ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಈ ಬಗ್ಗೆ ಮಾತನಾಡಿರುವ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಈ ಕಾರ್ಖಾನೆ ರೈತರಿಗೆ ಸಂಬಂಧಿಸಿದ್ದು, ಪರಿಸರಕ್ಕೆ ಸಂಬಂಧಿಸಿದ್ದು. ಉದ್ಯೋಗ ಸೃಷ್ಟಿ ಮಾಡಿರುವಂತದ್ದು. ಮೈಸೂರು ರೇಷ್ಮೆಗೆ ಭಾರಿ ಇತಿಹಾಸವಿದೆ. ಪ್ರಪಂಚದ ಮೂಲೆ ಮೂಲೆಗೂ ಮೈಸೂರು ರೇಷ್ಮೆಗೆ ಭಾರಿ ಹೆಸರಿದೆ.
ಮೈಸೂರಿನ ರಾಜ ಮನೆತನ ಆಳ ದೂರದೃಷ್ಟಿಯಿಂದ ಈ ಕಾರ್ಖಾನೆ ಒತ್ತಾಸೆಯಿಂದ ಮಾಡಿದೆ. ಕ್ರೀಡಾಂಗಣಕ್ಕೆ ಯಾರ ವಿರೋಧವಿಲ್ಲ. ಕ್ರೀಡಾಂಗಣಬೇಕು.
ಆದರೆ ಈ KSIC ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಘಟಕ ಇರುವ ಜಾಗ ಯಾಕೆ ಬೇಕು. ಇಲ್ಲಿ ಸಾಕಷ್ಟು ಮರಗಳಿವೆ.ನೂರಾರು ವರ್ಷದಿಂದ ಇರುವ ಈ ಪರಿಸರ ಹಾಳು ಮಾಡುವುದು ಬೇಡ.
ಮೈಸೂರು ರೇಷ್ಮೆ ಸೀರೆಗೆ ಸರತಿ ಸಾಲಿನಲ್ಲಿ ನಿಂತು ಸೀರೆ ಪಡೆಯುವ ಬೇಡಿಕೆ ಇರುವ ಈ ಸ್ಥಿತಿಯಲ್ಲಿ ಇಂತಹ ಮೈಸೂರು ರೇಷ್ಮೆ ನೂಲು ತೆಗೆಯುವ ಕಾರ್ಖಾನೆಗೆ ತೊಂದರೆ ಮಾಡುವುದು ಬೇಡ ಎಂದರು.
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್ಎಸ್ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…
ಹೇಮಂತ್ಕುಮಾರ್ ಎಚ್ಚರ ತಪ್ಪಿದರೆ ಬಿದ್ದು ಕೈಕಾಲು ಮುರಿದುಕೊಳ್ಳುವುದು ಖಚಿತ ಮಂಡ್ಯ: ನಗರದ ಜಯಚಾಮರಾಜ ವೃತ್ತ(ಸಂಜಯ ಸರ್ಕಲ್)ದಿಂದ ಹೊಳಲು ವೃತ್ತ, ಪೇಟೆ…