ಮೈಸೂರು

ಮೈಸೂರು: 31 ಆರೋಗ್ಯ ಕೇಂದ್ರಗಳಲ್ಲಿ ಹಾವು ಕಡಿತಕ್ಕೆ ಚಿಕಿತ್ಸೆ

ಮೈಸೂರು: ಹಾವು ಕಡಿತವನ್ನು ಘೋಷಿತ ಕಾಯಿಲೆಗಳ ಪಟ್ಟಿಗೆ ಸೇರ್ಪಡೆಗೊಳಿಸಿ ಇತ್ತೀಚೆಗಷ್ಟೇ ಸರ್ಕಾರ ಅಧಿಸೂಚನೆ ಹೊರಡಿಸಿದ ಬೆನ್ನಲ್ಲೇ, ಹಾವು ಕಡಿತದ ಸಂದರ್ಭದಲ್ಲಿ ತಕ್ಷಣವೇ ನೆರವಾಗಲು ಮತ್ತು ಕಡಿತಕ್ಕೊಳಗಾದವರಿಗೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಕ್ಕೆ ತಲುಪುವಂತೆ ಮಾಡಲು ಸಹಾಯ ಒದಗಿಸುವ ಕಾರ್ಯವನ್ನು ಆಶಾ ಕಾರ್ಯಕರ್ತರಿಗೆ ವಹಿಸಲಾಗಿದೆ.

ಉಪ-ಕೇಂದ್ರಗಳಲ್ಲಿನ ಆರೋಗ್ಯ ಕಾರ್ಯಕರ್ತರು ಪ್ರಥಮ ಚಿಕಿತ್ಸೆ ನೀಡುವ ಜವಾಬ್ದಾರಿಯನ್ನು ಹೊಂದಿರುತ್ತಾರೆ ಮತ್ತು ತಕ್ಷಣದ ಚಿಕಿತ್ಸೆಗೆ ಅನುಕೂಲವಾಗುವಂತೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗೆ ಸೂಚಿಸಲಿದ್ದಾರೆ ಎಂದು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ.

ಮೈಸೂರು ಜಿಲ್ಲೆಯಲ್ಲಿ ಸಿಗಲಿದೆ ಚುಚ್ಚುಮದ್ದು: ಹಾವು ಕಡಿತದ ಚಿಕಿತ್ಸೆಗಾಗಿ ವಿಷ ನಿವಾರಕ ಚುಚ್ಚುಮದ್ದನ್ನು ಈ ಹಿಂದೆ ಕೆಆರ್ ಆಸ್ಪತ್ರೆ ಮತ್ತು ಜಿಲ್ಲಾ ಆರೋಗ್ಯ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನೀಡಲಾಗುತ್ತಿತ್ತು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಕಮಿಷನರೇಟ್ ಹೊರಡಿಸಿದ ಅಧಿಸೂಚನೆಯ ಹಿನ್ನೆಲೆಯಲ್ಲಿ, ಟಿ. ನರಸೀಪುರ, ನಂಜನಗೂಡು, ಎಚ್‌ಡಿ ಕೋಟೆ, ಹುಣಸೂರಿನಲ್ಲಿ 16 ಪ್ರಾಥಮಿಕ ಆರೋಗ್ಯ ಕೇಂದ್ರಗಳು (ಪಿಎಚ್‌ಸಿ), ಆರು ತಾಲ್ಲೂಕು ಜನರಲ್ ಆಸ್ಪತ್ರೆಗಳು ಸೇರಿದಂತೆ 31 ಆರೋಗ್ಯ ಕೇಂದ್ರಗಳು ಇವೆ. ಇದುಗಳನ್ನು ಹಾವು ಕಡಿತದ ಚಿಕಿತ್ಸೆ ನೀಡಲು ಗುರುತಿಸಲಾಗಿದೆ ಎಂದು ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್‌ಒ) ಡಾ. ಪಿಸಿ ಕುಮಾರಸ್ವಾಮಿ ಸ್ಥಳೀಯ ಮಾಧ್ಯಮವೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಇದಲ್ಲದೆ, ಪಿರಿಯಾಪಟ್ಟಣ, ಕೆ.ಆರ್.ನಗರ, ಬನ್ನೂರು, ತಲಕಾಡು, ಜಯಪುರ, ಜಯನಗರ, ಸಾಲಿಗ್ರಾಮ, ಹುಲ್ಲಹಳ್ಳಿ, ತಗಡೂರು, ಸರಗೂರು ಮತ್ತು ಮುಗೂರಿನ ಒಂಬತ್ತು ಸಮುದಾಯ ಆರೋಗ್ಯ ಕೇಂದ್ರಗಳು ಈಗ ಹಾವು ಕಡಿತಕ್ಕೆ ಚಿಕಿತ್ಸೆ ನೀಡಲಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.

andolana

Recent Posts

ರಾಮಕೃಷ್ಣ ಆಶ್ರಮದವರು ಕೊಟ್ಟ ಮಾತು ಉಳಿಸಿಕೊಳ್ಳಬೇಕಿತ್ತು

ಶತಮಾನದ ಹಿಂದೆ ಮೈಸೂರು ಸಂಸ್ಥಾನದ ಮಹಾರಾಣಿಯವರಾಗಿದ್ದ ಕೆಂಪನಂಜಮ್ಮಣ್ಣಿ ಅವರು ಮೈಸೂರಿನ ಹೆಣ್ಣುಮಕ್ಕಳಿಗಾಗಿ ಸ್ಥಾಪಿಸಿದ್ದ ‘ಮಹಾರಾಣಿಯವರ ಹೊಸ ಮಾದರಿ (ಎನ್‌ಟಿಎಂ) ಶಾಲೆ’…

9 hours ago

ಅರವತ್ತು ದಿನಗಳು ಕಳೆಯಿತು…ಫಲದ ನಿರೀಕ್ಷೆಯಲ್ಲಿ!

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ತೋಳ ಬಂತು ತೋಳ ಕತೆಯನ್ನು ನೆನಪಿಸುವಂತಿರುವ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆ ಕಾಂಗ್ರೆಸ್…

9 hours ago

ಇಂದು ಕೊಡಗು ಜಿಲ್ಲೆಯಲ್ಲಿ ಕಕ್ಕಡ 18ರ ಸಂಭ್ರಮ

ನವೀನ್ ಡಿಸೋಜ ಮನೆಮನೆಗಳಲ್ಲಿ ಘಮಘಮಿಸಲಿದೆ ಮದ್ದುಸೊಪ್ಪಿನ ಖಾದ್ಯ; ವಿಭಿನ್ನ ಹಬ್ಬದಾಚರಣೆಗೆ ಜಿಲ್ಲೆಯಲ್ಲಿ ಸಿದ್ಧತೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರ (ಆ.೩)ಕಕ್ಕಡ…

9 hours ago

ಸಾರ್ವಜನಿಕರ ಶೌಚಾಲಯಕ್ಕೆ ಬೇಕಿದೆ ಚಿಕಿತ್ಸೆ!

ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿನ ಶೌಚಾಲಯದಲ್ಲಿ ಅಶುಚಿತ್ವ ತಾಂಡವ ಮೈಸೂರು: ವಾಯುವಿಹಾರಿಗಳು ಹಾಗೂ ಕ್ರೀಡಾಸಕ್ತರ ನೆಚ್ಚಿನ ತಾಣವಾಗಿರುವ ಪಂ.ಪುಟ್ಟರಾಜ ಗವಾಯಿ ಕ್ರೀಡಾಂಗಣದಲ್ಲಿ…

9 hours ago

ಗ್ರಾಪಂಗಳ ಅತ್ಯುತ್ತಮ ಕೆಲಸಕ್ಕೆ ಉತ್ತಮ ಪ್ರಶಸ್ತಿ

ಕೆ.ಬಿ.ರಮೇಶನಾಯಕ ಪ್ರಗತಿಯಲ್ಲಿ ಹಿಂದೆ ಬಿದ್ದಿರುವ ಗ್ರಾಪಂಗಳನ್ನು ಹುರಿದುಂಬಿಸಲು ಜಿಪಂ ಹೊಸ ಯೋಜನೆ ಪ್ರಶಸ್ತಿಗೆ ನಾಲ್ಕು ಕಾರ್ಯಸೂಚಿಯಲ್ಲಿ ಪ್ರಗತಿ ಸಾಧಿಸಿದ ಗ್ರಾಪಂಗಳ…

10 hours ago

ದ್ರಾಕ್ಷಿ ತೋಟ ನೋಡಲು ಮುಗಿಬಿದ್ದ ಜನರು

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…

1 day ago