ಮೈಸೂರು: ವಿವಿಧ ಸ್ಥಳಗಳ ಬಗ್ಗೆ ಪರಿಚಯ ಮಾಡುವ ಆನ್ಲೈನ್ ಕೆಲಸಕ್ಕೆ ಸೇರಿದ್ದ ಇಂಜಿನಿಯರ್ ಒಬ್ಬರು ವಂಚಕರ ಮಾತನ್ನು ನಂಬಿ ೧೧ ಲಕ್ಷ ರೂ. ಹಣವನ್ನು ಷೇರು ಮಾರುಕಟ್ಟೆಯಲ್ಲಿ ತೊಡಗಿಸಿ ಮೋಸಕ್ಕೆ ಒಳಗಾಗಿದ್ದಾರೆ.
ನಗರದ ವಿಜಯನಗರ ೨ನೇ ಹಂತದ ನಿವಾಸಿಯೊಬ್ಬರು ಆನ್ಲೈನ್ ಮೂಲಕ ಕೆಲ ಸ್ಥಳಗಳನ್ನು ಗ್ರಾಹಕರಿಗೆ ಪರಿಚಯ ಮಾಡಿಸುವ ಕೆಲಸಕ್ಕೆ ಸೇರಿದ್ದರು. ಇದಕ್ಕಾಗಿ ಅವರಿಗೆ ಕಂಪೆನಿ ಹಣವನ್ನು ನೀಡುತ್ತಿತ್ತು.
ಇದೇ ವೇಳೆ ಅಲ್ಲಿನ ವಂಚಕರು ನೀವು ಹಣ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭ ಗಳಿಸಬಹುದು ಎಂದು ಆಸೆ ಹುಟ್ಟಿಸಿದ್ದಾರೆ. ಅವರ ಮಾತನ್ನು ನಂಬಿದ ಇಂಜಿನಿಯರ್ ಹಂತಹಂತವಾಗಿ ೧೧,೧೦ ಲಕ್ಷ ರೂ. ಹಣವನ್ನು ತೊಡಗಿಸಿ ವಂಚನೆಗೀಡಾಗಿದ್ದಾರೆ. ಈ ಸಂಬಂಧ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…
ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…