ಮೈಸೂರು : ಮನೆಯ ಮುಂಬಾಗಿಲನ್ನು ಮುರಿದು ಒಳ ನುಗ್ಗಿರುವ ಕಳ್ಳರು ಸುಮಾರು ೧ ಕೋಟಿ ರೂ. ಮೌಲ್ಯದ ಚಿನ್ನಾಭರಣ ಮತ್ತು ಬೆಳ್ಳಿ ವಸ್ತುಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ನಗರದ ದಟ್ಟಗಳ್ಳಿ ೩ನೇ ಹಂತದ ಕನಕದಾಸನಗರ ’ಜೆ’ಬ್ಲಾಕ್ನಲ್ಲಿ ವಾಸಿಸುತ್ತಿರುವ ಸಾಫ್ಟ್ವೇರ್ ಎಂಜಿನಿಯರ್ ವಿನಯ್ ಕುಮಾರ್ ಅವರ ಮನೆಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ:-ಮೈಸೂರು | ಮನೆಯಲ್ಲಿ ಕಳ್ಳತನ ; ಸುಮಾರು 1 ಕೋಟಿ ರೂ. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳು ಕಳ್ಳರ ಪಾಲು
ಅ.೨೦ ರಂದು ವಿನಯ್ ತನ್ನ ಪತ್ನಿ ಮತ್ತು ಮಕ್ಕಳೊಂದಿಗೆ ಚಿಕ್ಕಮಗಳೂರಿಗೆ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳಿದ್ದರು. ಅ.೨೧ ರಂದು ಮಧ್ಯಾಹ್ನ ೩ ಗಂಟೆಗೆ ಹಿಂತಿರುಗಿದ್ದರು.
ವಿನಯ್ ಮುಂಭಾಗದ ಬಾಗಿಲು ತೆರೆದಿರುವುದನ್ನು ನೋಡಿ ಆಘಾತಕ್ಕೊಳಗಾಗಿದ್ದರು.
ಮನೆಯೊಳಗೆ ಪ್ರವೇಶಿಸಿದಾಗ ಮಲಗುವ ಕೋಣೆಯಲ್ಲಿದ್ದ ವಾಡ್ರೂಬ್ನಲ್ಲಿ ಇರಿಸಲಾಗಿದ್ದ ಬೆಲೆಬಾಳುವ ವಸ್ತುಗಳು ಕಳ್ಳತನವಾಗಿರುವುದನ್ನು ಗೊತ್ತಾಗಿದೆ. ಖದೀಮರು ಸುಮಾರು ೭೦೦ ಗ್ರಾಂ ತೂಕದ ಚಿನ್ನದ ಆಭರಣಗಳು, ನಾಲ್ಕು ಸರಗಳು, ಮೂರು ಆಭರಣ ಸೆಟ್ಗಳು, ಐದು ಬಳೆಗಳು, ಎಂಟು ಕಿವಿಯೋಲೆಗಳು, ೧೦ ಉಂಗುರಗಳು ಮತ್ತು ೩ ಕೆಜಿ ಬೆಳ್ಳಿ ವಸ್ತುಗಳು ಕಳುವಾಗಿವೆ, ತಕ್ಷಣ, ವಿನಯ್ ಸರಸ್ವತಿಪುರಂ ಪೊಲೀಸರಿಗೆ ಮಾಹಿತಿ ನೀಡಿದಾಗ, ಪೊಲೀಸರು ಶ್ವಾನ ದಳ ಮತ್ತು ಬೆರಳಚ್ಚು ತಜ್ಞರೊಂದಿಗೆ ಬಂದು ಮಹಜರು ನಡೆಸಿದರು. ಈ ಸಂಬಂದ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮದ್ದೂರು : ಮೈಸೂರು ಜಿಲ್ಲೆಯ ಬ್ಲಾಕ್ ಶಿಕ್ಷಣಾಧಿಕಾರಿಗಳು (ಬಿಇಒ) ಪ್ರಯಾಣಿಸುತ್ತಿದ್ದ ವಾಹನ ಅಪಘಾತದಲ್ಲಿ ಕಾರು ಚಾಲಕ ಮೃತಪಟ್ಟಿದ್ದಾರೆ. ಮದ್ದೂರು ಸಮೀಪದ…
ಫಲಾನುಭವಿಗಳಿಗೆ ವಿತರಿಸಲು ಶಾಸಕರ ದಿನಾಂಕ ಸಿಗದೆ ಕೊಠಡಿಯಲ್ಲಿ ತುಂಬಿ ಬೀಗ ಹಾಕಿದ ಅಧಿಕಾರಿಗಳು ಪಿರಿಯಾಪಟ್ಟಣ : ಕೇಂದ್ರ ಸರ್ಕಾರದ ಅಲಿಂಕೋ…
ವೃದ್ಧರು, ವಿಧವೆಯರು, ಅಂಗವಿಕಲರಿಗೆ ಬಾರದ ಮಾಸಿಕ ಹಣ ; ಕಚೇರಿಗಳಿಗೆ ನಿತ್ಯ ಅಲೆದಾಟ ಎಚ್.ಡಿ.ಕೋಟೆ : ವೃದ್ಧರು, ವಿಧವೆಯರು, ಅಂಗವಿಕಲರೂ…
ಬೆಂಗಳೂರು : ಗ್ರಾಮೀಣ ಜನರಿಗೆ ರಾಜ್ಯ ಸರ್ಕಾರ ಮಹತ್ವದ ರಿಲೀಫ್ ನೀಡಿದ್ದು, ಇನ್ನು ಮುಂದೆ ವಾಸಸ್ಥಳ ದೃಢೀಕರಣ ಪತ್ರವನ್ನು ತಮ್ಮ…
ಪರಿಷತ್ ಚುನಾವಣೆ ಫಲಿತಾಂಶದ ಮೂಲಕ ಭಿನ್ನಮತೀಯರು, ಮೈತ್ರಿ ಕೂಟಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ ಡಿಕೆಶಿ ರಾಜ್ಯ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು…
ಅಡ್ಡ ಮತದಾನ ಮಾಡಿ ‘ಆತ್ಮ ಸಾಕ್ಷಿ’ಯೆಂಬ ತಡೆಗೋಡೆಯ ರಕ್ಷಣೆ ಪಡೆದಿರುವ ಶಾಸಕರ ಪತ್ತೆಗೆ ‘ಸತ್ಯಶೋಧನೆ’, ‘ಆಣೆ-ಪ್ರಮಾಣ’ಗಳೆಲ್ಲವೂ ಗುಡ್ಡ ಅಗೆದು ಇಲಿ…