ಮೈಸೂರು

ಮೈಸೂರು | ಕಾದ ಭೂಮಿಯ ತಣಿಸಿದ ವರ್ಷದ ಮೊದಲ ಮಳೆ

ಮೈಸೂರು: ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬುಧವಾರ(ಏ.2) ರಾತ್ರಿ ವರ್ಷದ ಮೊದಲ ಮಳೆ ಸುರಿದಿದೆ. ಬಿಸಿಲಿನ ಜಳಕ್ಕೆ ಬಸವಳಿದಿದ್ದ ಜನರಿಗೆ ಮಳೆರಾಯ ಸದ್ಯ ತಂಪೆರೆದಿದ್ದಾನೆ.

ರಾತ್ರಿ 8 ಗಂಟೆಯ ಹೊತ್ತಿಗೆ ಆರಂಭವಾದ ಮಳೆ ಒಂದು ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು. ಅಲ್ಲದೆ, ಇನ್ನೂ ಉಳಿದ ತಾಲ್ಲೂಕಿನ ಹಲವು ಕಡೆಗಳಲ್ಲಿ ಗುಡುಗು ಸಹಿತ ಮೋಡ ಕವಿದ ವಾತಾವರಣದಿಂದ ಮಳೆ ಆಗಿದೆ.

ಮಳೆಯ ಮುನ್ಸೂಚನೆ ಇಲ್ಲದೆ ಮನೆಗೆ ತೆರಳುತ್ತಿದ್ದ ಸಾರ್ವಜನಿಕರು ಮಳೆಯಿಂದಾಗಿ ಅಂಗಡಿ-ಮುಗ್ಗಟ್ಟುಗಳ ಬಳಿ ಆಶ್ರಯ ಪಡೆದರು. ಇನ್ನೂ ಬೈಕ್‌ ಸವಾರರಿಗೆ ಸಂಚಾರದ ಸಮಸ್ಯೆಯೂ ಉಂಟಾಯಿತು.

ಮುಂದಿನ ನಾಲ್ಕೈದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ವರ್ಷದ ಮೊದಲ ಮಳೆಯಿಂದಾಗಿ ಮೈಸೂರು ಸದ್ಯ ತಂಪಾಗಿದೆ. ವರ್ಷದ ಮೊದಲ ಮಳೆ ಕಂಡು ಜನರಲ್ಲಿ ಸಂತಸ ಮೂಡಿದೆ.

ನಗರದ ಡಿ.ದೇವರಾಜ ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆ, ಧನ್ವಂತ್ರಿ ರಸ್ತೆ, ಅಶೋಕ ರಸ್ತೆ, ನಾರಾಯಣ ಶಾಸಿ ರಸ್ತೆ, ಚಾಮರಾಜ ಜೋಡಿರಸ್ತೆ, ಅಗ್ರಹಾರ, ಇರ್ವಿನ್ ರಸ್ತೆ, ಗಾಂಧಿನಗರ, ಉದಯಗಿರಿ, ಗಂಗೋತ್ರಿ ಬಡವಣೆ ಮೊದಲಾದ ಕಡೆಗಳಲ್ಲಿ ಮಳೆ ಜೋರು ಸುರಿಯಿತು. ಈ ವೇಳೆ ಜನರು ಅಲ್ಲಲ್ಲಿ ನಿಂತು ಆಶ್ರಯ ಪಡೆದರೆ, ಹೊರಗಿನವರು ನಗರ ಮತ್ತು ಸಬ್ ಅರ್ಬನ್ ಬಸ್ ನಿಲ್ದಾಣಕ್ಕೆ ಮಳೆಯಲ್ಲೇ ನೆನೆದು ಬಸ್‌ಗಳನ್ನು ಹತ್ತಿ ಹೊರಟರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರಳುಮರಳು ಮಾತು, ಕ್ಷಮಿಸಿಬಿಡೋಣ : ಎಚ್.ವಿಶ್ವನಾಥ್ ಹೇಳಿಕೆಗೆ ಸಚಿವ ಮಧು ಬಂಗಾರಪ್ಪ ತಿರುಗೇಟು

ಶಿವಮೊಗ್ಗ : ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ‘ಕಾಪಿ ಹೊಡೆಸಿ ಶೇ.94.1 ಫಲಿತಾಂಶ ತಂದಿದ್ದಾರೆ’ ಎಂಬ ಬಿಜೆಪಿ ಎಂಎಲ್‌ಸಿ ಎಚ್.ವಿಶ್ವನಾಥ್ ಅವರ ಹೇಳಿಕೆಗೆ…

20 mins ago

ಭಾರತ-ನ್ಯೂಜಿಲೆಂಡ್‌ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ : 1.88 ಲಕ್ಷ ಕೋಟಿ ಹೂಡಿಕೆ

ನವದೆಹಲಿ : ಭಾರತ ಮತ್ತು ನ್ಯೂಜಿಲೆಂಡ್ ನಡುವೆ ದ್ವಿಪಕ್ಷೀಯ ವ್ಯಾಪಾರ ಮತ್ತು ಹೂಡಿಕೆಯನ್ನು ಉತ್ತೇಜಿಸುವ ನಿಟ್ಟಿನಲ್ಲಿ ಸೋಮವಾರ ನವದೆಹಲಿಯಲ್ಲಿ ʼಮುಕ್ತ…

1 hour ago

ಕಾಂಗ್ರೆಸ್ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಬೆಳಗಾವಿ : ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು. ಆದರೆ…

2 hours ago

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ : ಶಾರಿಕ್‌ಗೆ 10 ವರ್ಷ ಜೈಲು

ಬೆಂಗಳೂರು : ಮಂಗಳೂರು ನಗರದಲ್ಲಿ ನಡೆದಿದ್ದ ಆತಂಕಕಾರಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್‌ನನ್ನು ದೋಷಿ…

2 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭದ್ರತಾ ಲೋಪ ಪ್ರಕರಣ | ಸಿಬ್ಬಂದಿಗಳಿಂದಲೇ ಕೃತ್ಯ ; ಇಬ್ಬರ ಬಂಧನ

ಬೆಂಗಳೂರು : ಐಪಿಎಲ್ ಪಂದ್ಯಗಳ ವೇಳೆ ಭದ್ರತೆ ನಿರ್ವಹಣೆಗಾಗಿ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಳವಡಿಸಿದ್ದ ಸಿಸಿಟಿವಿ ಕ್ಯಾಮೆರಾಗಳ ಸಂಪರ್ಕ ಕಡಿತಗೊಳಿಸುವ ಮೂಲಕ…

3 hours ago

ಮೂರು ದಿನಗಳೊಳಗೆ ಒಪ್ಪಂದಕ್ಕೆ ಬನ್ನಿ : ಇರಾನ್‌ಗೆ ಟ್ರಂಪ್‌ ವಾರ್ನಿಂಗ್‌

ವಾಷಿಂಗ್ಟನ್‌ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇರಾನ್‌ಗೆ ಹೊಸ ಎಚ್ಚರಿಕೆ ನೀಡಿದ್ದು, ಕದನ ವಿರಾಮವನ್ನು ಒಪ್ಪಿಕೊಳ್ಳಲು ಮೂರು…

3 hours ago