ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಈ ಬಗ್ಗೆ ಮಾತನಾಡಿರುವ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಈ ಕಾರ್ಖಾನೆ ರೈತರಿಗೆ ಸಂಬಂಧಿಸಿದ್ದು, ಪರಿಸರಕ್ಕೆ ಸಂಬಂಧಿಸಿದ್ದು. ಉದ್ಯೋಗ ಸೃಷ್ಟಿ ಮಾಡಿರುವಂತದ್ದು. ಮೈಸೂರು ರೇಷ್ಮೆಗೆ ಭಾರಿ ಇತಿಹಾಸವಿದೆ. ಪ್ರಪಂಚದ ಮೂಲೆ ಮೂಲೆಗೂ ಮೈಸೂರು ರೇಷ್ಮೆಗೆ ಭಾರಿ ಹೆಸರಿದೆ.
ಮೈಸೂರಿನ ರಾಜ ಮನೆತನ ಆಳ ದೂರದೃಷ್ಟಿಯಿಂದ ಈ ಕಾರ್ಖಾನೆ ಒತ್ತಾಸೆಯಿಂದ ಮಾಡಿದೆ. ಕ್ರೀಡಾಂಗಣಕ್ಕೆ ಯಾರ ವಿರೋಧವಿಲ್ಲ. ಕ್ರೀಡಾಂಗಣಬೇಕು.
ಆದರೆ ಈ KSIC ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಘಟಕ ಇರುವ ಜಾಗ ಯಾಕೆ ಬೇಕು. ಇಲ್ಲಿ ಸಾಕಷ್ಟು ಮರಗಳಿವೆ.ನೂರಾರು ವರ್ಷದಿಂದ ಇರುವ ಈ ಪರಿಸರ ಹಾಳು ಮಾಡುವುದು ಬೇಡ.
ಮೈಸೂರು ರೇಷ್ಮೆ ಸೀರೆಗೆ ಸರತಿ ಸಾಲಿನಲ್ಲಿ ನಿಂತು ಸೀರೆ ಪಡೆಯುವ ಬೇಡಿಕೆ ಇರುವ ಈ ಸ್ಥಿತಿಯಲ್ಲಿ ಇಂತಹ ಮೈಸೂರು ರೇಷ್ಮೆ ನೂಲು ತೆಗೆಯುವ ಕಾರ್ಖಾನೆಗೆ ತೊಂದರೆ ಮಾಡುವುದು ಬೇಡ ಎಂದರು.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…