Mysore should be first in Development
ಮೈಸೂರು : ನಗರ, ಗ್ರಾಮೀಣ ಪ್ರದೇಶಗಳ ಜನರಿಗೆ ಅಧಿಕಾರಿಗಳು ಸ್ಪಂದಿಸುವ ಜತೆಗೆ ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿರುವಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಜಿಲ್ಲಾ ಮಟ್ಟದ ಜನ ಸ್ಪಂದನಾ ಕಾರ್ಯಕ್ರಮದ ಪ್ರಾರಂಭದಲ್ಲಿ ಮಾತನಾಡಿ, ಮೂರು ತಿಂಗಳಿಗೊಮ್ಮೆ ಕರ್ನಾಟಕ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ, ಆರು ತಿಂಗಳಿಗೊಮ್ಮೆ ಜನ ಸ್ಪಂದನಾ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. ಅಧೀಕಾರಿಗಳು ಜನಸ್ಪಂದನಾ ಸಭೆಯಲ್ಲಿ ಬರುವ ಅರ್ಜಿಗಳನ್ನು ಕಾಲಮಿತಿಯೊಳಗೆ ಪರಿಶೀಲಿಸಿ ಪರಿಹರಿಸಬೇಕು ಎಂದು ಸಲಹೆ ನೀಡಿದರು.
ಅಧಿಕಾರಿಗಳು ಜನರ ನಡುವೆ ಇದ್ದುಕೊಂಡು ಕೆಲಸ ಮಾಡಬೇಕು. ದಸರಾ ಮಹೋತ್ಸವಕ್ಕೆ ಇನ್ನೂ ಮೂರು ತಿಂಗಳು ಬಾಕಿ ಇದೆ. ದಸರೆಯಲ್ಲಿ ತೊಡಗಿಸಿಕೊಳ್ಳುತ್ತೇವೆಂದು ಅಭಿವೃದ್ಧಿ ಕೆಲಸವನ್ನು ಬದಿಗೊತ್ತುವುದು ಬೇಡ. ದಸರೆ ಜತೆಗೆ, ಪ್ರಗತಿಯಲ್ಲಿ ಮೈಸೂರು ಮೊದಲನೇ ಸ್ಥಾನದಲ್ಲಿ ಇರುವಂತೆ ಮಾಡಬೇಕು ಎಂದು ತಾಕೀತು ಮಾಡಿದರು.
ರಾಜ್ಯ ಸರ್ಕಾರದ ಆಡಳಿತ ಜನರ ಮನೆ ಬಾಗಿಲಿಗೆ ತಲುಪಬೇಕು. ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿ ಮನೆಗೂ ಮುಟ್ಟಬೇಕು. ಜನಪರವಾಗಿರುವ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಬೇಕು. ಅಧಿಕಾರಿಗಳು ನಿಮ್ಮೊಂದಿಗೆ ನಾವಿದ್ದೇವೆ ಎಂಬ ಸಂದೇಶ ನೀಡಬೇಕು ಎಂದರು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…