ಮೈಸೂರು: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ(ಏ.2) ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಜಳಕ್ಕೆ ಬಸವಳಿದಿದ್ದ ಜನರಿಗೆ ಮಳೆರಾಯ ಸದ್ಯ ತಂಪೆರೆದಿದ್ದಾನೆ.
ರಾತ್ರಿ 8 ಗಂಟೆಯ ಹೊತ್ತಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು. ಅಲ್ಲದೆ, ಇನ್ನೂ ಉಳಿದ ತಾಲ್ಲೂಕಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮೋಡ ಕವಿದ ವಾತಾವರಣದಿಂದ ಮಳೆ ಆಗಿದೆ.
ಮಳೆಯ ಮುನ್ಸೂಚನೆ ಇಲ್ಲದೆ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಮಳೆಯಿಂದಾಗಿ ಅಂಗಡಿ-ಮುಗ್ಗಟ್ಟುಗಳ ಬಳಿ ಆಶ್ರಯ ಪಡೆದರು. ಇನ್ನೂ ಬೈಕ್ ಸವಾರರಿಗೆ ಸಂಚಾರದ ಸಮಸ್ಯೆಯೂ ಉಂಟಾಯಿತು.
ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ವರ್ಷದ ಮೊದಲ ಮಳೆಯಿಂದಾಗಿ ಮೈಸೂರು ಸದ್ಯ ತಂಪಾಗಿದೆ. ವರ್ಷದ ಮೊದಲ ಮಳೆ ಕಂಡು ಜನರಲ್ಲಿ ಸಂತಸ ಮೂಡಿದೆ.
ನಗರದ ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತ್ರಿ ರಸ್ತೆ, ಅಶೋಕ ರಸ್ತೆ, ನಾರಾಯಣ ಶಾಸಿ ರಸ್ತೆ, ಚಾಮರಾಜ ಜೋಡಿರಸ್ತೆ, ಅಗ್ರಹಾರ, ಇರ್ವಿನ್ ರಸ್ತೆ, ಗಾಂಧಿನಗರ, ಉದಯಗಿರಿ, ಗಂಗೋತ್ರಿ ಬಡವಣೆ ಮೊದಲಾದ ಕಡೆಗಳಲ್ಲಿ ಮಳೆ ಜೋರು ಸುರಿಯಿತು. ಈ ವೇಳೆ ಜನರು ಅಲ್ಲಲ್ಲಿ ನಿಂತು ಆಶ್ರಯ ಪಡೆದರೆ, ಹೊರಗಿನವರು ನಗರ ಮತ್ತು ಸಬ್ ಅರ್ಬನ್ ಬಸ್ ನಿಲ್ದಾಣಕ್ಕೆ ಮಳೆಯಲ್ಲೇ ನೆನೆದು ಬಸ್ಗಳನ್ನು ಹತ್ತಿ ಹೊರಟರು.
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…
ಮೈಸೂರು : ಕಲರ್ಸ್ ಕನ್ನಡ ವಾಹಿನಿಯ ‘ಗಿಚ್ಚಿ ಗಿಲಿಗಿಲಿ ಜೂನಿಯರ್ಸ್’ ರಿಯಾಲಿಟಿ ಷೋಗಾಗಿ ಡಿ.20 ರಂದು ಬೆಳಿಗ್ಗೆ 11 ಗಂಟೆಗೆ…
ಬೆಳಗಾವಿ : ಆರೋಗ್ಯ ಸೇವೆಯಿಂದ ವಂಚಿತರಾಗಿರುವ ಜನರಿಗೆ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕ ಯೋಜನೆ ನೆರವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಮೈಸೂರು : ಸಿನಿಮಾಗಳು ಮನರಂಜನೆಗಷ್ಟೇ ಸೀಮಿತವಾಗದೆ ಸಾಮಾಜಿಕ ಜವಾಬ್ದಾರಿಯುಳ್ಳ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಖ್ಯಾತ ನಿರ್ದೇಶಕ ಬಿ.ಸುರೇಶ್ ಆಶಿಸಿದರು. ನಗರದ…
ಮೈಸೂರು : ಅಲ್ಪಸಂಖ್ಯಾತರ ಸಮುದಾಯ ವಾಸಿಸುವ ಸ್ಥಳಗಳಲ್ಲಿ ಬಾಲ್ಯ ವಿವಾಹ ಹಾಗೂ ಬಾಲಕಾರ್ಮಿಕ ಪದ್ಧತಿಗಳ ದುಷ್ಪರಿಣಾಮಗಳ ಕುರಿತು ಅರಿವು ಕಾರ್ಯಕ್ರಮಗಳನ್ನು…