ಮೈಸೂರು

ಮೈಸೂರು | ಏ.10 ರಿಂದ ʻಬೇಸಿಗೆ ಶಿಬಿರʼ

ಮೈಸೂರು: ರಂಗಾಂತರಂಗ ಮೈಸೂರು ರಂಗತಂಡದ ವತಿಯಿಂದ ನಗರದ ಕುವೆಂಪುನಗರ ಬಡಾವಣೆಯಲ್ಲಿರುವ ಮಕ್ಕಳ ಅಭಿನಯ ರಂಗಶಾಲೆಯಲ್ಲಿ ಕಲರವ ಮಕ್ಕಳ ಬೇಸಿಗೆ ಶಿಬಿರವನ್ನು ಏ.10ರಿಂದ ಮೇ.10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಂಗಾಂತರಂಗ ಸಂಸ್ಥಾಪಕ ಕೀರ್ತಿರಾಜ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೇಸಿಗೆ ಶಿಬಿರವು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ನಡೆಯಲಿದ್ದು, ನಾಟಕ, ಮೈಮ್, ಜನಪದ ಗೀತೆಗಳು, ಯೋಗ ಮತ್ತು ಧ್ಯಾನ, ನೃತ್ಯ, ಚಿತ್ರಕಲೆ, ದೇಶಿ ಆಟಗಳು, ನಿರೂಪಣಾ ಕೌಶಲ್ಯ, ಧ್ವನಿ ಮತ್ತು ಭಾಷಣ ಕೌಶಲ್ಯ, ಪೌರಾಣಿಕ, ಸಾಮಾಜಿಕ, ಐತಿಹಾಸಿಕ ಕಥೆಗಳ ಬಗ್ಗೆ ಮಾಹಿತಿಗಳನ್ನು ತಿಳಿಸಲಾಗುವುದು. ಜೊತೆಗೆ ವಾರಂತ್ಯದ ತರಗತಿಗಳಲ್ಲಿ ಅಭಿನಯ, ಸಂಗೀತ ಮತ್ತು ನೃತ್ಯ ತರಬೇತಿನೀಡಲಾಗುವುದು ಎಂದು ಮಾಹಿತಿನೀಡಿದರು.

4 ವರ್ಷದಿಂದ 14 ವರ್ಷದ ಮಕ್ಕಳಿಗೆ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶಿಬಿರದಶುಲ್ಕ 4000 ರೂ ನಿಗದಿಪಡಿಸಲಾಗಿದ್ದು, ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಉಚಿತ ಪ್ರವೆಶವಿದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ ಎಂ.ಎಂದ್ರಶೇಖರ್ ಮಾತನಾಡಿ, ಇತ್ತೀಚಿನ ಮಕ್ಕಳಿಗೆ ಹಳ್ಳಿಯ ಸೊಗಡು,ಅಜ್ಜಿ ಹೇಳಿಕೊಡುವಕಥೆಗಳು ಸೇರಿದಂತೆ ಯಾವ ಸೌಭಾಗ್ಯವೂ ಸಿಗುತ್ತಿಲ್ಲ. ಆದ್ದರಿಂದ ರಂಗ ತರಬೇತಿ ಶಿಬಿರಗಳು ಇತ್ತೀಚಿನ ವಿದ್ಯಾರ್ಥಿಗಳಲ್ಲಿ ವಿವಿಧ ಬಗೆಯ ಕಥೆಗಳನ್ನು, ಜಾನಪದ ಸೊಗಡನ್ನು ತಿಳಿಸುತ್ತದೆ. ಹೊಸ ಬಗೆಯ ಆಲೋಚನೆ ಮತ್ತು ಮೌಲ್ಯಗಳನ್ನು ಬಿತ್ತುವಲ್ಲಿ ರಂಗ ತರಬೇತಿ ಶಿಬಿರಗಳು ಸಹಕಾರಿಯಾಗಿದೆ ಎಂದು ತಿಳಿಸಿದರು.

ಶಿಬಿರದ ನಿರ್ದೇಶಕ ಲೋಕನಾಥ್ ನೀನಾಸಂ, ಮಕ್ಕಳ ಪೋಷಕರಾದ ಚೆಲುವರಾಜು, ಹಿರಣ್ಣಯ್ಯ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಂಡಿ ಮಾರುಕಟ್ಟೆ : ಹೊರಗೆ ಥಳುಕು-ಒಳಗೆ ಹುಳುಕು

ಶಿಥಿಲಗೊಂಡಿರುವ ಸುಮಾರು 130 ವರ್ಷ ಇತಿಹಾಸ ಹೊಂದಿರುವ ಕಟ್ಟಡ ಕೆ.ಪಿ.ಮದನ್ ಮೈಸೂರು : ಪುಟ್ಟದಾದರೂ ವಿಶಿಷ್ಟ ವಾಸ್ತು ಶೈಲಿಯಿಂದ ಗಮನಸೆಳೆಯುವ…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ 14 ಗುರುವಾರ

2 hours ago

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

15 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

16 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

17 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

17 hours ago