ಮೈಸೂರು

ಮೈಸೂರು | ಪ್ರವಾಸಿ ತಾಣಗಳ ಅಭಿವೃದ್ಧಿ ಕ್ರಮಕ್ಕೆ ಡಿಸಿ ಸೂಚನೆ

ಮೈಸೂರು:  ಜಿಲ್ಲೆಯ ಪ್ರವಾಸೋಧ್ಯಮ ಅಭಿವೃದ್ಧಿಗೆ ವಿಪುಲ ಅವಕಾಶಗಳಿವೆ. ಪ್ರವಾಸಿ ತಾಣಗಳ ಅಭಿವೃದ್ಧಿಗೆ ವರದಿ ತಯಾರಿಸಿ ಅಭಿವೃದ್ಧಿಗೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿಗಳಾದ ಜಿ ಲಕ್ಷ್ಮೀಕಾಂತ ರೆಡ್ಡಿ  ತಿಳಿಸಿದರು.

ಇಂದು ಜಿಲ್ಲಾಧಿಕಾರಿಗಳ ಕಛೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರವಾಸೋಧ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೋಮ್ ಸ್ಟೇ ಗಳು ಹಳ್ಳಿಗಳ ರೀತಿಯ ಅನುಭವ ನೀಡುವ ತಾಣಗಳು. ಹೋಮ್ ಸ್ಟೇ ಗಳಲ್ಲಿ 5 ರೂಮ್ ಗಳು ಮಾತ್ರ ಇರಬೇಕು. ನಗರ ಪ್ರದೇಶಗಳಲ್ಲಿ ಹೋಟೆಲ್ ಗಳನ್ನು ಹೋಮ್ ಸ್ಟೇ ಗಳಾಗಿ ಮಾಡುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ಅವರು ಅಲ್ಲೇ ವಾಸವಿದ್ದು 5 ಕ್ಕಿಂತ ಕಡಿಮೆ ರೂಮ್ ಗಳನ್ನು ನಿರ್ಮಿಸಿಕೊಂಡಿದ್ದಾರೆ ಇದಕ್ಕೆ ಯಾವುದೇ ಕನ್ವರ್ಷನ್ ಬೇಕಿಲ್ಲ ಎಂದು ತಿಳಿಸಿ ಹಾಗೂ ಎನ್ ಓಸಿ ನೀಡಲು ಮಹಾನಗರ ಪಾಲಿಕೆ ಆಯುಕ್ತರಿಗೆ ತಿಳಿಸಿದರು.

ವರುಣಾ ಕೆರೆಯನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಪಡಿಸಲು ಟೆಂಡರ್ ನೀಡಲಾಗಿದೆ ಅದೇ ರೀತಿ ಜಿಲ್ಲೆಯ ಕೆರೆಗಳಲ್ಲಿ ಪ್ರವಾಸಿ ಬೋಟಿಂಗ್ ವ್ಯವಸ್ಥೆ ಮಾಡಲು ಸಾಧ್ಯತೆ ಇರುವ ಎರಡು ಮೂರು ಕೆರೆಗಳನ್ನು ಗುರುತಿಸುವಂತೆ ಪ್ರವಾಸೋಧ್ಯಮ ಇಲಾಖೆಯ ಜಂಟಿ ನಿರ್ದೇಶಕರಿಗೆ ಸೂಚನೆ ನೀಡಿದರು.

ಪ್ರವಾಸೋಧ್ಯಮ ಇಲಾಖೆ ಜಂಟಿ ನಿರ್ದೇಶಕಿ ಎಂ.ಕೆ ಸವಿತಾ ಮಾತನಾಡಿ, ಹೊಮ್ ಸ್ಟೆ ಗಳು ವಾಣಿಜ್ಯ ಉದ್ಯಮಗಳು ಅಲ್ಲ. ಕೇಂದ್ರ ಪ್ರವಾಸೋಧ್ಯಮ ಇಲಾಖೆಯ ವತಿಯಿಂದ ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ ಸೆಲ್ಪಿ ಪಾಯಿಂಟ್ ಗಳನ್ನು ಹಾಗೂ ಮಾಹಿತಿ ಫಲಕಗಳನ್ನು ಅಳವಡಿಸಲಾಗುತ್ತಿದೆ. ಮೈಸೂರಿನ ಅಧಿಕೃತ ಲೋಗೋವನ್ನು ಜಿಲ್ಲೆಯ ಎಲ್ಲಾ ಸರ್ಕಾರಿ ಕಚೇರಿಗಳು ಇತರೆ ಕ್ಷೇತ್ರಗಳಲ್ಲಿ ಅಗತ್ಯವಾಗಿ ಬಳಸಬೇಕು ಎಂದು ತಿಳಿಸಿದರು.

ವರುಣಾ ಕೆರೆಯಲ್ಲಿ ಸಾಹಸ ಕ್ರೀಡೆಗಳು ಹಾಗೂ ಸದರಿ ಸ್ಥಳಗಳಲ್ಲಿ ಜಿಪ್ ಲೈನ್, ಸ್ಕೈ ಸೈಕಲ್ ಮತ್ತು ಜಾಯಿಂಟ್ ಸ್ವಿಂಗ್ ಎಂಬ ಹೆಚ್ಚುವರಿ ಚಟುವಟಿಕೆಗಳನ್ನು ಆರಂಭಿಸಲು ಅನುಮತಿ ನೀಡಬಹುದಾಗಿದೆ ಎಂದು ಸಭೆಗೆ ಮಾಹಿತಿ ನೀಡಿದ ಅವರು ಪ್ರವಾಸೋಧ್ಯಮ ಇಲಾಖೆಯ ಸಾಮಾಜಿಕ ಜಾಲ ತಾಣವನ್ನು ಉನ್ನತ ಮಟ್ಟಕ್ಕೆ ಏರಿಸಲು ನೇರ ಪಾಲುದಾರರು ಅಥವಾ ಖಾಸಗಿ ಸಹಭಾಗಿತ್ವವನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.

ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯದ ಸ್ವದೇಶ್ ದರ್ಶನ 2.0 ಅಡಿಯಲ್ಲಿ ಮೈಸೂರಿನ ಫೇಸ್ 1ರಲ್ಲಿ ಮೃಗಾಲಯ ಹಾಗೂ ಕಾರಂಜಿ ಕೆರೆಯ ಒಳಗೊಂಡಂತೆ ಟಾಂಗಾ ರೈಡ್, ಎಕೋಲಾಜಿಕಲ್ ಎಕ್ಸ್ ಫೀರಿಯ್ಸ್ ಸಂಬಂಧ ಡಿಪಿಆರ್ ಸಲ್ಲಿಕೆಯಾಗಿದ್ದು ಟೆಂಡರ್ ಕರೆಯಲಾಗಿದೆ. ಸ್ವದೇಶ ದರ್ಶನ್ ಯೋಜನೆಯ 2ನೇ ಹಂತದಲ್ಲಿ ನಗರದ ಹೃದಯ ಭಾಗದಲ್ಲಿರುವ ಹಳೆ ಜಿಲ್ಲಾಧಿಕಾರಿಗಳ ಕಚೇರಿಯನ್ನು ಮ್ಯೂಸಿಯಂ ಪರಿವರ್ತನೆ ಮಾಡಲು ಕೇಂದ್ರ ಪ್ರವಾಸೋದ್ಯಮ ಸಚಿವಾಲಯಕ್ಕೆ ಡಿಪಿಆರ್ ಸಲ್ಲಿಸಿದ್ದು ಅಂತಿಮ ಅನುಮೋದನೆ ಹಾಗೂ ಅನುದಾನ ಬಿಡುಗಡೆಗೆ ಸಲ್ಲಿಸಿಲಾಗಿದೆ ಎಂದು ಪ್ರವಾಸೋದ್ಯಮ ಜಂಟಿ ನಿರ್ದೇಶಕರು ಸಭೆಯಲ್ಲಿ ಮಾಹಿತಿ ನೀಡಿದರು.

ಸಭೆಯಲ್ಲಿ ವಿಧಾನ ಪರಿಷತ್ ಶಾಸಕ ವಿವೇಕಾನಂದ, ಮಹಾನಗರ ಪಾಲಿಕೆ ಆಯುಕ್ತ ಅಸಾದ್ ಉರ್ ರೆಹಮಾನ್ ಶರೀಫ್, ಡಿಸಿಎಫ್ ಡಾ. ಕೆ.ಎನ್. ಬಸವರಾಜು, ಡಿ.ಸಿ.ಪಿ ಮುತ್ತುರಾಜ್, ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಪ್ರಭುಸ್ವಾಮಿ, ಜಿಎಸ್ ಎಸ್ ಯೋಗ ಸಂಸ್ಥೆಯ ಶ್ರೀ ಹರಿ, ಗೈಡ್ಸ್ ಅಸೋಸಿಯೇಷನ್ ಅಧ್ಯಕ್ಷ ಅಶೋಕ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಧ್ವನಿವರ್ಧಕ ಬಳಕೆ; ನಿಯಮ ಉಲ್ಲಂಘಿಸಿದಲ್ಲಿ ಕ್ರಮ

ನವೀನ್ ಡಿಸೋಜ ರಾತ್ರಿ ೧೦ರಿಂದ ಬೆಳಿಗ್ಗೆ ೬ರವರೆಗೆ ಧ್ವನಿವರ್ಧಕ, ಡಿಜೆ ಬಳಕೆಗೆ ನಿರ್ಬಂಧ; ನಿಯಮ ಪಾಲಿಸಲು ಪೊಲೀಸ್ ಇಲಾಖೆ ಮನವಿ…

2 mins ago

ಬಿರುಕು ಬಿಟ್ಟ ಗೋಡೆಗಳು, ಉದುರಿ ಬೀಳುವ ಸಿಮೆಂಟ್ ಪದರ…

ಭೇರ್ಯ ಮಹೇಶ್ ಕೆ.ಆರ್.ನಗರ ತಾಲ್ಲೂಕು ಪಂಚಾಯಿತಿ ಕಚೇರಿ ಕಟ್ಟಡದ ದುಸ್ಥಿತಿ; ಸಾರ್ವಜನಿಕರ ಅಸಮಾಧಾನ  ಕೆ.ಆರ್.ನಗರ: ಬಿರುಕುಬಿಟ್ಟ ಗೋಡೆಗಳು, ಉದುರಿ ಬೀಳುವ…

8 mins ago

ಬಾರದ ಗೌರವಧನ; ಬದುಕು ಡೋಲಾಯಮಾನ

ಎಂ.ಕೇಶವ್ ವರ್ಷದಿಂದ ಗೌರವಧನ ಪಾವತಿಯಾಗದೆ ೩೦೦ ಮಂದಿ ಡಿಟಿಸಿಗಳ ಪರದಾಟ ಮೈಸೂರು: ಇಲ್ಲಿನ ಲಲಿತಮಹಲ್ ರಸ್ತೆಯಲ್ಲಿರುವ ಅಬ್ದುಲ್ ನಜೀರ್ ಸಾಬ್…

13 mins ago

ಚಾ.ನಗರ | ಗುಣಮಟ್ಟದ ಕೊರತೆ : ಹೋಟೆಲ್, ರೆಸ್ಟೋರೆಂಟ್ ಬಂದ್

ಚಾ.ನಗರ ಜಿಲ್ಲಾಧಿಕಾರಿ,ಆಹಾರ ಸುರಕ್ಷತಾ ಅಧಿಕಾರಿ ದಿಡೀರ್ ಭೇಟಿ, ಪರಿಶೀಲನೆ ಚಾಮರಾಜನಗರ : ಅವಧಿ ಮೀರಿದ ಆಹಾರ ಪದಾರ್ಥಗಳ ಬಳಕೆ, ಗುಣಮಟ್ಟದ…

10 hours ago

ಹಳೇ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ ; ಪುಷ್ಪವೃಷ್ಟಿಗೈದು ಶಿಕ್ಷಕರನ್ನು ಸ್ವಾಗತಿಸಿ, ಸನ್ಮಾನಿಸಿದ ವಿದ್ಯಾರ್ಥಿ ಬಳಗ

ಗುಂಡ್ಲುಪೇಟೆ : ಕಾಲದ ಚಕ್ರ ಉರುಳಿ 20 ವರ್ಷಗಳು ಕಳೆದರೂ, ಗುರು-ಶಿಷ್ಯರ ನಡುವಿನ ಪ್ರೀತಿ, ಗೌರವ ಮತ್ತು ಆತ್ಮೀಯತೆ ಮಾತ್ರ…

11 hours ago