ಮೈಸೂರು: ಇಲ್ಲಿನ ಕುವೆಂಪುನಗರದ ವಿಜಯ್ ಬ್ಯಾಂಕ್ ವೃತ್ತ ಸಮೀಪದ ವಿಶ್ವನಂದನ ಉದ್ಯಾನದ ಬಳಿ ಗುರುವಾರ ಮುಂಜಾನೆ ಚಿರತೆ ಕಾಣಿಸಿಕೊಂಡ ವದಂತಿ ಕಾರಣ, ಚಿರತೆ ಕಾರ್ಯಪಡೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು.
ವಿಶ್ವನಂದನ ಪಾರ್ಕ್ನಲ್ಲಿ ಚಿರತೆ ಕಂಡುಬಂದ ಹಿನ್ನೆಲೆ ಪಾರ್ಕ್ಗೆ ಮುಖ್ಯದ್ವಾರಕ್ಕೆ ಬೀಗ ಜಡಿಯಲಾಗಿದೆ. ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದ್ದು, ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆ ಸಿಬ್ಬಂದಿಗಳು ಕಾರ್ಯಾಚರಣೆಗೆ ಮುಂದಾಗಿದ್ದಾರೆ.
ಬೆಳಿಗ್ಗೆ 7 ಗಂಟೆಗೆ ಧಾವಿಸಿದ ಕಾರ್ಯಪಡೆ ಸಿಬ್ಬಂದಿ ಗಂಟೆಗೂ ಹೆಚ್ಚು ಕಾಲ ಪರಿಶೀಲಿಸಿದರು.
ಹೆಚ್ಚೆ ಗುರುತು, ಸುಳಿವು ಪತ್ತೆ ಆಗಿಲ್ಲ. ಉದ್ಯಾನದ ಸುತ್ತಮುತ್ತಲ ಮನೆಗಳ ಸಿಸಿಟಿವಿ ಕ್ಯಾಮೆರಾಗಳನ್ನು ನೋಡಲಾಗುವುದು. ಕಂಡು ಬಂದಿದ್ದರೆ, ಮತ್ತೆ ಬಂದು ಪರಿಶೀಲಿಸುತ್ತೇವೆ ಎಂದು ಕಾರ್ಯಪಡೆ ಸಿಬ್ಬಂದಿಯೊಬ್ಬರು ತಿಳಿಸಿದರು.
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…
ಡಾ.ಪ್ರಮೀಳಾದೇವಿ ಬಿ.ಕೆ. ಮಹಾತ್ಮಗಾಂಧಿ ಇಂಗ್ಲೆಂಡಿನಲ್ಲಿದ್ದಾಗಲೂ, ಅಲ್ಲಿಂದ ಹಿಂತಿರುಗಿದಾಗ, ಮತ್ತು ಆರಂಭದ ದಿನಗಳಲ್ಲಿ ಅವರು ಎಲ್ಲಾ ವಿದ್ಯಾವಂತರಂತೆ ಬೆಲೆಬಾಳುವ ಸೂಟುಬೂಟು…
ಶಾಕಾಹಾರದಲ್ಲಿ ದಿನದಿನಕ್ಕೂ ನನ್ನ ನಂಬಿಕೆ ಹೆಚ್ಚುತ್ತಲೇ ಹೋಯಿತು. ಸಾಲ್ಟ್ರ ಗ್ರಂಥದ ವ್ಯಾಸಂಗದಿಂದ, ಆಹಾರದ ವಿಷಯಕ್ಕೆ ಸಂಬಂಧಿಸಿದ ಗ್ರಂಥಗಳನ್ನು ಅಭ್ಯಾಸ ಮಾಡಲು…