ಮೈಸೂರು

ಪ್ರಗತಿಯಲ್ಲಿ ಮೈಸೂರು ಮೊದಲಿರಬೇಕು : ಸಚಿವ ಮಹದೇವಪ್ಪ

ಮೈಸೂರು : ನಗರ, ಗ್ರಾಮೀಣ ಪ್ರದೇಶಗಳ ಜನರಿಗೆ ಅಧಿಕಾರಿಗಳು ಸ್ಪಂದಿಸುವ ಜತೆಗೆ ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.

ಜಿಲ್ಲಾ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮದ ಪ್ರಾರಂಭದಲ್ಲಿ ಮಾತನಾಡಿ, ಮೂರು ತಿಂಗಳಿಗೊಮ್ಮೆ ಕರ್ನಾಟಕ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ, ಆರು ತಿಂಗಳಿಗೊಮ್ಮೆ ಜನ ಸ್ಪಂದನಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಅಧೀಕಾರಿಗಳು ಜನಸ್ಪಂದನಾ ಸಭೆಯಲ್ಲಿ ಬರುವ ಅರ್ಜಿಗಳನ್ನು ಕಾಲಮಿತಿಯೊಳಗೆ ಪರಿಶೀಲಿಸಿ ಪರಿಹರಿಸಬೇಕು ಎಂದು ಸಲಹೆ ನೀಡಿದರು.

ಅಧಿಕಾರಿಗಳು ಜನರ ನಡುವೆ ಇದ್ದುಕೊಂಡು ಕೆಲಸ ಮಾಡಬೇಕು. ದಸರಾ ಮಹೋತ್ಸವಕ್ಕೆ ಇನ್ನೂ ಮೂರು ತಿಂಗಳು ಬಾಕಿ ಇದೆ. ದಸರೆಯಲ್ಲಿ ತೊಡಗಿಸಿಕೊಳ್ಳುತ್ತೇವೆಂದು ಅಭಿವೃದ್ಧಿ ಕೆಲಸವನ್ನು ಬದಿಗೊತ್ತುವುದು ಬೇಡ. ದಸರೆ ಜತೆಗೆ, ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿ ಇರುವಂತೆ ಮಾಡಬೇಕು ಎಂದು ತಾಕೀತು ಮಾಡಿದರು.

ರಾಜ್ಯ ಸರ್ಕಾರದ ಆಡಳಿತ ಜನರ ಮನೆ ಬಾಗಿಲಿಗೆ ತಲುಪಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೂ ಮುಟ್ಟಬೇಕು. ಜನಪರವಾಗಿರುವ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಬೇಕು. ಅಧಿಕಾರಿಗಳು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ನೀಡಬೇಕು ಎಂದರು.

ಆಂದೋಲನ ಡೆಸ್ಕ್

Recent Posts

ಮೂಡದ ಒಮ್ಮತ : ಅಮೆರಿಕ-ಇರಾನ್ 21 ಗಂಟೆಗಳ ಮಾತುಕತೆ ವಿಫಲ

ಇಸ್ಲಾಮಾಬಾದ್ : ಪಶ್ಚಿಮ ಏಷ್ಯಾ ಸಂಘರ್ಷ ತಗ್ಗಿಸುವ ನಿಟ್ಟಿನಲ್ಲಿ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ ಮತ್ತು ಇರಾನ್ ನಡುವಿನ 21…

3 mins ago

ಬಿರುಗಾಳಿ ಸಹಿತ ಭಾರಿ ಮಳೆ : ಧರೆಗುರುಳಿದ ತೆಂಗಿನ ಮರಗಳು.

ಮಂಡ್ಯ : ತಾಲ್ಲೂಕಿನ ಹೊಳಲು ಗ್ರಾಮದಲ್ಲಿ ಶುಕ್ರವಾರ ಸಂಜೆ ಸುರಿದ ಭಾರೀ ಬಿರುಗಾಳಿ ಸಹಿತ ಮಳೆಯಿಂದ ಹೊಳಲು ಗ್ರಾಮದ ವೃತ್ತದಲ್ಲಿ…

25 mins ago

ಅಡಿಯ ಜನಾಂಗದ ಕಾಡಿನ ಮಕ್ಕಳು ನನ್ನ ಕಾಪಾಡಿದರು….

ಕೊಡಗಿನಲ್ಲಿ ಕಾಡುಪಾಲಾಗಿದ್ದ ಕೇರಳದ ಶರಣ್ಯ ಅನುಭವ ಕಥನ ನಾನು ಶರಣ್ಯ. ಕೇರಳದ ಕೋಝಿಕೋಡ್ ಜಿಲ್ಲೆಯ ನಾದಾಪುರಂನ ಯುವತಿ. ಕೊಚ್ಚಿಯಲ್ಲಿ ಐಟಿ…

2 hours ago

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ: ಇರಾನಿನ ಕೆಲ ಬೇಡಿಕೆಗಳಿಗೆ ಅಮೇರಿಕಾ ತಾತ್ವಿಕ ಒಪ್ಪಿಗೆ

ಇಸ್ಲಾಮಾಬಾದ್:‌ ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್‌ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್‌ ಮೊಹಮ್ಮದ್‌…

12 hours ago

ಬೆಂಗಳೂರಿನಲ್ಲಿ ದಾಖಲೆ ಪ್ರಮಾಣದ ಉಷ್ಣಾಂಶ: ಜನತೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್‌ ವೇವ್‌ ಎಚ್ಚರಿಕೆ…

15 hours ago

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…

16 hours ago