ಮೈಸೂರು : ಮೈಸೂರಿನ ಹೂಟಗಳ್ಳಿ ನಗರಸಭೆಯ ಕಮಿಷನರ್ ಹುದ್ದೆಗಾಗಿ ಹಾಲಿ ಕಮಿಷನರ್ ಸಂದೀಪ್ ಮತ್ತು ಈ ಹಿಂದೆ ಇದೇ ನಗರಸಭೆ ಕಮಿಷನರ್ ಆಗಿದ್ದ ನರಸಿಂಹಮೂರ್ತಿ ಎಂಬುವವರ ನಡುವೆ ಕಿತ್ತಾಟ ಶುರುವಾಗಿದೆ. ಈ ಹಿಂದೆ ಇಬ್ಬರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು.
ನಿನ್ನೆ(ಫೆ.08) ಏಕಾಏಕಿ ನಗರಸಭೆಗೆ ಆಗಮಿಸಿದ ನರಸಿಂಹಮೂರ್ತಿ ಅವರು, ಕಮಿಷನರ್ ಕೊಠಡಿಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳು ಜಟಾಪಟಿ ನಡೆಸಿದ ಘಟನೆ ಮೈಸೂರಿನ ಹೂಟಗಳ್ಳಿ ನಗರಸಭೆಯಲ್ಲಿ ದಾಖಲಾಗಿದೆ.
ನರಸಿಂಹಮೂರ್ತಿ ಅವರು ಕಮಿಷನರ್ ಕೊಠಡಿಗೆ ಬೀಗ ಹಾಕಿಕೊಂಡು ಹೋಗಿದ್ದು, ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಬಂದ ಕಮಿಷನರ್ ಸಂದೀಪ್ಗೆ ಆತಂಕಕ್ಕೊಳಗಾಗಿದ್ದಾರೆ. ಕೊಡಲೇ ಕಮಿಷನರ್ ಕೊಠಡಿ ಆಚೆಯೇ ಟೇಬಲ್ ಹಾಕಿ ಕುಳಿತು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಂದಂತಹ ಜನರ ಸಮಸ್ಯೆಯನ್ನ ಆಲಿಸುತ್ತಿದ್ದಾರೆ.
ಘಟನೆ ಸಂಬಂಧ ಹಾಲಿ ನಗರಸಭೆ ಕಮಿಷನರ್ ಸಂದೀಪ್ ಅವರು ನರಸಿಂಹಮೂರ್ತಿ ವಿರುದ್ಧ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…