ಮೈಸೂರು: ಸೂರತ್ನಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಯೋಗ ಸ್ಪರ್ಧೆಗೆ ನಂಜನಗೂಡಿನ ಇಬ್ಬರು ಬಾಲಕರು ಆಯ್ಕೆಯಾಗಿ ಕೀರ್ತಿ ತಂದಿದ್ದಾರೆ.
ನಂಜನಗೂಡಿನ ದೇವಿರಮ್ಮನಹಳ್ಳಿಯಲ್ಲಿರುವ ನಂಜುಂಡೇಶ್ವರ ಯೋಗ ವಿದ್ಯಾಲಯದಲ್ಲಿ ಯೋಗಾಭ್ಯಾಸ ಮಾಡುತ್ತಿರುವ ಆರನೇ ತರಗತಿಯ ಚಿರಾಗ್ ಹಾಗೂ ಏಳನೇ ತರಗತಿ ಓದುತ್ತಿರುವ ಜಯಚಂದ್ರ ಎಂಬ ಬಾಲಕರು ಬೆಂಗಳೂರಿನ ಎಸ್ಜೆಆರ್ ಪಬ್ಲಿಕ್ ಸ್ಕೂಲ್ನಲ್ಲಿ ನಡೆದ zonel ಲೆವೆಲ್ ಯೋಗಾಸನ ಸ್ಪರ್ಧೆಯಲ್ಲಿ ಭಾಗವಹಿಸಿ ನ್ಯಾಷನಲ್ ಲೆವೆಲ್ಗೆ ಆಯ್ಕೆಯಾಗಿದ್ದಾರೆ.
ಈ ಹಿನ್ನೆಲೆಯಲ್ಲಿ ಮುಂದೆ ಸೂರತ್ನಲ್ಲಿ ನಡೆಯುವ ನ್ಯಾಷನಲ್ ಲೆವೆಲ್ ಯೋಗ ಸ್ಪರ್ಧೆಗೆ ಈ ಬಾಲಕರು ಆಯ್ಕೆಯಾಗಿದ್ದು, ಯೋಗಾ ವಿದ್ಯಾಲಯಕ್ಕೆ ಕೀರ್ತಿ ತಂದಿದ್ದಾರೆ.
ಯೋಗ ಶಿಕ್ಷಕ ರಮೇಶ್ ಅವರ ಪರಿಶ್ರಮದಿಂದಲೇ ಬಾಲಕರು ಈ ಸಾಧನೆ ಮಾಡಿದ್ದು, ಬಾಲಕರಿಗೆ ಎಲ್ಲೆಡೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…