ಮೈಸೂರು: ರಂಗಾಂತರಂಗ ಮೈಸೂರು ರಂಗತಂಡದ ವತಿಯಿಂದ ನಗರದ ಕುವೆಂಪುನಗರ ಬಡಾವಣೆಯಲ್ಲಿರುವ ಮಕ್ಕಳ ಅಭಿನಯ ರಂಗಶಾಲೆಯಲ್ಲಿ ಕಲರವ ಮಕ್ಕಳ ಬೇಸಿಗೆ ಶಿಬಿರವನ್ನು ಏ.10ರಿಂದ ಮೇ.10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಂಗಾಂತರಂಗ ಸಂಸ್ಥಾಪಕ ಕೀರ್ತಿರಾಜ್ ತಿಳಿಸಿದರು.
ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೇಸಿಗೆ ಶಿಬಿರವು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ನಡೆಯಲಿದ್ದು, ನಾಟಕ, ಮೈಮ್, ಜನಪದ ಗೀತೆಗಳು, ಯೋಗ ಮತ್ತು ಧ್ಯಾನ, ನೃತ್ಯ, ಚಿತ್ರಕಲೆ, ದೇಶಿ ಆಟಗಳು, ನಿರೂಪಣಾ ಕೌಶಲ್ಯ, ಧ್ವನಿ ಮತ್ತು ಭಾಷಣ ಕೌಶಲ್ಯ, ಪೌರಾಣಿಕ, ಸಾಮಾಜಿಕ, ಐತಿಹಾಸಿಕ ಕಥೆಗಳ ಬಗ್ಗೆ ಮಾಹಿತಿಗಳನ್ನು ತಿಳಿಸಲಾಗುವುದು. ಜೊತೆಗೆ ವಾರಂತ್ಯದ ತರಗತಿಗಳಲ್ಲಿ ಅಭಿನಯ, ಸಂಗೀತ ಮತ್ತು ನೃತ್ಯ ತರಬೇತಿನೀಡಲಾಗುವುದು ಎಂದು ಮಾಹಿತಿನೀಡಿದರು.
4 ವರ್ಷದಿಂದ 14 ವರ್ಷದ ಮಕ್ಕಳಿಗೆ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶಿಬಿರದಶುಲ್ಕ 4000 ರೂ ನಿಗದಿಪಡಿಸಲಾಗಿದ್ದು, ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಉಚಿತ ಪ್ರವೆಶವಿದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ ಎಂ.ಎಂದ್ರಶೇಖರ್ ಮಾತನಾಡಿ, ಇತ್ತೀಚಿನ ಮಕ್ಕಳಿಗೆ ಹಳ್ಳಿಯ ಸೊಗಡು,ಅಜ್ಜಿ ಹೇಳಿಕೊಡುವಕಥೆಗಳು ಸೇರಿದಂತೆ ಯಾವ ಸೌಭಾಗ್ಯವೂ ಸಿಗುತ್ತಿಲ್ಲ. ಆದ್ದರಿಂದ ರಂಗ ತರಬೇತಿ ಶಿಬಿರಗಳು ಇತ್ತೀಚಿನ ವಿದ್ಯಾರ್ಥಿಗಳಲ್ಲಿ ವಿವಿಧ ಬಗೆಯ ಕಥೆಗಳನ್ನು, ಜಾನಪದ ಸೊಗಡನ್ನು ತಿಳಿಸುತ್ತದೆ. ಹೊಸ ಬಗೆಯ ಆಲೋಚನೆ ಮತ್ತು ಮೌಲ್ಯಗಳನ್ನು ಬಿತ್ತುವಲ್ಲಿ ರಂಗ ತರಬೇತಿ ಶಿಬಿರಗಳು ಸಹಕಾರಿಯಾಗಿದೆ ಎಂದು ತಿಳಿಸಿದರು.
ಶಿಬಿರದ ನಿರ್ದೇಶಕ ಲೋಕನಾಥ್ ನೀನಾಸಂ, ಮಕ್ಕಳ ಪೋಷಕರಾದ ಚೆಲುವರಾಜು, ಹಿರಣ್ಣಯ್ಯ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…
ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್ಪೋಸ್ಟ್ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…
ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…
ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…
ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…