ಮೈಸೂರು: ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರದಲ್ಲಿ ಕೇರಳ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣದಲ್ಲಿ ಕೇರಳ ಮೂಲದ ಅಲ್ವಿನ್ (26)ನ್ನು ಭಾನುವಾರ ತಡರಾತ್ರಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
‘ಅಲ್ವಿನ್ ಕೃತ್ಯದಲ್ಲಿ ಭಾಗವಹಿಸಿದ ವ್ಯಕ್ತಿ. ಈ ಹಿಂದೆ ಆರೋಪಿಗಳಿಗೆ ಕಾರು ಒದಗಿಸಿದ ಪ್ರಮೋದ್ ಹಾಗೂ ಕಣ್ಣನ್ನ್ನು ಬಂಧಿಸಿದ್ದೆವು. ಈತನ ಬಂಧನದಿಂದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಉಳಿದ ಆರೋಪಿಗಳನ್ನು ನಮ್ಮ ತಂಡ ಶೀಘ್ರ ಬಂಧಿಸಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಮುಸುಕುಧಾರಿಗಳ ತಂಡ ಕೇರಳ ವ್ಯಾಪಾರಿ ಮಹಮ್ಮದ್ ಅಶ್ರಫ್ ಕಾರು ಅಡ್ಡಗಟ್ಟಿ, ಅಶ್ರಫ್ ಮತ್ತು ಕಾರು ಚಾಲಕ ಸೂಫಿ ಮೇಲೆ ಹಲ್ಲೆ ನಡೆಸಿ ಕಾರಿನೊಂದಿಗೆ 1.50 ಲಕ್ಷ ರೂ. ಹಣ ಕಸಿದು ಪರಾರಿಯಾಗಿತ್ತು. ಸಂಜೆ ವ್ಯಾಪಾರಿಯ ಕಾರು ಮತ್ತು ಆರೋಪಿಗಳ ಕಾರು ಪತ್ತೆಯಾಗಿತ್ತು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…