ಮೈಸೂರು: ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರದಲ್ಲಿ ಕೇರಳ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣದಲ್ಲಿ ಕೇರಳ ಮೂಲದ ಅಲ್ವಿನ್ (26)ನ್ನು ಭಾನುವಾರ ತಡರಾತ್ರಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
‘ಅಲ್ವಿನ್ ಕೃತ್ಯದಲ್ಲಿ ಭಾಗವಹಿಸಿದ ವ್ಯಕ್ತಿ. ಈ ಹಿಂದೆ ಆರೋಪಿಗಳಿಗೆ ಕಾರು ಒದಗಿಸಿದ ಪ್ರಮೋದ್ ಹಾಗೂ ಕಣ್ಣನ್ನ್ನು ಬಂಧಿಸಿದ್ದೆವು. ಈತನ ಬಂಧನದಿಂದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಉಳಿದ ಆರೋಪಿಗಳನ್ನು ನಮ್ಮ ತಂಡ ಶೀಘ್ರ ಬಂಧಿಸಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಮುಸುಕುಧಾರಿಗಳ ತಂಡ ಕೇರಳ ವ್ಯಾಪಾರಿ ಮಹಮ್ಮದ್ ಅಶ್ರಫ್ ಕಾರು ಅಡ್ಡಗಟ್ಟಿ, ಅಶ್ರಫ್ ಮತ್ತು ಕಾರು ಚಾಲಕ ಸೂಫಿ ಮೇಲೆ ಹಲ್ಲೆ ನಡೆಸಿ ಕಾರಿನೊಂದಿಗೆ 1.50 ಲಕ್ಷ ರೂ. ಹಣ ಕಸಿದು ಪರಾರಿಯಾಗಿತ್ತು. ಸಂಜೆ ವ್ಯಾಪಾರಿಯ ಕಾರು ಮತ್ತು ಆರೋಪಿಗಳ ಕಾರು ಪತ್ತೆಯಾಗಿತ್ತು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…