ಮೈಸೂರು: ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರದಲ್ಲಿ ಕೇರಳ ವ್ಯಾಪಾರಿಯ ಕಾರನ್ನು ಅಡ್ಡಗಟ್ಟಿ ದರೋಡೆ ಮಾಡಿದ ಪ್ರಕರಣದಲ್ಲಿ ಕೇರಳ ಮೂಲದ ಅಲ್ವಿನ್ (26)ನ್ನು ಭಾನುವಾರ ತಡರಾತ್ರಿ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.
‘ಅಲ್ವಿನ್ ಕೃತ್ಯದಲ್ಲಿ ಭಾಗವಹಿಸಿದ ವ್ಯಕ್ತಿ. ಈ ಹಿಂದೆ ಆರೋಪಿಗಳಿಗೆ ಕಾರು ಒದಗಿಸಿದ ಪ್ರಮೋದ್ ಹಾಗೂ ಕಣ್ಣನ್ನ್ನು ಬಂಧಿಸಿದ್ದೆವು. ಈತನ ಬಂಧನದಿಂದ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಉಳಿದ ಆರೋಪಿಗಳನ್ನು ನಮ್ಮ ತಂಡ ಶೀಘ್ರ ಬಂಧಿಸಲಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.
ತಾಲ್ಲೂಕಿನ ಜಯಪುರ ಹೋಬಳಿಯ ಗುಜ್ಜೇಗೌಡನಪುರ ಗ್ರಾಮದಲ್ಲಿ ಸೋಮವಾರ ಬೆಳಿಗ್ಗೆ ಮುಸುಕುಧಾರಿಗಳ ತಂಡ ಕೇರಳ ವ್ಯಾಪಾರಿ ಮಹಮ್ಮದ್ ಅಶ್ರಫ್ ಕಾರು ಅಡ್ಡಗಟ್ಟಿ, ಅಶ್ರಫ್ ಮತ್ತು ಕಾರು ಚಾಲಕ ಸೂಫಿ ಮೇಲೆ ಹಲ್ಲೆ ನಡೆಸಿ ಕಾರಿನೊಂದಿಗೆ 1.50 ಲಕ್ಷ ರೂ. ಹಣ ಕಸಿದು ಪರಾರಿಯಾಗಿತ್ತು. ಸಂಜೆ ವ್ಯಾಪಾರಿಯ ಕಾರು ಮತ್ತು ಆರೋಪಿಗಳ ಕಾರು ಪತ್ತೆಯಾಗಿತ್ತು.
ಬೆಂಗಳೂರು: ಉಗಾಂಡಾದಿಂದ ಬಂದಿದ್ದ ಮಹಿಳೆಯಲ್ಲಿ ಎಬೋಲಾ ಸೋಂಕಿನ ಲಕ್ಷಣಗಳು ಪತ್ತೆಯಾಗಿದ್ದು, ಆಕೆಯನ್ನು ಪ್ರತ್ಯೇಕ ವಾರ್ಡ್ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸೋಂಕು ದೃಢೀಕರಣಕ್ಕಾಗಿ…
ತಿರುವನಂತಪುರ: ಸಿಎಂಆರ್ಎಲ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…
ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯುವ…
ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…
ಬ್ಯೂಟಿ ಪಾರ್ಲರ್ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…
ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ ಹಿಡಿದ…