ಮೈಸೂರು: ನಗರದಲ್ಲಿ ಇಂದು(ಮೇ.೮) ಸುರಿದ ಧಾರಕಾರ ಮಳೆಗೆ ವಿವಿದೆಡೆ ಮರಗಳು ಧರೆಗುರಿಳಿದ್ದು, ಹಲವಾರು ವಾಹನಗಳು ಜಖಂಗೊಂಡಿವೆ.
ಆಗ್ರಹಾರ, ಹಾರ್ಡಿಂಜ್ ವೃತ್ತ, ಕುವೆಂಪು ನಗರ, ಸರಸ್ವತಿಪುರಂ, ವಿವೇಕ ನಗರ, ಬೋಗಾದಿ, ಎನ್, ಆರ್ ಮೋಹಲ್ಲ ಸೇರಿದಂತೆ ವಿವಿದೆಡೆ ಭರ್ಜರಿ ಮಳೆಯಾಗಿದ್ದು, ಅಗ್ರಹಾರದ ಕೆ.ಆರ್. ಪೊಲೀಸ್ ಠಾಣೆಯ ಮುಂಭಾಗದಲ್ಲಿ ಕೆಎ೫೫ ೮೯೮೬ ನೋಂದಣಿ ಸಂಖ್ಯೆಯ ಆಟೋ ಮೇಲೆ ಬೃಹತ್ ಮರ ಉರುಳಿ ಬಿದ್ದಿದ್ದು, ಆಟೋ ಜಖಂಗೊಂಡಿದೆ. ಚಾಲಕ ಅನಿಲ್ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣ ಪುಟ್ಟ ಗಾಯಗಳಾಗಿವೆ. ಆಟೋದಲ್ಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದಲ್ಲಿಯೇ ಮರ ಬಿದ್ದಿದ್ದು, ಪ್ರಯಾಣಿಕರು ಆಟೋದಲ್ಲಿ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ಇಲ್ಲಿಗೆ ಸಮೀದಲ್ಲಿಯೇ ಮತ್ತೆರಡು ಮರಗಳು ಧರೆಗುರುಳಿದ್ದು, ಕಾರೊಂದು ಜಖಂಗೊಂಡಿದೆ. ಕೂಡಲೇ ಸ್ಥಳಕ್ಕಾಗಮಿಸಿದ ನಗರ ಪಾಲಿಕೆಯ ಅಭಯ ತಂಡ ಮರ ತೆರವುಗೊಳಿಸುವಲ್ಲಿ ನಿರತವಾಗಿತ್ತು. ಜಯನಗರದ ರಸ್ತೆಯಲ್ಲಿ ಮರದ ಬೃಹತ್ ರೆಂಬೆಯೊಂದು ಧರೆಗುರುಳಿ ಸಂಚಾರ ಅಸ್ತವ್ಯಸ್ತವಾಗಿತ್ತು.
ನಗರದಲ್ಲಿ ಬುಧವಾರ ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ರಾತ್ರಿ ೮.೧೫ಕ್ಕೆ ಬಿರುಗಾಳಿ ಆರಂಭವಾಯಿತು. ಗಂಟೆಗೂ ಹೆಚ್ಚು ಕಾಲ ಜೋರು ಮಳೆ ಸುರಿಯಿತು. ಆರಂಭದಲ್ಲಿ ಬಿರುಗಾಳಿ ಸಹಿತ ಮಳೆಯಾಗಿ ತುಸು ಸಮಯದ ಬಳಿಕ ತುಂತುರು ಮಳೆ ಸುರಿಯಿತು.
ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ವಿನಯ್ ಕುಲಕರ್ಣಿ ಅವರು ಶಿಕ್ಷೆ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ…
ಮೈಸೂರು: ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರರಾವ್ ಅವರ ಮೇಲಿನ ಅಮಾನತು ಆದೇಶ ರದ್ದುಗೊಳಿಸಿರುವ ರಾಜ್ಯ ಸರ್ಕಾರಕ್ಕೆ ಕ್ರಮಕ್ಕೆ ವಿಧಾನಪರಿಷತ್ ಎಚ್.ವಿಶ್ವನಾಥ್…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ 108 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ನಟ ವಿಜಯ್ ಅವರ ಟಿವಿಕೆ ಪಕ್ಷ…
ನವದೆಹಲಿ: ಕುಟುಂಬದೊಂದಿಗೆ ಪ್ರವಾಸದಲ್ಲಿದ್ದ 26 ಜೀವಗಳನ್ನು ಬಲಿ ಪಡೆದ ಉಗ್ರರಿಗೆ ತಕ್ಕ ಪಾಠ ಕಲಿಸಿದ ಆಪರೇಷನ್ ಸಿಂಧೂರಕ್ಕೆ ಒಂದು ವರ್ಷವಾಗಿದೆ.…
ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಕುರ್ಚಿ ಮೇಲೆ ಆಸೆ ಇರುವುದು ನಿಜ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ.…
ಮೈಸೂರು: ಮೈಸೂರಿನಲ್ಲಿ ಕಾಡುಪ್ರಾಣಿಗಳ ಉಪಟಳ ಮುಂದುವರಿದಿದ್ದು, ಚಿರತೆಯೊಂದ ನಾಯಿ ಬೇಟೆಯಾಡಿರುವ ಘಟನೆ ಗೌರಿಶಂಕರನಗರದ ಗವಿಮಠದ ಹತ್ತಿರ ನಡೆದಿದೆ. ರಾತ್ರೋರಾತ್ರಿ ಚಿರತೆಯೊಂದು…