ಮೈಸೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ವಂಚಿಸಿರುವ ಸೈಬರ್ ಖದೀಮರು, ಅವರುಗಳಿಂದ ಒಟ್ಟು 7.80 ಲಕ್ಷ ರೂ. ಹಣವನ್ನು ಲಪಟಾಯಿಸಿದ್ದಾರೆ.
ಮೊದಲ ಪ್ರಕರಣದಲ್ಲಿ ಷೇರು ಮಾರುಕಟ್ಟೆಮೂಲಕ ಹಣ ಹೂಡಿದಲ್ಲಿ ಹೆಚ್ಚಿನ ಅಭಾಂಶ ಬರುವುದಾಗಿ ನಂಬಿಸಿ ನಗರದ ವ್ಯಕ್ತಿಯೊಬ್ಬರಿಗೆ 7.19.360 ರೂ. ವಂಚಿಸಿರುವ ಘಟನೆ ನಡೆದಿದೆ.
ನಗರದ ಬಂಬೂಬಜಾರ್ ನಿವಾಸಿ ಹಣ ಕಳೆದುಕೊಂಡವರು. ಟೆಲಿಗ್ರಾಂ ಮೂಲಕ ವಂಚಕ ಪರಿಚಯ ಮಾಡಿಕೊಂಡು ಟ್ರೇಡಿಂಗ್ ಬಗ್ಗೆ ಮಾಹಿತಿ ನೀಡಿದ್ದಾರೆ. ವ್ಯಕ್ತಿಯ ಮಾತನ್ನ ನಂಬಿದ ಅವರು ಮೊದಲು ಸಾಕಷ್ಟು ಹಣವನ್ನು ಹೂಡಿಕೆ ಮಾಡಿದ್ದಾರೆ.
ಮೊದಲ ಹೂಡಿಕೆಗೆ ಲಾಭ ಬಂದಿದೆ. ನಂತರ ವಿವಿದ ಹಂತಗಳಲ್ಲಿ ಹಣ ಹೂಡಿದ್ದಾರೆ. ಖಾತೆಯಲ್ಲಿ ಹೆಚ್ಚಿನ ಮೊತ್ತ ಲಾಭ ತೋರಿಸಿದೆ. ಹಣ ಪಡೆಯಲು ಮುಂದಾದಾಗ ಮತ್ತೆ ಹಣ ಪಾವತಿಸುವಂತೆ ತಿಳಿಸಿದ್ದಾರೆ. ನಂತರ ತಾವು ಮೋಸ ಹೋಗಿರುವುದನ್ನ ಖಚಿತಪಡಿಸಿಕೊಂಡಿದ್ದಾರೆ.
ಎರಡನೇ ಪ್ರಕರಣದಲ್ಲಿ ನಿಮ್ಮ ಮಳಿಗೆಗೆ ಬೇಕಾದ ವಸ್ತಗಳನ್ನು ಸರಬರಾಜು ಮಾಡುತ್ತೇವೆ ಎಂದು ಹೇಳಿದ ವಂಚಕ ದಿನಸಿ ಮಳಿಗೆ ಮಾಲೀಕರೊಬ್ಬರಿಗೆ 60 ಸಾವಿರ ರೂ. ವಂಚಿಸಿದ್ದಾರೆ.
ನಗರದ ಅಗ್ರಹಾರದಲ್ಲಿರುವ ಲಕ್ಷಿ ಟಿಫಾನೀಸ್ ಬಳಿಯ ದಿನಸಿ ಮಳಿಗೆ ಮಾಲೀಕರಿಗೆ ಅಪರಿಚಿತರಿಂದ ಕರೆ ಬಂದಿದೆ. ನಿಮಗೆ ದಿನಸಿ ಸರಬರಾಜು ಮಾಡುತ್ತೇವೆ ಎಂದು ನಂಬಿಸಿ ಅವರಿಂದ 60 ಸಾವಿರ ರೂ. ಹಣವನ್ನು ತಮ್ಮ ಖಾತೆಗೆ ಹಾಕಿಸಿಕೊಂಡು ವಂಚಿಸಿದ್ದಾರೆ. ಈ ಎರಡೂ ಪ್ರಕರಣಗಳು ಸೈಬರ್ ಠಾಣೆಯಲ್ಲಿ ದಾಖಲಾಗಿವೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…