ಮೈಸೂರು

ಮೈಸೂರು : ಡಿ.23ರಂದು ʻರೈತರ ರಾಜ್ಯ ಮಟ್ಟದ ಸಮಾವೇಶʼ

ಮೈಸೂರು: ವಿಶ್ವ ರೈತ ದಿನದ ಪ್ರಯುಕ್ತ  ಡಿ.23ರಂದು ಬೆಳಿಗ್ಗೆ 10ಕ್ಕೆ ʻರೈತರ ರಾಜ್ಯ ಮಟ್ಟದ ಸಮಾವೇಶʼ ವನ್ನು ನಗರದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಘಟಿಕೋತ್ಸವ ಭವನದಲ್ಲಿ ಏರ್ಪಡಿಸಲಾಗಿದೆ. ರಾಜ್ಯ ರೈತ ಸಂಘಟನೆಗಳ ಒಕ್ಕೂಟ, ರೈತ ಸಂಘ, ಹಸಿರು ಸೇನೆ ಮತ್ತು ಕಬ್ಬು ಬೆಳೆಗಾರರ ಸಂಘದ ಸಹಯೋಗದಲ್ಲಿ ಈ ಸಮಾವೇಶ ನಡೆಸಲು ತೀರ್ಮಾನಿಸಲಾಗಿದೆ ಎಂದು  ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌ ತಿಳಿಸಿದ್ದಾರೆ.

ಶುಕ್ರವಾರ ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು,  ಪ್ರಸ್ತುತ ದೇಶದಾದ್ಯಂತ ರೈತರು ಎದುರಿಸುತ್ತಿರುವ ಕೃಷಿ ಸಮಸ್ಯೆಗಳ ಬಗ್ಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನದಟ್ಟು ಮಾಡಿಸಲು ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.

ವೇದಿಕೆಯ ಸಮಾರಂಭ ಅಂದು ಬೆಳಿಗ್ಗೆ 11ಕ್ಕೆ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ನಿವೃತ್ತ ಕೆಎಎಸ್‌ ಅಧಿಕಾರಿ ಕಾ. ರಾಮೇಶ್ವರಪ್ಪ ನೇತೃತ್ವದ ʻಇನಿದನಿ ಮಣ್ಣ ಮಕ್ಕಳ ಹೊನ್ನ ಪದಗಳ ಬಳಗದವರು ʼಜಾನಪದ ಸಂಗೀತ ವೈಭವʼ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಂಜೆವೇಳೆಗೆ ಸಮಾರೋಪ ಸಮಾರಂಭ ನಡೆಯಲಿದ್ದು, ಸಚಿವ ವಿ.ಸೋಮಣ್ಣ ಹಾಗೂ ಕೆಎಸ್‌ಒಯು ಕುಲಪತಿ ಪೊ.ಶರಣಪ್ಪ ಹಲಸೆ ಭಾಗವಹಿಸಲಿದ್ದಾರೆ.

ತಮಿಳುನಾಡಿನ ರೈತ ಮುಖಂಡ ಪಿ.ಆರ್‌. ಪಾಂಡ್ಯನ್‌, ಪರಿಸರ ವಿಜ್ಞಾನಿ ಚಂದ್ರಶೇಖರ ಬೀರಾದಾರ್‌, ತೆಲಂಗಾಣದ ವೆಂಕಟೇಶ್ವರ ಭಾಗವಹಿಸಲಿದ್ದಾರೆ.  ವೇದಿಕೆಯಲ್ಲಿ ನಾಡಿನ ಪ್ರಗತಿಪರ ರೈತ ಹಾಗೂ ಪರಿಸರ ಪ್ರೇಮಿಗಳಿಗೆ ಪುರಸ್ಕಾರ ನೀಡಲಾಗುವುದು ಎಂದು ವಿವರಿಸಿದರು.

ಗೋಷ್ಠಿಯಲ್ಲಿ ರಾಜ್ಯ ಸಂಘಟನಾ ಕಾರ್ಯದರ್ಶಿ ಹುತ್ತಳ್ಳಿ ದೇವರಾಜು, ಬರಡನಪುರ ನಾಗರಾಜ್‌, ಮುಖಂಡ ಪೈಲ್ವನ್‌ ವೆಂಕಟೇಶ್‌ ಸೇರಿದಂತೆ ಇನ್ನಿತರರು ಇದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

38 mins ago

ಶ್ವೇತಭವನದ ಸಮೀಪ ಗುಂಡಿನ ಚಕಮಕಿ : ಬಂದೂಕುಧಾರಿಯ ಹತ್ಯೆ

ವಾಷಿಂಗ್ಟನ್‌ : ಅಮೆರಿಕದ ಶ್ವೇತ ಭವನದ ಭದ್ರತಾ ತಪಾಸಣಾ ಕೇಂದ್ರದ ಬಳಿ ಶನಿವಾರ ಸಂಜೆ ಭೀಕರ ಗುಂಡಿನ ದಾಳಿ ನಡೆದಿದ್ದು…

1 hour ago

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

ಮಹಾಪಂಚ್‌ ಕಾರ್ಟೂನ್‌ | ಮೇ.24 ಭಾನುವಾರ

2 hours ago

‘ಎಬೋಲಾ ಆತಂಕ ಬೇಡ’ ; ಅಗತ್ಯ ಮುನ್ನೆಚ್ಚರಿಕೆ ವಹಿಸಿದ್ದೇವೆ : ಆರೋಗ್ಯ ಸಚಿವ

ಬೆಂಗಳೂರು : ಎಬೋಲಾ ಕುರಿತು ಸಾರ್ವಜನಿಕರು ಆತಂಕಕ್ಕೆ ಒಳಗಾಗಬೇಡಿ, ಜಾಗೃತಿ ಇರಲಿ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮನವಿ…

14 hours ago

ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಸಿಎಂ ಶಂಕುಸ್ಥಾಪನೆ

ಆನೇಕಲ್‌ ಇಂಡ್ಲವಾಡಿಯ ಸೂರ್ಯನಗರದಲ್ಲಿ ನಿರ್ಮಾಣ ಬೆಂಗಳೂರು : ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗುವ ಮೂಲಕ ಕ್ರೀಡೆ, ಪ್ರವಾಸೋದ್ಯಮ,…

16 hours ago

ಬೆಳಗಾವಿಯಲ್ಲಿ ಮಳೆಗಾಲದ ಅಧಿವೇಶನ

ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…

17 hours ago