Mysore
19
broken clouds

Social Media

ಸೋಮವಾರ, 09 ಫೆಬ್ರವರಿ 2026
Light
Dark

ಮೈಸೂರು: ರೈತನ ಮೇಲೆ ದಾಳಿ ಮಾಡಿದ ಹುಲಿ ಕೊನೆಗೂ ಸೆರೆ

ಸರಗೂರು: ತಾಲ್ಲೂಕಿನ ಬಡಗಲಪುರ ಗ್ರಾಮದಲ್ಲಿ ನಡೆದ ಸೆರೆ ಕಾರ್ಯಾಚರಣೆಯಲ್ಲಿ ಹುಲಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಹಿಡಿದರು.

ಬಂಡೀಪುರ ಅರಣ್ಯ ವ್ಯಾಪ್ತಿಯ ಯಡಿಯಾಲ ವಲಯದಲ್ಲಿ ಸಾಕಾನೆಗಳ ಸಹಾಯದಿಂದ ಅರವಳಿಕೆ ಮದ್ದು ನೀಡಿ ವ್ಯಾಘ್ರವನ್ನು ಸೆರೆಹಿಡಿಯಲಾಯಿತು. ಈ ಹುಲಿ ಕಳೆದ ಮೂರು ದಿನಗಳ ಹಿಂದೆ ರೈತನ ಮೇಲೆ ದಾಳಿ ಮಾಡಿತ್ತು.

ನಿನ್ನೆಯಿಂದ ಅರಣ್ಯ ಇಲಾಖೆ ತಂಡವು ನಿರಂತರವಾಗಿ ಸೆರೆ ಕಾರ್ಯಾಚರಣೆ ನಡೆಸುತ್ತಿದ್ದು, ಇಂದು ಯಶಸ್ಸು ಕಂಡಿದೆ. ಹುಲಿ ಸೆರೆಯಾಗುತ್ತಿದ್ದಂತೆಯೇ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

Tags:
error: Content is protected !!