ಮೈಸೂರು: ಕೇರಳದ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ಕಾರು, ಹಣ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕೇರಳ ಮೂಲದ ಅಶ್ವಿನ್ ಎಂಬುವವನೇ ಬಂಧಿತ ಆರೋಪಿಯಾಗಿದ್ದಾನೆ. ಈಗಾಗಲೇ ಘಟನೆ ಸಂಬಂಧ ಪ್ರಮೋದ್ ಹಾಗೂ ಕಣ್ಣನ್ ಎಂಬುವವರನ್ನು ಬಂಧಿಸಿರುವ ಪೊಲೀಸರು ಇದೀಗ ಕೇರಳ ಮೂಲದ ಮತ್ತೊಬ್ಬ ಆರೋಪಿ ಅಶ್ವಿನ್ ಎಂಬಾತನನ್ನು ಬಂಧಿಸಿದ್ದಾರೆ.
ಮೈಸೂರು ತಾಲ್ಲೂಕಿನ ಗುಜ್ಜೇಗೌಡನಪುರ ಗ್ರಾಮದ ಬಳಿ ನಡೆದಿದ್ದ ದರೋಡೆಯಲ್ಲಿ ಮುಸುಕುಧಾರಿಗಳ ತಂಡವೊಂದು ಕೇರಳ ವ್ಯಾಪಾರಿ ಮಹಮ್ಮದ್ ಅಶ್ರಫ್ ಎಂಬುವವರ ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದರು. ಇದಲ್ಲದೇ ಕಾರಿನೊಂದಿಗೆ 1.50 ಲಕ್ಷ ಹಣ ದರೋಡೆ ಮಾಡಿ ಪರಾರಿಯಾಗಿದ್ದರು.
ಪ್ರಕರಣ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣದ ಪ್ರಮುಖ ಆರೋಪಿ ಒಬ್ಬನನ್ನು ಬಂಧಿಸಲಾಗಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…