ಮೈಸೂರು: ರಂಗಾಂತರಂಗ ಮೈಸೂರು ರಂಗತಂಡದ ವತಿಯಿಂದ ನಗರದ ಕುವೆಂಪುನಗರ ಬಡಾವಣೆಯಲ್ಲಿರುವ ಮಕ್ಕಳ ಅಭಿನಯ ರಂಗಶಾಲೆಯಲ್ಲಿ ಕಲರವ ಮಕ್ಕಳ ಬೇಸಿಗೆ ಶಿಬಿರವನ್ನು ಏ.10ರಿಂದ ಮೇ.10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಂಗಾಂತರಂಗ ಸಂಸ್ಥಾಪಕ ಕೀರ್ತಿರಾಜ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೇಸಿಗೆ ಶಿಬಿರವು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ನಡೆಯಲಿದ್ದು, ನಾಟಕ, ಮೈಮ್, ಜನಪದ ಗೀತೆಗಳು, ಯೋಗ ಮತ್ತು ಧ್ಯಾನ, ನೃತ್ಯ, ಚಿತ್ರಕಲೆ, ದೇಶಿ ಆಟಗಳು, ನಿರೂಪಣಾ ಕೌಶಲ್ಯ, ಧ್ವನಿ ಮತ್ತು ಭಾಷಣ ಕೌಶಲ್ಯ, ಪೌರಾಣಿಕ, ಸಾಮಾಜಿಕ, ಐತಿಹಾಸಿಕ ಕಥೆಗಳ ಬಗ್ಗೆ ಮಾಹಿತಿಗಳನ್ನು ತಿಳಿಸಲಾಗುವುದು. ಜೊತೆಗೆ ವಾರಂತ್ಯದ ತರಗತಿಗಳಲ್ಲಿ ಅಭಿನಯ, ಸಂಗೀತ ಮತ್ತು ನೃತ್ಯ ತರಬೇತಿನೀಡಲಾಗುವುದು ಎಂದು ಮಾಹಿತಿನೀಡಿದರು.
4 ವರ್ಷದಿಂದ 14 ವರ್ಷದ ಮಕ್ಕಳಿಗೆ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶಿಬಿರದಶುಲ್ಕ 4000 ರೂ ನಿಗದಿಪಡಿಸಲಾಗಿದ್ದು, ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಉಚಿತ ಪ್ರವೆಶವಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ ಎಂ.ಎಂದ್ರಶೇಖರ್ ಮಾತನಾಡಿ, ಇತ್ತೀಚಿನ ಮಕ್ಕಳಿಗೆ ಹಳ್ಳಿಯ ಸೊಗಡು,ಅಜ್ಜಿ ಹೇಳಿಕೊಡುವಕಥೆಗಳು ಸೇರಿದಂತೆ ಯಾವ ಸೌಭಾಗ್ಯವೂ ಸಿಗುತ್ತಿಲ್ಲ. ಆದ್ದರಿಂದ ರಂಗ ತರಬೇತಿ ಶಿಬಿರಗಳು ಇತ್ತೀಚಿನ ವಿದ್ಯಾರ್ಥಿಗಳಲ್ಲಿ ವಿವಿಧ ಬಗೆಯ ಕಥೆಗಳನ್ನು, ಜಾನಪದ ಸೊಗಡನ್ನು ತಿಳಿಸುತ್ತದೆ. ಹೊಸ ಬಗೆಯ ಆಲೋಚನೆ ಮತ್ತು ಮೌಲ್ಯಗಳನ್ನು ಬಿತ್ತುವಲ್ಲಿ ರಂಗ ತರಬೇತಿ ಶಿಬಿರಗಳು ಸಹಕಾರಿಯಾಗಿದೆ ಎಂದು ತಿಳಿಸಿದರು.
ಶಿಬಿರದ ನಿರ್ದೇಶಕ ಲೋಕನಾಥ್ ನೀನಾಸಂ, ಮಕ್ಕಳ ಪೋಷಕರಾದ ಚೆಲುವರಾಜು, ಹಿರಣ್ಣಯ್ಯ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಎಚ್.ಡಿ.ಕೋಟೆ : ತಾಲೂಕಿನ ಚೌಡಹಳ್ಳಿ ಗ್ರಾಮದ ಪಕ್ಕದಲ್ಲೇ ಇರುವ ಜಮೀನೊಂದರಲ್ಲಿ ಹಸುವಿನ ಮೇಲೆ ದಾಳಿ ನಡೆಸಿರುವ ಹುಲಿ ಹಸುವನ್ನು ಕೊಂದು…
ಮೈಸೂರು : ಮೈಸೂರು ಮೂಲದ ಗೃಹಿಣಿಯೊಬ್ಬಳು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಉತ್ತರ ಕರ್ನಾಟಕ ಮೂಲದ ಪೊಲೀಸ್ ಕಾನ್ಸ್ ಟೇಬಲ್ ನೊಂದಿಗೆ…
ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…
ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…
ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…
ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…