ಮೈಸೂರು : ದೇವರಗುಡ್ಡ ಮತ್ತು ಬ್ಯಾಡಗಿ ನಡುವಿನ ಎಲ್ಸಿ ಸಂಖ್ಯೆ 222 ರಲ್ಲಿ ತಾತ್ಕಾಲಿಕ ಗರ್ಡರ್ಗಳನ್ನು ಸೇರಿಸಲು ಮತ್ತು ತೆಗೆದುಹಾಕಲು ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ ಅಗತ್ಯಕ್ಕೆ ತಕ್ಕಂತೆ ಕೆಲವೊಂದು ರೈಲು ಸೇವೆಗಳನ್ನು ರದ್ದುಗೊಳಿಸಲಾಗುವುದು, ಭಾಗಶಃ ರದ್ದುಗೊಳಿಸಲಾಗುವುದು, ಮಾರ್ಗ ಬದಲಾವಣೆ ಮಾಡಲಾಗುವುದು, ನಿಯಂತ್ರಿಸಲಾಗುವುದು ಮತ್ತು ಮರು ನಿಗದಿಪಡಿಸಲಾಗುವುದು ಎಂದು ನೈರುತ್ಯ ರೈಲ್ವೆ ಮೈಸೂರು ವಿಭಾಗೀಯ ಹಣಕಾಸು ವ್ಯವಸ್ಥಾಪಕ ಹಾಗೂ ಸಾರ್ವಜನಿಕ ಸಂಪರ್ಕ ಅಬಕಾರಿ ಪೃಥ್ವಿ ಎಸ್ ಹುಲ್ಲತ್ತಿ ಅವರು ತಿಳಿಸಿದ್ದಾರೆ.
ಮರುನಿಗದಿ : ಬೆಳಗಾವಿ- ಮೈಸೂರು ಎಕ್ಸ್ಪ್ರೆಸ್ (ರೈಲು ಸಂಖ್ಯೆ 17325) ಫೆ. 17 ರಂದು ಬೆಳಗಾವಿಯಿಂದ ಹೊರಡುವಾಗ 120 ನಿಮಿಷಗಳ ಕಾಲ ಮರುನಿಗದಿಗೊಳ್ಳಲಿದೆ ಹಾಗೂ ಮಾರ್ಗ ಮಧ್ಯೆ 45 ನಿಮಿಷಗಳ ಕಾಲ ಮರುನಿಗದಿಗೊಳ್ಳಲಿದೆ.
ನಿಯಂತ್ರಣ: ಮೈಸೂರು-ಪಂಡರಾಪುರ ಎಕ್ಸ್ಪ್ರೆಸ್ ಅನ್ನು (ರೈಲು ಸಂಖ್ಯೆ 16535 ) ಫೆ. 10 ರಂದು ಮಾರ್ಗ ಮಧ್ಯೆ 50 ನಿಮಿಷಗಳ ಕಾಲ ನಿಯಂತ್ರಿಸಲಾಗುತ್ತದೆ. ಹಾಗೆಯೇ ತಿರುನೇಲ್ವೇಲಿ ಜಂಕ್ಷನ್-ದಾದರ್ ಎಕ್ಸ್ಪ್ರೆಸ್ ಅನ್ನು (ರೈಲು ಸಂಖ್ಯೆ 11022 ) ಫೆ.16ರಂದು ಮಾರ್ಗ ಮಧ್ಯೆ 110 ನಿಮಿಷಗಳ ಕಾಲ ಮಾರ್ಗ ಮಧ್ಯೆ ನಿಯಂತ್ರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ದೇವನೂರ ಮಹಾದೇವ ‘ಹಾಡುಪಾಡು ರಾಮು’ ಎಂದೇ ಖ್ಯಾತರಾಗಿದ್ದ ಟಿ.ಎಸ್.ರಾಮಸ್ವಾಮಿಯವರು ನೆಲಗನ್ನಡಕ್ಕೆ ಅನುವಾದಿಸಿರುವ ‘ಮಹಾಭಾರತದೊಳಗಿಂದ ಒಂದಿಷ್ಟು’ ಕೃತಿಯ ಲೋಕಾರ್ಪಣೆ ಶನಿವಾರ ಸಂಜೆ…
ನವೀನ್ ಡಿಸೋಜ ೪ ತಿಂಗಳಿನಿಂದ ಬಂದ್ ಆಗಿದ್ದ ಮುಗಿಲುಪೇಟೆ ಖ್ಯಾತಿಯ ಪ್ರವಾಸಿ ತಾಣ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ…
ಕೆ.ಬಿ.ರಮೇಶನಾಯಕ ಮೈಸೂರು: ತವರಿನವರೇ ಮುಖ್ಯಮಂತ್ರಿಯಾಗಿದ್ದಾಗ ಹತ್ತಾರು ಯೋಜನೆಗಳು ಮಂಜೂರಾಗಿದ್ದರೆ, ಈಗ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ…
ಕೆ.ಪಿ.ಮದನ್ ಮೈಸೂರು: ಹಲವೆಡೆ ಬೀದಿ ನಾಯಿಗಳು ಸಾರ್ವಜನಿಕರಿಗೆ ತೊಂದರೆ ಕೊಡುತ್ತಿರುವ ವರದಿಗಳು ಪ್ರಕಟವಾಗುತ್ತಿವೆ. ಇತ್ತ ನಗರದ ಆಸುಪಾಸಿನಲ್ಲಿರುವ ಕೆಲ ಬಡಾವಣೆಗಳ…
ಎಸ್.ಎಸ್.ಭಟ್ ಬೇಳೆ, ಎಣ್ಣೆಗೆ ಶಿಕ್ಷಣ ಇಲಾಖೆ ವಿಧಿಸಿರುವ ದರವೇ ಶಿಕ್ಷಕರಿಗೆ ಹೊರೆ ನಂಜನಗೂಡು: ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ನೀಡಲಾಗುತ್ತಿರುವ ಬಿಸಿಯೂಟ…