ಮೈಸೂರು: ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರದಲ್ಲಿ ಕೇರಳ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣದಲ್ಲಿ ಕೇರಳ ಮೂಲದ ಅಲ್ವಿನ್ (26)ನ್ನು ಭಾನುವಾರ ತಡರಾತ್ರಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
‘ಅಲ್ವಿನ್ ಕೃತ್ಯದಲ್ಲಿ ಭಾಗವಹಿಸಿದ ವ್ಯಕ್ತಿ. ಈ ಹಿಂದೆ ಆರೋಪಿಗಳಿಗೆ ಕಾರು ಒದಗಿಸಿದ ಪ್ರಮೋದ್ ಹಾಗೂ ಕಣ್ಣನ್ನ್ನು ಬಂಧಿಸಿದ್ದೆವು. ಈತನ ಬಂಧನದಿಂದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಉಳಿದ ಆರೋಪಿಗಳನ್ನು ನಮ್ಮ ತಂಡ ಶೀಘ್ರ ಬಂಧಿಸಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಮುಸುಕುಧಾರಿಗಳ ತಂಡ ಕೇರಳ ವ್ಯಾಪಾರಿ ಮಹಮ್ಮದ್ ಅಶ್ರಫ್ ಕಾರು ಅಡ್ಡಗಟ್ಟಿ, ಅಶ್ರಫ್ ಮತ್ತು ಕಾರು ಚಾಲಕ ಸೂಫಿ ಮೇಲೆ ಹಲ್ಲೆ ನಡೆಸಿ ಕಾರಿನೊಂದಿಗೆ 1.50 ಲಕ್ಷ ರೂ. ಹಣ ಕಸಿದು ಪರಾರಿಯಾಗಿತ್ತು. ಸಂಜೆ ವ್ಯಾಪಾರಿಯ ಕಾರು ಮತ್ತು ಆರೋಪಿಗಳ ಕಾರು ಪತ್ತೆಯಾಗಿತ್ತು.
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…
ಬೆಂಗಳೂರು : ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ (HSRP) ಅಳವಡಿಸುವುದು ಇನ್ನು ಮುಂದೆ ಕಡ್ಡಾಯವಿರುವುದಿಲ್ಲ ಎಂದು ಕರ್ನಾಟಕ…
ಮಡಿಕೇರಿ : ಕೊಡಗು ಜಿಲ್ಲೆಯ ಅತ್ಯುನ್ನತ ಶಿಖರವಾದ ತಾಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್ ಮಾಡಲು ಹೊರಟಿದ್ದ 36 ವರ್ಷದ ಮಹಿಳೆ ಶರಣ್ಯ…