Mysore should be first in Development
ಮೈಸೂರು : ನಗರ, ಗ್ರಾಮೀಣ ಪ್ರದೇಶಗಳ ಜನರಿಗೆ ಅಧಿಕಾರಿಗಳು ಸ್ಪಂದಿಸುವ ಜತೆಗೆ ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಜಿಲ್ಲಾ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮದ ಪ್ರಾರಂಭದಲ್ಲಿ ಮಾತನಾಡಿ, ಮೂರು ತಿಂಗಳಿಗೊಮ್ಮೆ ಕರ್ನಾಟಕ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ, ಆರು ತಿಂಗಳಿಗೊಮ್ಮೆ ಜನ ಸ್ಪಂದನಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಅಧೀಕಾರಿಗಳು ಜನಸ್ಪಂದನಾ ಸಭೆಯಲ್ಲಿ ಬರುವ ಅರ್ಜಿಗಳನ್ನು ಕಾಲಮಿತಿಯೊಳಗೆ ಪರಿಶೀಲಿಸಿ ಪರಿಹರಿಸಬೇಕು ಎಂದು ಸಲಹೆ ನೀಡಿದರು.
ಅಧಿಕಾರಿಗಳು ಜನರ ನಡುವೆ ಇದ್ದುಕೊಂಡು ಕೆಲಸ ಮಾಡಬೇಕು. ದಸರಾ ಮಹೋತ್ಸವಕ್ಕೆ ಇನ್ನೂ ಮೂರು ತಿಂಗಳು ಬಾಕಿ ಇದೆ. ದಸರೆಯಲ್ಲಿ ತೊಡಗಿಸಿಕೊಳ್ಳುತ್ತೇವೆಂದು ಅಭಿವೃದ್ಧಿ ಕೆಲಸವನ್ನು ಬದಿಗೊತ್ತುವುದು ಬೇಡ. ದಸರೆ ಜತೆಗೆ, ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿ ಇರುವಂತೆ ಮಾಡಬೇಕು ಎಂದು ತಾಕೀತು ಮಾಡಿದರು.
ರಾಜ್ಯ ಸರ್ಕಾರದ ಆಡಳಿತ ಜನರ ಮನೆ ಬಾಗಿಲಿಗೆ ತಲುಪಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೂ ಮುಟ್ಟಬೇಕು. ಜನಪರವಾಗಿರುವ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಬೇಕು. ಅಧಿಕಾರಿಗಳು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ನೀಡಬೇಕು ಎಂದರು.
ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…
ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…
ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…
ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…
ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…
ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…