ಮೈಸೂರು

ಮೈಸೂರು: ವಿಜೃಂಭಣೆಯಿಂದ ನಡೆದ ಸುತ್ತೂರು ಶಿವರಾತ್ರೀಶ್ವರ ರಥೋತ್ಸವ

ಮೈಸೂರು/ಸುತ್ತೂರು : ಸುತ್ತೂರಿನ ಶಿವರಾತ್ರೀಶ್ವರ ಶಿವಯೋಗಿಗಳ ರಥೋತ್ಸವ ಅಪಾರ ಭಕ್ತರ ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ ಗುರುವಾರ ಬೆಳಿಗ್ಗೆ ಅದ್ದೂರಿಯಾಗಿ ನಡೆಯಿತು.

ಗ್ರಾಮದ ಕತೃಗದ್ದುಗೆ ಆವರಣದಲ್ಲಿ ಸೇರದ್ದ ಭಕ್ತ ಸಮೂಹ ರಥದ ಮಿಣಿಯನ್ನು ಎಳೆದು, ರಥಕ್ಕೆ ಹಣ್ಣು-ಜವನ ಎಸೆದು, ಹರಕೆ ಕಾರ್ಯ ನೆರವೇರಿಸಿದ ಭಕ್ತರು ದೇವರಿಗೆ ನಮಿಸಿದರು.

ಬೆಳಿಗ್ಗೆ 4ಕ್ಕೆ ಕರ್ತೃ ಗದ್ದುಗೆಯನ್ನು ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. 6 ಗಂಟೆಗೆ ಮಠದ ಗುರು ಪರಂಪರೆಯ ಸಂಸ್ಮರಣೋತ್ಸವ ಹಾಗೂ ಗದ್ದುಗೆಗೆ ರುದ್ರಾಭಿಷೇಕ ನೆರವೇರಿಸಲಾಯಿತು.

ಬೆಳಿಗ್ಗೆ 9ಕ್ಕೆ ಉತ್ಸವ ಮೂರ್ತಿಗೆ ರಾಜೋಪಚಾರ ನಡೆಯಿತು. 10.30 ಗಂಟೆಗೆ ಶಿವಯೋಗಿಗಳ ಉತ್ಸವಮೂರ್ತಿಯನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಅದಕ್ಕೆ ಅರ್ಚಕರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿದರು.

ಬೆಳಿಗ್ಗೆ 10.55ಕ್ಕೆ ಗೋವಾ ರಾಜ್ಯಪಾಲ ಶ್ರೀಧರನ್ ಪಿಳ್ಳೆ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಚಿವ ಮಂಕಾಳ ಎಸ್. ವೈದ್ಯ, ಬಿ.ಎಸ್.ಯಡಿಯೂರಪ್ಪ, ಮುರುಗೇಶ್ ನಿರಾಣಿ ಅವರು ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಿ, ರಥದ ಮಿಣಿ ಎಳೆದು ರಥೋತ್ಸವಕ್ಕೆ ಚಾಲನೆ ನೀಡುತ್ತಿದ್ದಂತೆ 21 ಕುಶಾಲತೋಪುಗಳು ಸಿಡಿದವು. ಇದರೊಂದಿಗೆ ಭಕ್ತರ ಜಯಘೋಷ ಮುಗಿಲುಮುಟ್ಟಿತ್ತು.

ಜಾನಪದ ಕಲಾತಂಡಗಳು, ತಮಟೆ, ನಗಾರಿ ವಾದ್ಯಗಳ ನಾದಗಳೊಂದಿಗೆ ಪುಷ್ಪಾಲಂಕೃತ ರಥವು ಕ್ರಮಿಸಿತು. ಭಕ್ತರ ಹರ್ಷ ಮುಗಿಲುಮುಟ್ಟಿತು.

ಸುತ್ತೂರು ಮೂಲಮಠದವರೆಗೂ ಭಕ್ತರು ರಥದೊಂದಿಗೆ ಹೆಜ್ಜೆ ಹಾಕಿದರು. ದೊಡ್ಡಮ್ಮತಾಯಿ ದೇವಸ್ಥಾನದ ವೃತ್ತ ಬಳಸಿ ಕತೃಗದ್ದುಗೆಗೆ ರಥ ಮರಳಿತು.

ಗಮನಸೆಳೆದ ಕಲಾತಂಡಗಳು: ರಥೋತ್ಸವದ ಮೆರವಣಿಗೆಯಲ್ಲಿ 35 ಕಲಾತಂಡಗಳು ಹೆಜ್ಜೆ ಹಾಕಿದವು. ನಂದಿಧ್ವಜ ಕುಣಿತ, ನಗಾರಿ, ವೀರಭದ್ರನ ವೇಷ, ಲಿಂಗಧೀರರ ನೃತ್ಯ, ನಾದಸ್ವರ, ಸ್ಯಾಕ್ಟೋಪೋನ್ ವಾದನ, ಸುತ್ತೂರು ಉಚಿತ ಶಾಲೆಯ ಮಕ್ಕಳ ವೀರಗಾಸೆ, ಪೂಜಾಕುಣಿತ, ಗಾರುಡಿ ಗೊಂಬೆಗಳು, ಡೊಳ್ಳು ಕುಣಿತ, ತಮಟೆ-ನಗಾರಿ, ಗೊರವರ ಕುಣಿತ, ಕೋಲಾಟ, ಕಂಸಾಳೆ, ಪಟದ ಕುಣಿತ, ದೊಣ್ಣೆ ವರಸೆ, ಮರಗಾಲು, ಕಾನಪಥಕ್‌ ಜನರನ್ನು ಮೋಡಿ ಮಾಡಿತು.

ಇದರೊಂದಿಗೆ ತಮಿಳುನಾಡಿನ ಮುರುಗನ್ ತಂಡದ ಕೋಲಾಟಂ, ಕರಗಟ್ಟಂ, ಕಾವಾಡಿಯಾಟಂ ರಥೋತ್ಸವದಲ್ಲಿ ಜನರನ್ನು ಆಕರ್ಷಿಸಿದವು.

andolanait

Recent Posts

ಮುಂಗಾರು ಮತ್ತೆ ಚುರುಕು ; ಮೈಸೂರು, ಮಂಡ್ಯ, ಕೊಡಗಿನಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…

6 hours ago

ಪರಿಷತ್‌ ಚುನಾವಣೆ : ಕಾಂಗ್ರೆಸ್‌ನ ಐವರು, ಬಿಜೆಪಿಯ ಇಬ್ಬರ ಗೆಲುವು,

ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್​​ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು…

9 hours ago

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

10 hours ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

12 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

12 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

17 hours ago