ಮೈಸೂರು

ಮೈಸೂರು | ಕಾದ ಭೂಮಿಯ ತಣಿಸಿದ ವರ್ಷದ ಮೊದಲ ಮಳೆ

ಮೈಸೂರು: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ(ಏ.2) ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಜಳಕ್ಕೆ ಬಸವಳಿದಿದ್ದ ಜನರಿಗೆ ಮಳೆರಾಯ ಸದ್ಯ ತಂಪೆರೆದಿದ್ದಾನೆ.

ರಾತ್ರಿ 8 ಗಂಟೆಯ ಹೊತ್ತಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು. ಅಲ್ಲದೆ, ಇನ್ನೂ ಉಳಿದ ತಾಲ್ಲೂಕಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮೋಡ ಕವಿದ ವಾತಾವರಣದಿಂದ ಮಳೆ ಆಗಿದೆ.

ಮಳೆಯ ಮುನ್ಸೂಚನೆ ಇಲ್ಲದೆ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಮಳೆಯಿಂದಾಗಿ ಅಂಗಡಿ-ಮುಗ್ಗಟ್ಟುಗಳ ಬಳಿ ಆಶ್ರಯ ಪಡೆದರು. ಇನ್ನೂ ಬೈಕ್‌ ಸವಾರರಿಗೆ ಸಂಚಾರದ ಸಮಸ್ಯೆಯೂ ಉಂಟಾಯಿತು.

ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ವರ್ಷದ ಮೊದಲ ಮಳೆಯಿಂದಾಗಿ ಮೈಸೂರು ಸದ್ಯ ತಂಪಾಗಿದೆ. ವರ್ಷದ ಮೊದಲ ಮಳೆ ಕಂಡು ಜನರಲ್ಲಿ ಸಂತಸ ಮೂಡಿದೆ.

ನಗರದ ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತ್ರಿ ರಸ್ತೆ, ಅಶೋಕ ರಸ್ತೆ, ನಾರಾಯಣ ಶಾಸಿ ರಸ್ತೆ, ಚಾಮರಾಜ ಜೋಡಿರಸ್ತೆ, ಅಗ್ರಹಾರ, ಇರ್ವಿನ್ ರಸ್ತೆ, ಗಾಂಧಿನಗರ, ಉದಯಗಿರಿ, ಗಂಗೋತ್ರಿ ಬಡವಣೆ ಮೊದಲಾದ ಕಡೆಗಳಲ್ಲಿ ಮಳೆ ಜೋರು ಸುರಿಯಿತು. ಈ ವೇಳೆ ಜನರು ಅಲ್ಲಲ್ಲಿ ನಿಂತು ಆಶ್ರಯ ಪಡೆದರೆ, ಹೊರಗಿನವರು ನಗರ ಮತ್ತು ಸಬ್ ಅರ್ಬನ್ ಬಸ್ ನಿಲ್ದಾಣಕ್ಕೆ ಮಳೆಯಲ್ಲೇ ನೆನೆದು ಬಸ್‌ಗಳನ್ನು ಹತ್ತಿ ಹೊರಟರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ಗ್ಯಾರಂಟಿ ಕೊಡುತ್ತೇವೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕರ್ನಾಟಕದವರಿಗೆ, ವೋಟ್‌ ಇದ್ದವರಿಗೆ ಮಾತ್ರ ನಾವು ಗ್ಯಾರಂಟಿ ಕೊಡುತ್ತೇವೆ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ…

2 hours ago

ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಮನಗರ ಶಾಸಕ ಇಕ್ಬಾಲ್‌ ಹುಸೇನ್‌ಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಕ್ಬಾಲ್‌ ಹುಸೇನ್‌ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ…

4 hours ago

ಹಿರಿಯ ಸಾಹಿತಿ ಪಿ.ಲಂಕೇಶ್‌ ಪತ್ನಿ ಇಂದಿರಾ ಲಂಕೇಶ್‌ ನಿಧನ

ಬೆಂಗಳೂರು: ಲಂಕೇಶ್‌ ಪತ್ರಿಕೆಯ ಸಂಪಾದಕರಾಗಿದ್ದ ಖ್ಯಾತ ಪತ್ರಕರ್ತ ಪಿ.ಲಂಕೇಶ್‌ ಅವರ ಪತ್ನಿ ಇಂದಿರಾ ಲಂಕೇಶ್‌ ಅವರು ಬೆಂಗಳೂರಿನ ಉತ್ತರಹಳ್ಳಿಯಲ್ಲಿರುವ ತಮ್ಮ…

4 hours ago

ಮಹಾರಾಷ್ಟ್ರ| ತೆರೆದ ಬಾವಿಗೆ ಬಿದ್ದ ಪಿಕ್‌ಅಪ್‌ ವಾಹನ: 8 ಮಂದಿ ದುರ್ಮರಣ

ಮುಂಬೈ: ಪಿಕ್‌ ಅಪ್‌ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಹಾಗೂ ನಾಲ್ವರು ಮಕ್ಕಳು…

5 hours ago

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

9 hours ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

9 hours ago