ಮೈಸೂರು

ಮೈಸೂರು | ಷೇರು ಮಾರುಕಟ್ಟೆ; 7.80 ಲಕ್ಷ ಹಣ ವಂಚನೆ

ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ವಂಚಿಸಿರುವ ಸೈಬರ್ ಖದೀಮರು, ಅವರುಗಳಿಂದ ಒಟ್ಟು 7.80 ಲಕ್ಷ ರೂ. ಹಣವನ್ನು ಲಪಟಾಯಿಸಿದ್ದಾರೆ.

ಮೊದಲ ಪ್ರಕರಣದಲ್ಲಿ ಷೇರು ಮಾರುಕಟ್ಟೆಮೂಲಕ ಹಣ ಹೂಡಿದಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ  7.19.360 ರೂ. ವಂಚಿಸಿರುವ ಘಟನೆ ನಡೆದಿದೆ.

ನಗರದ ಬಂಬೂಬಜಾರ್ ನಿವಾಸಿ ಹಣ ಕಳೆದುಕೊಂಡವರು. ಟೆಲಿಗ್ರಾಂ ಮೂಲಕ ವಂಚಕ ಪರಿಚಯ ಮಾಡಿಕೊಂಡು ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ. ವ್ಯಕ್ತಿಯ ಮಾತನ್ನ ನಂಬಿದ ಅವರು ಮೊದಲು ಸಾಕಷ್ಟು ಹಣವನ್ನು ಹೂಡಿಕೆ ಮಾಡಿದ್ದಾರೆ.

ಮೊದಲ ಹೂಡಿಕೆಗೆ ಲಾಭ ಬಂದಿದೆ. ನಂತರ ವಿವಿದ ಹಂತಗಳಲ್ಲಿ ಹಣ ಹೂಡಿದ್ದಾರೆ. ಖಾತೆಯಲ್ಲಿ ಹೆಚ್ಚಿನ ಮೊತ್ತ ಲಾಭ ತೋರಿಸಿದೆ. ಹಣ ಪಡೆಯಲು ಮುಂದಾದಾಗ ಮತ್ತೆ ಹಣ ಪಾವತಿಸುವಂತೆ ತಿಳಿಸಿದ್ದಾರೆ. ನಂತರ ತಾವು ಮೋಸ ಹೋಗಿರುವುದನ್ನ ಖಚಿತಪಡಿಸಿಕೊಂಡಿದ್ದಾರೆ.
ಎರಡನೇ ಪ್ರಕರಣದಲ್ಲಿ ನಿಮ್ಮ ಮಳಿಗೆಗೆ ಬೇಕಾದ ವಸ್ತಗಳನ್ನು ಸರಬರಾಜು ಮಾಡುತ್ತೇವೆ ಎಂದು ಹೇಳಿದ ವಂಚಕ ದಿನಸಿ ಮಳಿಗೆ ಮಾಲೀಕರೊಬ್ಬರಿಗೆ 60 ಸಾವಿರ ರೂ. ವಂಚಿಸಿದ್ದಾರೆ.

ನಗರದ ಅಗ್ರಹಾರದಲ್ಲಿರುವ ಲಕ್ಷಿ ಟಿಫಾನೀಸ್ ಬಳಿಯ ದಿನಸಿ ಮಳಿಗೆ ಮಾಲೀಕರಿಗೆ ಅಪರಿಚಿತರಿಂದ ಕರೆ ಬಂದಿದೆ. ನಿಮಗೆ ದಿನಸಿ ಸರಬರಾಜು ಮಾಡುತ್ತೇವೆ ಎಂದು ನಂಬಿಸಿ ಅವರಿಂದ 60 ಸಾವಿರ ರೂ. ಹಣವನ್ನು ತಮ್ಮ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ. ಈ ಎರಡೂ ಪ್ರಕರಣಗಳು ಸೈಬರ್ ಠಾಣೆಯಲ್ಲಿ ದಾಖಲಾಗಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

2 mins ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

6 mins ago

ಹಾರಂಗಿ ಸಾಕಾನೆ ಶಿಬಿರ ಪ್ರವಾಸಿಗರಿಗೆ ಮುಕ್ತ

ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…

11 mins ago

ಕ್ವಾರಿ, ಕ್ರಷರ್‌ಗಳ ಬಂದ್; ನಿರ್ಮಾಣ ವಲಯಕ್ಕೆ ತಟ್ಟಿದ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…

17 mins ago

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago