Categories: ಮೈಸೂರು

ಮೈಸೂರು: ಪರೀಕ್ಷೆ ಮೂಂದೂಡಿಕೆಗೆ ಮಹಾರಾಜ ಕಾಲೇಜು ವಿದ್ಯಾರ್ಥಿಗಳ ಆಗ್ರಹ

ಮೈಸೂರು: ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುತ್ತಿರುವ ಮೈಸೂರು ವಿವಿಯ ಕ್ರಮವನ್ನು ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್‌ಒ) ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಬುಧವಾರ ವಿವಿ ಕಾರ್ಯಸೌಧದ ಮುಂಭಾಗ ಜಮಾವಣೆಗೊಂಡ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ, ಮಹಾರಾಜ ಕಾಲೇಜಿನ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಆಗ್ರಹಿಸಿದರು.

ಮೈಸೂರು ವಿಶ್ವವಿದ್ಯಾನಿಲಯದ ಪದವಿ ವಿದ್ಯಾರ್ಥಿಗಳ ಪರೀಕ್ಷಾ ಸೂಚನೆ ಪ್ರಕಾರ ಡಿ.೨೮ರಿಂದ ಪರೀಕ್ಷೆಗಳು ಪ್ರಾರಂಭವಾಗಲಿವೆ. ಆದರೆ, ತರಗತಿಗಳು ಆಗಸ್ಟ್‌ನಲ್ಲಿ ಆರಂಭವಾದರೂ ಅತಿಥಿ ಉಪನ್ಯಾಸಕರ ಕೊರತೆಯಿಂದಾಗಿ ಉಪನ್ಯಾಸಕರ ನೇಮಕವಾಗಿಲ್ಲದ ಕಾರಣ ತರಗತಿಗಳು ನಡೆದಿಲ್ಲ. ಒಂದೂವರೆ ತಿಂಗಳ ನಂತರ ತರಗತಿಗಳು ಪ್ರಾರಂಭವಾಗಿವೆ. ಇದರಿಂದ ಪಠ್ಯಕ್ರಮಗಳ ಬೋಧನೆ ಸಂಪೂರ್ಣವಾಗಿ ನಡೆದಿಲ್ಲ ಎಂದರು.

ಪಠ್ಯಕ್ರಮ ಪೂರ್ಣಗೊಳ್ಳದೆ ಪರೀಕ್ಷೆ ನಡೆಸುವುದು ಅವೈಜ್ಞಾನಿಕ. ಅಲ್ಲದೇ ಇದು ವಿದ್ಯಾರ್ಥಿಗಳ ಮೇಲೆ ಒತ್ತಡ ಉಂಟು ಮಾಡುವುದರಿಂದ ಪರೀಕ್ಷೆಗಳನ್ನು ಮುಂದೂಡಬೇಕು ಎಂದು ಒತ್ತಾಯಿಸಿದರು.

ಎಐಡಿಎಸ್‌ಒ ರಾಜ್ಯ ಖಜಾಂಚಿ ಸುಭಾಷ್ ಬೆಟ್ಟದಕೊಪ್ಪ, ಜಿಲ್ಲಾ ಕಾರ್ಯದರ್ಶಿ ನಿತಿನ್, ಮಹಾರಾಜ ಕಾಲೇಜಿನ ವಿದ್ಯಾರ್ಥಿಗಳಾದ ಉಮೇಶ್, ಮನೋಜ್, ಕಿರಣ್ ಕುಮಾರ್, ಮಹದೇವ್, ಸಂತೋಷ್, ಪೂಜಾ, ಕವನ, ರಾಽಕಾ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಫಾರಿಗಳಲ್ಲಿ ಇನ್ಮುಂದೆ ತೆರೆದ ವಾಹನಕ್ಕೆ ಅವಕಾಶವಿಲ್ಲ : ಈಶ್ವರ ಖಂಡ್ರೆ

ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು :  ರಾಜ್ಯದ ಐದು ಹುಲಿ…

51 mins ago

ಮ.ಬೆಟ್ಟ | ಮರದ ಕೊಂಬೆ ಬಿದ್ದು ಮೂವರಿಗೆ ಗಾಯ

ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…

3 hours ago

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

6 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

6 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

8 hours ago

ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…

8 hours ago