ಮೈಸೂರು

ಮೈಸೂರು: ವಿಜೃಂಭಣೆಯಿಂದ ನಡೆದ ಸುತ್ತೂರು ಶಿವರಾತ್ರೀಶ್ವರ ರಥೋತ್ಸವ

ಮೈಸೂರು/ಸುತ್ತೂರು : ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಅಪಾರ ಭಕ್ತರ ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ ಗುರುವಾರ ಬೆಳಿಗ್ಗೆ ಅದ್ದೂರಿಯಾಗಿ ನಡೆಯಿತು.

ಗ್ರಾಮದ ಕತೃಗದ್ದುಗೆ ಆವರಣದಲ್ಲಿ ಸೇರದ್ದ ಭಕ್ತ ಸಮೂಹ ರಥದ ಮಿಣಿಯನ್ನು ಎಳೆದು, ರಥಕ್ಕೆ ಹಣ್ಣು-ಜವನ ಎಸೆದು, ಹರಕೆ ಕಾರ್ಯ ನೆರವೇರಿಸಿದ ಭಕ್ತರು ದೇವರಿಗೆ ನಮಿಸಿದರು.

ಬೆಳಿಗ್ಗೆ 4ಕ್ಕೆ ಕರ್ತೃ ಗದ್ದುಗೆಯನ್ನು ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. 6 ಗಂಟೆಗೆ ಮಠದ ಗುರು ಪರಂಪರೆಯ ಸಂಸ್ಮರಣೋತ್ಸವ ಹಾಗೂ ಗದ್ದುಗೆಗೆ ರುದ್ರಾಭಿಷೇಕ ನೆರವೇರಿಸಲಾಯಿತು.

ಬೆಳಿಗ್ಗೆ 9ಕ್ಕೆ ಉತ್ಸವ ಮೂರ್ತಿಗೆ ರಾಜೋಪಚಾರ ನಡೆಯಿತು. 10.30 ಗಂಟೆಗೆ ಶಿವಯೋಗಿಗಳ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಅದಕ್ಕೆ ಅರ್ಚಕರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಬೆಳಿಗ್ಗೆ 10.55ಕ್ಕೆ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ಮಂಕಾಳ ಎಸ್. ವೈದ್ಯ, ಬಿ.ಎಸ್.ಯಡಿಯೂರಪ್ಪ, ಮುರುಗೇಶ್ ನಿರಾಣಿ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ರಥದ ಮಿಣಿ ಎಳೆದು ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ 21 ಕುಶಾಲತೋಪುಗಳು ಸಿಡಿದವು. ಇದರೊಂದಿಗೆ ಭಕ್ತರ ಜಯಘೋಷ ಮುಗಿಲುಮುಟ್ಟಿತ್ತು.

ಜಾನಪದ ಕಲಾತಂಡಗಳು, ತಮಟೆ, ನಗಾರಿ ವಾದ್ಯಗಳ ನಾದಗಳೊಂದಿಗೆ ಪುಷ್ಪಾಲಂಕೃತ ರಥವು ಕ್ರಮಿಸಿತು. ಭಕ್ತರ ಹರ್ಷ ಮುಗಿಲುಮುಟ್ಟಿತು.

ಸುತ್ತೂರು ಮೂಲಮಠದವರೆಗೂ ಭಕ್ತರು ರಥದೊಂದಿಗೆ ಹೆಜ್ಜೆ ಹಾಕಿದರು. ದೊಡ್ಡಮ್ಮತಾಯಿ ದೇವಸ್ಥಾನದ ವೃತ್ತ ಬಳಸಿ ಕತೃಗದ್ದುಗೆಗೆ ರಥ ಮರಳಿತು.

ಗಮನಸೆಳೆದ ಕಲಾತಂಡಗಳು: ರಥೋತ್ಸವದ ಮೆರವಣಿಗೆಯಲ್ಲಿ 35 ಕಲಾತಂಡಗಳು ಹೆಜ್ಜೆ ಹಾಕಿದವು. ನಂದಿಧ್ವಜ ಕುಣಿತ, ನಗಾರಿ, ವೀರಭದ್ರನ ವೇಷ, ಲಿಂಗಧೀರರ ನೃತ್ಯ, ನಾದಸ್ವರ, ಸ್ಯಾಕ್ಟೋಪೋನ್ ವಾದನ, ಸುತ್ತೂರು ಉಚಿತ ಶಾಲೆಯ ಮಕ್ಕಳ ವೀರಗಾಸೆ, ಪೂಜಾಕುಣಿತ, ಗಾರುಡಿ ಗೊಂಬೆಗಳು, ಡೊಳ್ಳು ಕುಣಿತ, ತಮಟೆ-ನಗಾರಿ, ಗೊರವರ ಕುಣಿತ, ಕೋಲಾಟ, ಕಂಸಾಳೆ, ಪಟದ ಕುಣಿತ, ದೊಣ್ಣೆ ವರಸೆ, ಮರಗಾಲು, ಕಾನಪಥಕ್‌ ಜನರನ್ನು ಮೋಡಿ ಮಾಡಿತು.

ಇದರೊಂದಿಗೆ ತಮಿಳುನಾಡಿನ ಮುರುಗನ್ ತಂಡದ ಕೋಲಾಟಂ, ಕರಗಟ್ಟಂ, ಕಾವಾಡಿಯಾಟಂ ರಥೋತ್ಸವದಲ್ಲಿ ಜನರನ್ನು ಆಕರ್ಷಿಸಿದವು.

andolanait

Recent Posts

ಓದುಗರ ಪತ್ರ: ಮೇಕೆ.. ಡಿಕೆ !

ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…

15 hours ago

ಓದುಗರ ಪತ್ರ: ಮಂತ್ರಾಲಯ ಮಠದ ಕಾರ್ಯ ಜನಮೆಚ್ಚುವಂತಹದ್ದು

ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…

15 hours ago

ಓದುಗರ ಪತ್ರ: ಕಾವೇರಿ: ಶಾಶ್ವತ ಪರಿಹಾರ ಅಗತ್ಯ

ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…

15 hours ago

ಕಾಯಕಲ್ಪಕ್ಕೆ ಕಾದಿವೆ ನಿರ್ಲಕ್ಷಿತ ಸರ್ಕಾರಿ ಆಸ್ತಿಗಳು

ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…

15 hours ago

ಮೀಸಲಾತಿ ಸೌಲಭ್ಯಕ್ಕೆ ವಿರೋಧವೇಕೆ?

ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…

15 hours ago

ಬಿರುಕು ಬಿಡುತ್ತಿರುವ ಕೆರೆ ಕೋಡಿಯ ಗೋಡೆ

ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…

18 hours ago