ಮೈಸೂರು : ಮೈಸೂರಿನ ಹೂಟಗಳ್ಳಿ ನಗರಸಭೆಯ ಕಮಿಷನರ್ ಹುದ್ದೆಗಾಗಿ ಹಾಲಿ ಕಮಿಷನರ್ ಸಂದೀಪ್ ಮತ್ತು ಈ ಹಿಂದೆ ಇದೇ ನಗರಸಭೆ ಕಮಿಷನರ್ ಆಗಿದ್ದ ನರಸಿಂಹಮೂರ್ತಿ ಎಂಬುವವರ ನಡುವೆ ಕಿತ್ತಾಟ ಶುರುವಾಗಿದೆ. ಈ ಹಿಂದೆ ಇಬ್ಬರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು.
ನಿನ್ನೆ(ಫೆ.08) ಏಕಾಏಕಿ ನಗರಸಭೆಗೆ ಆಗಮಿಸಿದ ನರಸಿಂಹಮೂರ್ತಿ ಅವರು, ಕಮಿಷನರ್ ಕೊಠಡಿಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳು ಜಟಾಪಟಿ ನಡೆಸಿದ ಘಟನೆ ಮೈಸೂರಿನ ಹೂಟಗಳ್ಳಿ ನಗರಸಭೆಯಲ್ಲಿ ದಾಖಲಾಗಿದೆ.
ನರಸಿಂಹಮೂರ್ತಿ ಅವರು ಕಮಿಷನರ್ ಕೊಠಡಿಗೆ ಬೀಗ ಹಾಕಿಕೊಂಡು ಹೋಗಿದ್ದು, ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಬಂದ ಕಮಿಷನರ್ ಸಂದೀಪ್ಗೆ ಆತಂಕಕ್ಕೊಳಗಾಗಿದ್ದಾರೆ. ಕೊಡಲೇ ಕಮಿಷನರ್ ಕೊಠಡಿ ಆಚೆಯೇ ಟೇಬಲ್ ಹಾಕಿ ಕುಳಿತು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಂದಂತಹ ಜನರ ಸಮಸ್ಯೆಯನ್ನ ಆಲಿಸುತ್ತಿದ್ದಾರೆ.
ಘಟನೆ ಸಂಬಂಧ ಹಾಲಿ ನಗರಸಭೆ ಕಮಿಷನರ್ ಸಂದೀಪ್ ಅವರು ನರಸಿಂಹಮೂರ್ತಿ ವಿರುದ್ಧ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು: ಇರಾನ್-ಇಸ್ರೇಲ್ ನಡುವಿನ ಸಂಘರ್ಷ ಏರ್ಪಟ್ಟಿರುವ ಪರಿಣಾಮ ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮ ಕೈಗೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ…
ನಾಪೋಕ್ಲು: ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವಾಗ್ದಾಳಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೊಳಸಿಕೆರೆ ಗ್ರಾಮದ…
ಬೆಂಗಳೂರು: ಈ ಬಾರಿಯ ಬಜೆಟ್ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಚರ್ಚಿಸಲಾಗುವುದು. ರಾಜ್ಯದ ಆರ್ಥಿಕ ದುಸ್ಥಿತಿಯ ವಿರುದ್ಧ ಹೋರಾಟ ಮಾಡಲಾಗುವುದು ಎಂದು…
ಕೊಡಗು: ನಾಳೆ ವರ್ಷದ ಮೊದಲ ಚಂದ್ರಗ್ರಹಣ ಹೋಳಿ ಹುಣ್ಣಿಮೆಯ ದಿನದಂದು ಸಂಭವಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಹಲವು ದೇವಾಲಯಗಳ ಪೂಜಾ…
ಮಂಡ್ಯ: ಜಿಲ್ಲೆಯ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ, ಸೋಮನಹಳ್ಳಿ ಸೇರಿದಂತೆ ವಿವಿಧ ಪ್ರದೇಶಗಳನ್ನು ಸ್ಥಳೀಯರ ಆಶಯಗಳಿಗೆ ವಿರುದ್ಧವಾಗಿ ಮದ್ದೂರು…