ಮೈಸೂರು: ಹಾವು ಕಡಿತವನ್ನು ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಇತ್ತೀಚೆಗಷ್ಟೇ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಹಾವು ಕಡಿತದ ಸಂದರ್ಭದಲ್ಲಿ ತಕ್ಷಣವೇ ನೆರವಾಗಲು ಮತ್ತು ಕಡಿತಕ್ಕೊಳಗಾದವರಿಗೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಕ್ಕೆ ತಲುಪುವಂತೆ ಮಾಡಲು ಸಹಾಯ ಒದಗಿಸುವ ಕಾರ್ಯವನ್ನು ಆಶಾ ಕಾರ್ಯಕರ್ತರಿಗೆ ವಹಿಸಲಾಗಿದೆ.
ಉಪ-ಕೇಂದ್ರಗಳಲ್ಲಿನ ಆರೋಗ್ಯ ಕಾರ್ಯಕರ್ತರು ಪ್ರಥಮ ಚಿಕಿತ್ಸೆ ನೀಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಮತ್ತು ತಕ್ಷಣದ ಚಿಕಿತ್ಸೆಗೆ ಅನುಕೂಲವಾಗುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗೆ ಸೂಚಿಸಲಿದ್ದಾರೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.
ಮೈಸೂರು ಜಿಲ್ಲೆಯಲ್ಲಿ ಸಿಗಲಿದೆ ಚುಚ್ಚುಮದ್ದು: ಹಾವು ಕಡಿತದ ಚಿಕಿತ್ಸೆಗಾಗಿ ವಿಷ ನಿವಾರಕ ಚುಚ್ಚುಮದ್ದನ್ನು ಈ ಹಿಂದೆ ಕೆಆರ್ ಆಸ್ಪತ್ರೆ ಮತ್ತು ಜಿಲ್ಲಾ ಆರೋಗ್ಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಮಿಷನರೇಟ್ ಹೊರಡಿಸಿದ ಅಧಿಸೂಚನೆಯ ಹಿನ್ನೆಲೆಯಲ್ಲಿ, ಟಿ. ನರಸೀಪುರ, ನಂಜನಗೂಡು, ಎಚ್ಡಿ ಕೋಟೆ, ಹುಣಸೂರಿನಲ್ಲಿ 16 ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್ಸಿ), ಆರು ತಾಲ್ಲೂಕು ಜನರಲ್ ಆಸ್ಪತ್ರೆಗಳು ಸೇರಿದಂತೆ 31 ಆರೋಗ್ಯ ಕೇಂದ್ರಗಳು ಇವೆ. ಇದುಗಳನ್ನು ಹಾವು ಕಡಿತದ ಚಿಕಿತ್ಸೆ ನೀಡಲು ಗುರುತಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಡಾ. ಪಿಸಿ ಕುಮಾರಸ್ವಾಮಿ ಸ್ಥಳೀಯ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.
ಇದಲ್ಲದೆ, ಪಿರಿಯಾಪಟ್ಟಣ, ಕೆ.ಆರ್.ನಗರ, ಬನ್ನೂರು, ತಲಕಾಡು, ಜಯಪುರ, ಜಯನಗರ, ಸಾಲಿಗ್ರಾಮ, ಹುಲ್ಲಹಳ್ಳಿ, ತಗಡೂರು, ಸರಗೂರು ಮತ್ತು ಮುಗೂರಿನ ಒಂಬತ್ತು ಸಮುದಾಯ ಆರೋಗ್ಯ ಕೇಂದ್ರಗಳು ಈಗ ಹಾವು ಕಡಿತಕ್ಕೆ ಚಿಕಿತ್ಸೆ ನೀಡಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…
ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…