ಮೈಸೂರು

ಮೈಸೂರು | ಷೇರು ಮಾರುಕಟ್ಟೆ; 7.80 ಲಕ್ಷ ಹಣ ವಂಚನೆ

ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ವಂಚಿಸಿರುವ ಸೈಬರ್ ಖದೀಮರು, ಅವರುಗಳಿಂದ ಒಟ್ಟು 7.80 ಲಕ್ಷ ರೂ. ಹಣವನ್ನು ಲಪಟಾಯಿಸಿದ್ದಾರೆ.

ಮೊದಲ ಪ್ರಕರಣದಲ್ಲಿ ಷೇರು ಮಾರುಕಟ್ಟೆಮೂಲಕ ಹಣ ಹೂಡಿದಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ  7.19.360 ರೂ. ವಂಚಿಸಿರುವ ಘಟನೆ ನಡೆದಿದೆ.

ನಗರದ ಬಂಬೂಬಜಾರ್ ನಿವಾಸಿ ಹಣ ಕಳೆದುಕೊಂಡವರು. ಟೆಲಿಗ್ರಾಂ ಮೂಲಕ ವಂಚಕ ಪರಿಚಯ ಮಾಡಿಕೊಂಡು ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ. ವ್ಯಕ್ತಿಯ ಮಾತನ್ನ ನಂಬಿದ ಅವರು ಮೊದಲು ಸಾಕಷ್ಟು ಹಣವನ್ನು ಹೂಡಿಕೆ ಮಾಡಿದ್ದಾರೆ.

ಮೊದಲ ಹೂಡಿಕೆಗೆ ಲಾಭ ಬಂದಿದೆ. ನಂತರ ವಿವಿದ ಹಂತಗಳಲ್ಲಿ ಹಣ ಹೂಡಿದ್ದಾರೆ. ಖಾತೆಯಲ್ಲಿ ಹೆಚ್ಚಿನ ಮೊತ್ತ ಲಾಭ ತೋರಿಸಿದೆ. ಹಣ ಪಡೆಯಲು ಮುಂದಾದಾಗ ಮತ್ತೆ ಹಣ ಪಾವತಿಸುವಂತೆ ತಿಳಿಸಿದ್ದಾರೆ. ನಂತರ ತಾವು ಮೋಸ ಹೋಗಿರುವುದನ್ನ ಖಚಿತಪಡಿಸಿಕೊಂಡಿದ್ದಾರೆ.
ಎರಡನೇ ಪ್ರಕರಣದಲ್ಲಿ ನಿಮ್ಮ ಮಳಿಗೆಗೆ ಬೇಕಾದ ವಸ್ತಗಳನ್ನು ಸರಬರಾಜು ಮಾಡುತ್ತೇವೆ ಎಂದು ಹೇಳಿದ ವಂಚಕ ದಿನಸಿ ಮಳಿಗೆ ಮಾಲೀಕರೊಬ್ಬರಿಗೆ 60 ಸಾವಿರ ರೂ. ವಂಚಿಸಿದ್ದಾರೆ.

ನಗರದ ಅಗ್ರಹಾರದಲ್ಲಿರುವ ಲಕ್ಷಿ ಟಿಫಾನೀಸ್ ಬಳಿಯ ದಿನಸಿ ಮಳಿಗೆ ಮಾಲೀಕರಿಗೆ ಅಪರಿಚಿತರಿಂದ ಕರೆ ಬಂದಿದೆ. ನಿಮಗೆ ದಿನಸಿ ಸರಬರಾಜು ಮಾಡುತ್ತೇವೆ ಎಂದು ನಂಬಿಸಿ ಅವರಿಂದ 60 ಸಾವಿರ ರೂ. ಹಣವನ್ನು ತಮ್ಮ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ. ಈ ಎರಡೂ ಪ್ರಕರಣಗಳು ಸೈಬರ್ ಠಾಣೆಯಲ್ಲಿ ದಾಖಲಾಗಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

4 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

4 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

4 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

4 hours ago

ಓದುಗರ ಪತ್ರ: ಮಹಾರಾಣಿ ಕಾಲೇಜಿನಲ್ಲಿ ಕ್ಯಾಂಟೀನ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಮಹಾರಾಣಿ ಮಹಿಳಾ ಕಲಾ ಕಾಲೇಜಿನಲ್ಲಿ ಸಾವಿರಾರು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿದ್ದಾರೆ. ತರಗತಿಗಳು ಬೆಳಿಗ್ಗೆ ೮ ಗಂಟೆಗೆ ಪ್ರಾರಂಭವಾಗುವುದರಿಂದ ಬಹುತೇಕ…

5 hours ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಸೆರೆಬ್ರಲ್ ಪಾಲ್ಸಿಯನ್ನು ಮಣಿಸಿ ಬದುಕು ಕಟ್ಟಿಕೊಂಡ ಸುಮಿತ್

‘ಪಿ.ಆರ್.ಸಿಗ್ನಲ್’ ಕಂಪೆನಿ ಸ್ಥಾಪಿಸಿ ವಿಶೇಷಚೇತನರಿಗೆ ನೆರವು ೩೪ ವರ್ಷ ಪ್ರಾಯದ ಸುಮಿತ್ ಅಗರ್ವಾಲ್ ಏಳನೇ ತಿಂಗಳಲ್ಲಿ ಅವಧಿಗೆ ಮೊದಲೇ ಹುಟ್ಟಿದವರು.…

5 hours ago