ಮೈಸೂರು: ನಗರದಲ್ಲಿ ಇಂದು(ಮೇ.೮) ಸುರಿದ ಧಾರಕಾರ ಮಳೆಗೆ ವಿವಿದೆಡೆ ಮರಗಳು ಧರೆಗುರಿಳಿದ್ದು, ಹಲವಾರು ವಾಹನಗಳು ಜಖಂಗೊಂಡಿವೆ.
ಆಗ್ರಹಾರ, ಹಾರ್ಡಿಂಜ್ ವೃತ್ತ, ಕುವೆಂಪು ನಗರ, ಸರಸ್ವತಿಪುರಂ, ವಿವೇಕ ನಗರ, ಬೋಗಾದಿ, ಎನ್, ಆರ್ ಮೋಹಲ್ಲ ಸೇರಿದಂತೆ ವಿವಿದೆಡೆ ಭರ್ಜರಿ ಮಳೆಯಾಗಿದ್ದು, ಅಗ್ರಹಾರದ ಕೆ.ಆರ್. ಪೊಲೀಸ್ ಠಾಣೆಯ ಮುಂಭಾಗದಲ್ಲಿ ಕೆಎ೫೫ ೮೯೮೬ ನೋಂದಣಿ ಸಂಖ್ಯೆಯ ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದಿದ್ದು, ಆಟೋ ಜಖಂಗೊಂಡಿದೆ. ಚಾಲಕ ಅನಿಲ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಆಟೋದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದಲ್ಲಿಯೇ ಮರ ಬಿದ್ದಿದ್ದು, ಪ್ರಯಾಣಿಕರು ಆಟೋದಲ್ಲಿ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ಇಲ್ಲಿಗೆ ಸಮೀದಲ್ಲಿಯೇ ಮತ್ತೆರಡು ಮರಗಳು ಧರೆಗುರುಳಿದ್ದು, ಕಾರೊಂದು ಜಖಂಗೊಂಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ ನಗರ ಪಾಲಿಕೆಯ ಅಭಯ ತಂಡ ಮರ ತೆರವುಗೊಳಿಸುವಲ್ಲಿ ನಿರತವಾಗಿತ್ತು. ಜಯನಗರದ ರಸ್ತೆಯಲ್ಲಿ ಮರದ ಬೃಹತ್ ರೆಂಬೆಯೊಂದು ಧರೆಗುರುಳಿ ಸಂಚಾರ ಅಸ್ತವ್ಯಸ್ತವಾಗಿತ್ತು.
ನಗರದಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ರಾತ್ರಿ ೮.೧೫ಕ್ಕೆ ಬಿರುಗಾಳಿ ಆರಂಭವಾಯಿತು. ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು. ಆರಂಭದಲ್ಲಿ ಬಿರುಗಾಳಿ ಸಹಿತ ಮಳೆಯಾಗಿ ತುಸು ಸಮಯದ ಬಳಿಕ ತುಂತುರು ಮಳೆ ಸುರಿಯಿತು.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…