವರಿಂದಲೂ ಸಮಸ್ಯೆಗಳ ಮನವಿಯನ್ನು ಸ್ವೀಕರಿಸಲಾಯಿತು.

ಈ ವೇಳೆ ಅಖಿಲ ಕರ್ನಾಟಕ ಕುಳುವ ಮಹಾಸಂಘದ ರಾಜ್ಯಾಧ್ಯಕ್ಷ ಶಿವಾನಂದ ಎಂ.ಭಜಂತ್ರಿ, ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಸ್.ಆನಂದ್‌ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ರಂಗಸ್ವಾಮಿ, ನೌಕರರ ಘಟಕದ ಎನ್.ರವಿಕುಮಾರ್, ದಸಂಸ ಮುಖಂಡ ನಿಂಗರಾಜ್ ಮಲ್ನಾಡಿ, ಮೈಸೂರು ಜಿಲ್ಲಾ ಕುಳುವ ಮಹಾಸಂಘದ ಅಧ್ಯಕ್ಷ ಮುತ್ತುರಾಜ್, ಎಸ್‌ಸಿ, ಎಸ್‌ಟಿ ಜಿಲ್ಲಾ ಅನುಷ್ಠಾನ ಸಮಿತಿ ಸದಸ್ಯ ರವಿಕುಮಾರ್ ಎನ್.ಕೊಡಗಳ್ಳಿ, ಪ್ರಧಾನ ಕಾರ್ಯದರ್ಶಿ ಮೋಹನ್ ಕಾಯಕ, ಪಿರಿಯಾಪಟ್ಟಣ ತಾಲೂಕು ಅಧ್ಯಕ್ಷ ಸತ್ಯನಾರಾಯಣ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಾರ್ಮುಜ್ ಮೇಲೆ ಅಮೆರಿಕ ಸಂಪೂರ್ಣ ಹಿಡಿತ ; ಟ್ರಂಪ್ ಹೇಳಿಕೆಯಿಂದ ವಾಸ್ತವ ಬದಲಾಗಲ್ಲ : ಇರಾನ್ ತಿರುಗೇಟು

ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…

6 hours ago

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

8 hours ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

9 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

11 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

16 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

23 hours ago