ಮೈಸೂರು

ಮೈಸೂರು | ಕಾದ ಭೂಮಿಯ ತಣಿಸಿದ ವರ್ಷದ ಮೊದಲ ಮಳೆ

ಮೈಸೂರು: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ(ಏ.2) ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಜಳಕ್ಕೆ ಬಸವಳಿದಿದ್ದ ಜನರಿಗೆ ಮಳೆರಾಯ ಸದ್ಯ ತಂಪೆರೆದಿದ್ದಾನೆ.

ರಾತ್ರಿ 8 ಗಂಟೆಯ ಹೊತ್ತಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು. ಅಲ್ಲದೆ, ಇನ್ನೂ ಉಳಿದ ತಾಲ್ಲೂಕಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮೋಡ ಕವಿದ ವಾತಾವರಣದಿಂದ ಮಳೆ ಆಗಿದೆ.

ಮಳೆಯ ಮುನ್ಸೂಚನೆ ಇಲ್ಲದೆ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಮಳೆಯಿಂದಾಗಿ ಅಂಗಡಿ-ಮುಗ್ಗಟ್ಟುಗಳ ಬಳಿ ಆಶ್ರಯ ಪಡೆದರು. ಇನ್ನೂ ಬೈಕ್‌ ಸವಾರರಿಗೆ ಸಂಚಾರದ ಸಮಸ್ಯೆಯೂ ಉಂಟಾಯಿತು.

ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ವರ್ಷದ ಮೊದಲ ಮಳೆಯಿಂದಾಗಿ ಮೈಸೂರು ಸದ್ಯ ತಂಪಾಗಿದೆ. ವರ್ಷದ ಮೊದಲ ಮಳೆ ಕಂಡು ಜನರಲ್ಲಿ ಸಂತಸ ಮೂಡಿದೆ.

ನಗರದ ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತ್ರಿ ರಸ್ತೆ, ಅಶೋಕ ರಸ್ತೆ, ನಾರಾಯಣ ಶಾಸಿ ರಸ್ತೆ, ಚಾಮರಾಜ ಜೋಡಿರಸ್ತೆ, ಅಗ್ರಹಾರ, ಇರ್ವಿನ್ ರಸ್ತೆ, ಗಾಂಧಿನಗರ, ಉದಯಗಿರಿ, ಗಂಗೋತ್ರಿ ಬಡವಣೆ ಮೊದಲಾದ ಕಡೆಗಳಲ್ಲಿ ಮಳೆ ಜೋರು ಸುರಿಯಿತು. ಈ ವೇಳೆ ಜನರು ಅಲ್ಲಲ್ಲಿ ನಿಂತು ಆಶ್ರಯ ಪಡೆದರೆ, ಹೊರಗಿನವರು ನಗರ ಮತ್ತು ಸಬ್ ಅರ್ಬನ್ ಬಸ್ ನಿಲ್ದಾಣಕ್ಕೆ ಮಳೆಯಲ್ಲೇ ನೆನೆದು ಬಸ್‌ಗಳನ್ನು ಹತ್ತಿ ಹೊರಟರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಾಲ್ಮೀಕಿ ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ರಾಯಚೂರು: ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ರಾಯಚೂರಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ವೇಳೆಯಲ್ಲಿ…

9 mins ago

ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲಿ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ಬಹಿರಂಗಪಡಿಸಲು ಎಂದು ಶಾಸಕ ತನ್ವೀರ್‌ ಸೇಠ್‌ ಆಗ್ರಹಿಸಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ…

1 hour ago

ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ: ಅಕ್ರಮ ತಡೆಗೆ ಹದ್ದಿನ ಕಣ್ಣು

ಬೆಂಗಳೂರು: ರಾಜ್ಯದಲ್ಲಿ ನಾಳೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಯಾವುದೇ ಅಕ್ರಮ ನಡೆಯದಂತೆ ಪರೀಕ್ಷಾ ಬೋರ್ಡ್‌ ಹದ್ದಿನ ಕಣ್ಣಿಟ್ಟಿದೆ. ನಾಳೆಯಿಂದ…

2 hours ago

ರಾಮನಗರ| ಜಿಮ್‌ ಟ್ರೇನರ್‌ಗೆ ಪ್ರೇಯಸಿಯಿಂದಲೇ ಚಾಕು ಇರಿತ

ರಾಮನಗರ: ಜಿಮ್‌ ಟ್ರೇನರ್‌ಗೆ ಪ್ರೇಯಸಿಯೇ ಚಾಕುವಿನಿಂದ ಇರಿದು ಹಲ್ಲೆ ನಡೆಸಿರುವ ಘಟನೆ ರಾಮನಗರ ತಾಲ್ಲೂಕಿನಲ್ಲಿ ನಡೆದಿದೆ. ರಾಮನಗರದ ಬಿಡದಿಯಲ್ಲಿ ಈ…

2 hours ago

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ರಿಲೀಫ್‌

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿಗೆ ಸುಪ್ರೀಂಕೋರ್ಟ್‌ ಬಗ್‌ ರಿಲೀಫ್‌ ನೀಡಿದೆ. ಶಾಸಕ ಸ್ಥಾನದಿಂದ ಅವರನ್ನು…

2 hours ago

ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ…

2 hours ago