ಮೈಸೂರು: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದೆ.
ಈ ಬಗ್ಗೆ ಮಾತನಾಡಿರುವ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರು, ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಈ ಕಾರ್ಖಾನೆ ರೈತರಿಗೆ ಸಂಬಂಧಿಸಿದ್ದು, ಪರಿಸರಕ್ಕೆ ಸಂಬಂಧಿಸಿದ್ದು. ಉದ್ಯೋಗ ಸೃಷ್ಟಿ ಮಾಡಿರುವಂತದ್ದು. ಮೈಸೂರು ರೇಷ್ಮೆಗೆ ಭಾರಿ ಇತಿಹಾಸವಿದೆ. ಪ್ರಪಂಚದ ಮೂಲೆ ಮೂಲೆಗೂ ಮೈಸೂರು ರೇಷ್ಮೆಗೆ ಭಾರಿ ಹೆಸರಿದೆ.
ಮೈಸೂರಿನ ರಾಜ ಮನೆತನ ಆಳ ದೂರದೃಷ್ಟಿಯಿಂದ ಈ ಕಾರ್ಖಾನೆ ಒತ್ತಾಸೆಯಿಂದ ಮಾಡಿದೆ. ಕ್ರೀಡಾಂಗಣಕ್ಕೆ ಯಾರ ವಿರೋಧವಿಲ್ಲ. ಕ್ರೀಡಾಂಗಣಬೇಕು.
ಆದರೆ ಈ KSIC ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ಘಟಕ ಇರುವ ಜಾಗ ಯಾಕೆ ಬೇಕು. ಇಲ್ಲಿ ಸಾಕಷ್ಟು ಮರಗಳಿವೆ.ನೂರಾರು ವರ್ಷದಿಂದ ಇರುವ ಈ ಪರಿಸರ ಹಾಳು ಮಾಡುವುದು ಬೇಡ.
ಮೈಸೂರು ರೇಷ್ಮೆ ಸೀರೆಗೆ ಸರತಿ ಸಾಲಿನಲ್ಲಿ ನಿಂತು ಸೀರೆ ಪಡೆಯುವ ಬೇಡಿಕೆ ಇರುವ ಈ ಸ್ಥಿತಿಯಲ್ಲಿ ಇಂತಹ ಮೈಸೂರು ರೇಷ್ಮೆ ನೂಲು ತೆಗೆಯುವ ಕಾರ್ಖಾನೆಗೆ ತೊಂದರೆ ಮಾಡುವುದು ಬೇಡ ಎಂದರು.
ನವದೆಹಲಿ : ಇರಾನ್-ಅಮೆರಿಕ ಉದ್ವಿಗ್ನತೆಯ ನಡುವೆ ಹಾರ್ಮುಝ್ ಜಲಸಂಧಿಯಲ್ಲಿ ಭಾರತೀಯ ಧ್ವಜ ಹೊಂದಿರುವ ಸೂಪರ್ ಟ್ಯಾಂಕರ್ ಮೇಲೆ ಇರಾನಿಯನ್ ಗನ್ಬೋಟ್ಗಳಿಂದ…
ಟೆಹ್ರಾನ್ : ಅಮೆರಿಕ ಜೊತೆಗಿನ ಮಾತುಕತೆ ಭಾಗವಾಗಿ ಹೊರ್ಮುಜ್ ಜಲಸಂಧಿಯಲ್ಲಿ ಮುಕ್ತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದ ಇರಾನ್, ತನ್ನ ನಿರ್ಧಾರವನ್ನು…
ಬೆಂಗಳೂರು : ಮೈಸೂರಿನ ಸಿದ್ಧಾರ್ಥನಗರದ ಮನೆಯೊಂದರಲ್ಲಿ ಚಿರತೆ ಮಂಚದಡಿ ಅಡಗಿದ್ದ ವೇಳೆ ಪ್ರಾಣದ ಹಂಗು ತೊರೆದು ವೃದ್ಧ ಅತ್ತೆಯನ್ನು ಸುರಕ್ಷಿತವಾಗಿ…
ಬೆಂಗಳೂರು : ಬನ್ನೇರುಘಟ್ಟ ಮೃಗಾಲಯಕ್ಕೆ ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಶಿವಂಗಿ (ಚೀತಾ)ಗಳನ್ನು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ…
ಬೆಂಗಳೂರು- ಕಾಂಗ್ರೆಸ್ ಪಕ್ಷ ಮಹಿಳಾ ಮೀಸಲಾತಿಗೆ ವಿರೋಧ ಇಲ್ಲ. ಕೇಂದ್ರ ಸರ್ಕಾರ ಲೋಕಸಭೆಯ ಸ್ಥಾನಗಳ ಸಂಖ್ಯೆ ಹೆಚ್ಚಿಸುವುದನ್ನು ಮಹಿಳಾ ಮೀಸಲಾತಿಯೊಂದಿಗೆ…
ಉಡುಪಿ: ಶ್ರೀಕೃಷ್ಣ ಮಂದಿರಕ್ಕೆ ಸಂಸದೆ ಪ್ರಿಯಾಂಕಾ ಗಾಂಧಿ ಪತಿ ರಾಬರ್ಟ್ ವಾದ್ರಾ ಭೇಟಿ ನೀಡಿದರು. ಅವರ ಜನ್ಮದಿನದ ಪ್ರಯುಕ್ತ ಕೆಲವು…