ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ವಂಚಿಸಿರುವ ಸೈಬರ್ ಖದೀಮರು, ಅವರುಗಳಿಂದ ಒಟ್ಟು 7.80 ಲಕ್ಷ ರೂ. ಹಣವನ್ನು ಲಪಟಾಯಿಸಿದ್ದಾರೆ.
ಮೊದಲ ಪ್ರಕರಣದಲ್ಲಿ ಷೇರು ಮಾರುಕಟ್ಟೆಮೂಲಕ ಹಣ ಹೂಡಿದಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ 7.19.360 ರೂ. ವಂಚಿಸಿರುವ ಘಟನೆ ನಡೆದಿದೆ.
ನಗರದ ಬಂಬೂಬಜಾರ್ ನಿವಾಸಿ ಹಣ ಕಳೆದುಕೊಂಡವರು. ಟೆಲಿಗ್ರಾಂ ಮೂಲಕ ವಂಚಕ ಪರಿಚಯ ಮಾಡಿಕೊಂಡು ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ. ವ್ಯಕ್ತಿಯ ಮಾತನ್ನ ನಂಬಿದ ಅವರು ಮೊದಲು ಸಾಕಷ್ಟು ಹಣವನ್ನು ಹೂಡಿಕೆ ಮಾಡಿದ್ದಾರೆ.
ಮೊದಲ ಹೂಡಿಕೆಗೆ ಲಾಭ ಬಂದಿದೆ. ನಂತರ ವಿವಿದ ಹಂತಗಳಲ್ಲಿ ಹಣ ಹೂಡಿದ್ದಾರೆ. ಖಾತೆಯಲ್ಲಿ ಹೆಚ್ಚಿನ ಮೊತ್ತ ಲಾಭ ತೋರಿಸಿದೆ. ಹಣ ಪಡೆಯಲು ಮುಂದಾದಾಗ ಮತ್ತೆ ಹಣ ಪಾವತಿಸುವಂತೆ ತಿಳಿಸಿದ್ದಾರೆ. ನಂತರ ತಾವು ಮೋಸ ಹೋಗಿರುವುದನ್ನ ಖಚಿತಪಡಿಸಿಕೊಂಡಿದ್ದಾರೆ.
ಎರಡನೇ ಪ್ರಕರಣದಲ್ಲಿ ನಿಮ್ಮ ಮಳಿಗೆಗೆ ಬೇಕಾದ ವಸ್ತಗಳನ್ನು ಸರಬರಾಜು ಮಾಡುತ್ತೇವೆ ಎಂದು ಹೇಳಿದ ವಂಚಕ ದಿನಸಿ ಮಳಿಗೆ ಮಾಲೀಕರೊಬ್ಬರಿಗೆ 60 ಸಾವಿರ ರೂ. ವಂಚಿಸಿದ್ದಾರೆ.
ನಗರದ ಅಗ್ರಹಾರದಲ್ಲಿರುವ ಲಕ್ಷಿ ಟಿಫಾನೀಸ್ ಬಳಿಯ ದಿನಸಿ ಮಳಿಗೆ ಮಾಲೀಕರಿಗೆ ಅಪರಿಚಿತರಿಂದ ಕರೆ ಬಂದಿದೆ. ನಿಮಗೆ ದಿನಸಿ ಸರಬರಾಜು ಮಾಡುತ್ತೇವೆ ಎಂದು ನಂಬಿಸಿ ಅವರಿಂದ 60 ಸಾವಿರ ರೂ. ಹಣವನ್ನು ತಮ್ಮ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ. ಈ ಎರಡೂ ಪ್ರಕರಣಗಳು ಸೈಬರ್ ಠಾಣೆಯಲ್ಲಿ ದಾಖಲಾಗಿವೆ.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…