ಮೈಸೂರು

ಮೈಸೂರು: ವಿಜೃಂಭಣೆಯಿಂದ ನಡೆದ ಸುತ್ತೂರು ಶಿವರಾತ್ರೀಶ್ವರ ರಥೋತ್ಸವ

ಮೈಸೂರು/ಸುತ್ತೂರು : ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಅಪಾರ ಭಕ್ತರ ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ ಗುರುವಾರ ಬೆಳಿಗ್ಗೆ ಅದ್ದೂರಿಯಾಗಿ ನಡೆಯಿತು.

ಗ್ರಾಮದ ಕತೃಗದ್ದುಗೆ ಆವರಣದಲ್ಲಿ ಸೇರದ್ದ ಭಕ್ತ ಸಮೂಹ ರಥದ ಮಿಣಿಯನ್ನು ಎಳೆದು, ರಥಕ್ಕೆ ಹಣ್ಣು-ಜವನ ಎಸೆದು, ಹರಕೆ ಕಾರ್ಯ ನೆರವೇರಿಸಿದ ಭಕ್ತರು ದೇವರಿಗೆ ನಮಿಸಿದರು.

ಬೆಳಿಗ್ಗೆ 4ಕ್ಕೆ ಕರ್ತೃ ಗದ್ದುಗೆಯನ್ನು ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. 6 ಗಂಟೆಗೆ ಮಠದ ಗುರು ಪರಂಪರೆಯ ಸಂಸ್ಮರಣೋತ್ಸವ ಹಾಗೂ ಗದ್ದುಗೆಗೆ ರುದ್ರಾಭಿಷೇಕ ನೆರವೇರಿಸಲಾಯಿತು.

ಬೆಳಿಗ್ಗೆ 9ಕ್ಕೆ ಉತ್ಸವ ಮೂರ್ತಿಗೆ ರಾಜೋಪಚಾರ ನಡೆಯಿತು. 10.30 ಗಂಟೆಗೆ ಶಿವಯೋಗಿಗಳ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಅದಕ್ಕೆ ಅರ್ಚಕರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಬೆಳಿಗ್ಗೆ 10.55ಕ್ಕೆ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ಮಂಕಾಳ ಎಸ್. ವೈದ್ಯ, ಬಿ.ಎಸ್.ಯಡಿಯೂರಪ್ಪ, ಮುರುಗೇಶ್ ನಿರಾಣಿ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ರಥದ ಮಿಣಿ ಎಳೆದು ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ 21 ಕುಶಾಲತೋಪುಗಳು ಸಿಡಿದವು. ಇದರೊಂದಿಗೆ ಭಕ್ತರ ಜಯಘೋಷ ಮುಗಿಲುಮುಟ್ಟಿತ್ತು.

ಜಾನಪದ ಕಲಾತಂಡಗಳು, ತಮಟೆ, ನಗಾರಿ ವಾದ್ಯಗಳ ನಾದಗಳೊಂದಿಗೆ ಪುಷ್ಪಾಲಂಕೃತ ರಥವು ಕ್ರಮಿಸಿತು. ಭಕ್ತರ ಹರ್ಷ ಮುಗಿಲುಮುಟ್ಟಿತು.

ಸುತ್ತೂರು ಮೂಲಮಠದವರೆಗೂ ಭಕ್ತರು ರಥದೊಂದಿಗೆ ಹೆಜ್ಜೆ ಹಾಕಿದರು. ದೊಡ್ಡಮ್ಮತಾಯಿ ದೇವಸ್ಥಾನದ ವೃತ್ತ ಬಳಸಿ ಕತೃಗದ್ದುಗೆಗೆ ರಥ ಮರಳಿತು.

ಗಮನಸೆಳೆದ ಕಲಾತಂಡಗಳು: ರಥೋತ್ಸವದ ಮೆರವಣಿಗೆಯಲ್ಲಿ 35 ಕಲಾತಂಡಗಳು ಹೆಜ್ಜೆ ಹಾಕಿದವು. ನಂದಿಧ್ವಜ ಕುಣಿತ, ನಗಾರಿ, ವೀರಭದ್ರನ ವೇಷ, ಲಿಂಗಧೀರರ ನೃತ್ಯ, ನಾದಸ್ವರ, ಸ್ಯಾಕ್ಟೋಪೋನ್ ವಾದನ, ಸುತ್ತೂರು ಉಚಿತ ಶಾಲೆಯ ಮಕ್ಕಳ ವೀರಗಾಸೆ, ಪೂಜಾಕುಣಿತ, ಗಾರುಡಿ ಗೊಂಬೆಗಳು, ಡೊಳ್ಳು ಕುಣಿತ, ತಮಟೆ-ನಗಾರಿ, ಗೊರವರ ಕುಣಿತ, ಕೋಲಾಟ, ಕಂಸಾಳೆ, ಪಟದ ಕುಣಿತ, ದೊಣ್ಣೆ ವರಸೆ, ಮರಗಾಲು, ಕಾನಪಥಕ್‌ ಜನರನ್ನು ಮೋಡಿ ಮಾಡಿತು.

ಇದರೊಂದಿಗೆ ತಮಿಳುನಾಡಿನ ಮುರುಗನ್ ತಂಡದ ಕೋಲಾಟಂ, ಕರಗಟ್ಟಂ, ಕಾವಾಡಿಯಾಟಂ ರಥೋತ್ಸವದಲ್ಲಿ ಜನರನ್ನು ಆಕರ್ಷಿಸಿದವು.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

5 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

5 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

5 hours ago