ಮೈಸೂರು: ಹಾವು ಕಡಿತವನ್ನು ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಇತ್ತೀಚೆಗಷ್ಟೇ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಹಾವು ಕಡಿತದ ಸಂದರ್ಭದಲ್ಲಿ ತಕ್ಷಣವೇ ನೆರವಾಗಲು ಮತ್ತು ಕಡಿತಕ್ಕೊಳಗಾದವರಿಗೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಕ್ಕೆ ತಲುಪುವಂತೆ ಮಾಡಲು ಸಹಾಯ ಒದಗಿಸುವ ಕಾರ್ಯವನ್ನು ಆಶಾ ಕಾರ್ಯಕರ್ತರಿಗೆ ವಹಿಸಲಾಗಿದೆ.
ಉಪ-ಕೇಂದ್ರಗಳಲ್ಲಿನ ಆರೋಗ್ಯ ಕಾರ್ಯಕರ್ತರು ಪ್ರಥಮ ಚಿಕಿತ್ಸೆ ನೀಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಮತ್ತು ತಕ್ಷಣದ ಚಿಕಿತ್ಸೆಗೆ ಅನುಕೂಲವಾಗುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗೆ ಸೂಚಿಸಲಿದ್ದಾರೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಸಿಗಲಿದೆ ಚುಚ್ಚುಮದ್ದು: ಹಾವು ಕಡಿತದ ಚಿಕಿತ್ಸೆಗಾಗಿ ವಿಷ ನಿವಾರಕ ಚುಚ್ಚುಮದ್ದನ್ನು ಈ ಹಿಂದೆ ಕೆಆರ್ ಆಸ್ಪತ್ರೆ ಮತ್ತು ಜಿಲ್ಲಾ ಆರೋಗ್ಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಮಿಷನರೇಟ್ ಹೊರಡಿಸಿದ ಅಧಿಸೂಚನೆಯ ಹಿನ್ನೆಲೆಯಲ್ಲಿ, ಟಿ. ನರಸೀಪುರ, ನಂಜನಗೂಡು, ಎಚ್ಡಿ ಕೋಟೆ, ಹುಣಸೂರಿನಲ್ಲಿ 16 ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್ಸಿ), ಆರು ತಾಲ್ಲೂಕು ಜನರಲ್ ಆಸ್ಪತ್ರೆಗಳು ಸೇರಿದಂತೆ 31 ಆರೋಗ್ಯ ಕೇಂದ್ರಗಳು ಇವೆ. ಇದುಗಳನ್ನು ಹಾವು ಕಡಿತದ ಚಿಕಿತ್ಸೆ ನೀಡಲು ಗುರುತಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಡಾ. ಪಿಸಿ ಕುಮಾರಸ್ವಾಮಿ ಸ್ಥಳೀಯ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.
ಇದಲ್ಲದೆ, ಪಿರಿಯಾಪಟ್ಟಣ, ಕೆ.ಆರ್.ನಗರ, ಬನ್ನೂರು, ತಲಕಾಡು, ಜಯಪುರ, ಜಯನಗರ, ಸಾಲಿಗ್ರಾಮ, ಹುಲ್ಲಹಳ್ಳಿ, ತಗಡೂರು, ಸರಗೂರು ಮತ್ತು ಮುಗೂರಿನ ಒಂಬತ್ತು ಸಮುದಾಯ ಆರೋಗ್ಯ ಕೇಂದ್ರಗಳು ಈಗ ಹಾವು ಕಡಿತಕ್ಕೆ ಚಿಕಿತ್ಸೆ ನೀಡಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೆ.ಆರ್.ನಗರ : ತಾಲ್ಲೂಕಿನ ಹೊರವಲಯದ ಅರ್ಕೇಶ್ವರ ದೇಗುಲ ಬಳಿಯ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ಸಾವನ್ನಪ್ಪಿದ ಆರು ಮಂದಿಯೂ ಒಂದೇ…
ಚಾಮರಾಜನಗರ : ಕೋವಿಡ್ ವೇಳೆಯಲ್ಲಿ ನಗರದ ಜಿಲ್ಲಾಸ್ಪತ್ರೆಯಲ್ಲಿ (ಈಗ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ) ಸಂಭವಿಸಿದ್ದ ಆಕ್ಸಿಜನ್ ದುರಂತದಲ್ಲಿ 36…
ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏ.20 ಹಾಗೂ 21ರಂದು ಮೈಸೂರು ಹಾಗೂ ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. 20ರಂದು…
ಮೈಸೂರು : ಜಿಲ್ಲೆಯ ಕೆ.ಆರ್.ನಗರದ ಅರ್ಕೇಶ್ವರ ದೇಗುಲದ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿ ಮೃತಪಟ್ಟವರ ಕುಟುಂಬಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ…
ರಾಣೇಬೆನ್ನೂರ : ಮಾನವ ಸಮಾಜ ನಿರ್ಮಾಣದಲ್ಲಿ ಎಲ್ಲರೂ ಪಾಲುದಾರರಾಗಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಅವರು ಇಂದು ರಾಣಿಬೆನ್ನೂರಿನ ನಿಟ್ಟೂರು…
ಕೊಲ್ಕತ್ತಾ : ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026ರ 28ನೇ ಪಂದ್ಯದಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ತಂಡವು ರಾಜಸ್ಥಾನ…