ಮೈಸೂರು

ಮೈಸೂರು | ಏ.10 ರಿಂದ ʻಬೇಸಿಗೆ ಶಿಬಿರʼ

ಮೈಸೂರು: ರಂಗಾಂತರಂಗ ಮೈಸೂರು ರಂಗತಂಡದ ವತಿಯಿಂದ ನಗರದ ಕುವೆಂಪುನಗರ ಬಡಾವಣೆಯಲ್ಲಿರುವ ಮಕ್ಕಳ ಅಭಿನಯ ರಂಗಶಾಲೆಯಲ್ಲಿ ಕಲರವ ಮಕ್ಕಳ ಬೇಸಿಗೆ ಶಿಬಿರವನ್ನು ಏ.10ರಿಂದ ಮೇ.10ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ರಂಗಾಂತರಂಗ ಸಂಸ್ಥಾಪಕ ಕೀರ್ತಿರಾಜ್ ತಿಳಿಸಿದರು.

ನಗರದ ಪತ್ರಕರ್ತರ ಭವನದಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೇಸಿಗೆ ಶಿಬಿರವು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ನಡೆಯಲಿದ್ದು, ನಾಟಕ, ಮೈಮ್, ಜನಪದ ಗೀತೆಗಳು, ಯೋಗ ಮತ್ತು ಧ್ಯಾನ, ನೃತ್ಯ, ಚಿತ್ರಕಲೆ, ದೇಶಿ ಆಟಗಳು, ನಿರೂಪಣಾ ಕೌಶಲ್ಯ, ಧ್ವನಿ ಮತ್ತು ಭಾಷಣ ಕೌಶಲ್ಯ, ಪೌರಾಣಿಕ, ಸಾಮಾಜಿಕ, ಐತಿಹಾಸಿಕ ಕಥೆಗಳ ಬಗ್ಗೆ ಮಾಹಿತಿಗಳನ್ನು ತಿಳಿಸಲಾಗುವುದು. ಜೊತೆಗೆ ವಾರಂತ್ಯದ ತರಗತಿಗಳಲ್ಲಿ ಅಭಿನಯ, ಸಂಗೀತ ಮತ್ತು ನೃತ್ಯ ತರಬೇತಿನೀಡಲಾಗುವುದು ಎಂದು ಮಾಹಿತಿನೀಡಿದರು.

4 ವರ್ಷದಿಂದ 14 ವರ್ಷದ ಮಕ್ಕಳಿಗೆ ಶಿಬಿರದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಶಿಬಿರದಶುಲ್ಕ 4000 ರೂ ನಿಗದಿಪಡಿಸಲಾಗಿದ್ದು, ಸರ್ಕಾರಿ ಶಾಲೆಯ ಇಬ್ಬರು ವಿದ್ಯಾರ್ಥಿಗಳಿಗೆ ಉಚಿತ ಪ್ರವೆಶವಿದೆ ಎಂದು ತಿಳಿಸಿದರು.

ಕನ್ನಡ ಸಾಹಿತ್ಯ ಕಲಾಕೂಟದ ಅಧ್ಯಕ ಎಂ.ಎಂದ್ರಶೇಖರ್ ಮಾತನಾಡಿ, ಇತ್ತೀಚಿನ ಮಕ್ಕಳಿಗೆ ಹಳ್ಳಿಯ ಸೊಗಡು,ಅಜ್ಜಿ ಹೇಳಿಕೊಡುವಕಥೆಗಳು ಸೇರಿದಂತೆ ಯಾವ ಸೌಭಾಗ್ಯವೂ ಸಿಗುತ್ತಿಲ್ಲ. ಆದ್ದರಿಂದ ರಂಗ ತರಬೇತಿ ಶಿಬಿರಗಳು ಇತ್ತೀಚಿನ ವಿದ್ಯಾರ್ಥಿಗಳಲ್ಲಿ ವಿವಿಧ ಬಗೆಯ ಕಥೆಗಳನ್ನು, ಜಾನಪದ ಸೊಗಡನ್ನು ತಿಳಿಸುತ್ತದೆ. ಹೊಸ ಬಗೆಯ ಆಲೋಚನೆ ಮತ್ತು ಮೌಲ್ಯಗಳನ್ನು ಬಿತ್ತುವಲ್ಲಿ ರಂಗ ತರಬೇತಿ ಶಿಬಿರಗಳು ಸಹಕಾರಿಯಾಗಿದೆ ಎಂದು ತಿಳಿಸಿದರು.

ಶಿಬಿರದ ನಿರ್ದೇಶಕ ಲೋಕನಾಥ್ ನೀನಾಸಂ, ಮಕ್ಕಳ ಪೋಷಕರಾದ ಚೆಲುವರಾಜು, ಹಿರಣ್ಣಯ್ಯ ಮತ್ತಿತರರು ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಒಂದೇ ಕುಟುಂಬದ ಮೂವರ ಆತ್ಮಹತ್ಯೆ ಪ್ರಕರಣ: ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ

ಟಿ.ನರಸೀಪುರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲ್ಲೂಕಿನ ಕೆಂಪಯ್ಯನಹುಂಡಿ ಗ್ರಾಮಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ…

7 mins ago

ಮೈಸೂರಿನ ಎರಡು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಕರೆ: ಕೆಲಕಾಲ ಆತಂಕ ಸೃಷ್ಟಿ

ಮೈಸೂರು: ನಗರದ ಪ್ರಮುಖ ಎರಡು ಹೋಟೆಲ್‌ಗಳನ್ನು ಬಾಂಬ್ ಮೂಲಕ ಸ್ಛೋಟಿಸುವುದಾಗಿ ಇ-ಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದು, ಕೆಲಕಾಲ ಆತಂಕ…

38 mins ago

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

48 mins ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

2 hours ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

2 hours ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

3 hours ago