ಮೈಸೂರು : ಮೈಸೂರಿನ ಹೂಟಗಳ್ಳಿ ನಗರಸಭೆಯ ಕಮಿಷನರ್ ಹುದ್ದೆಗಾಗಿ ಹಾಲಿ ಕಮಿಷನರ್ ಸಂದೀಪ್ ಮತ್ತು ಈ ಹಿಂದೆ ಇದೇ ನಗರಸಭೆ ಕಮಿಷನರ್ ಆಗಿದ್ದ ನರಸಿಂಹಮೂರ್ತಿ ಎಂಬುವವರ ನಡುವೆ ಕಿತ್ತಾಟ ಶುರುವಾಗಿದೆ. ಈ ಹಿಂದೆ ಇಬ್ಬರು ಅಧಿಕಾರಿಗಳು ಕೋರ್ಟ್ ಮೆಟ್ಟಿಲೇರಿದ್ದರು.
ನಿನ್ನೆ(ಫೆ.08) ಏಕಾಏಕಿ ನಗರಸಭೆಗೆ ಆಗಮಿಸಿದ ನರಸಿಂಹಮೂರ್ತಿ ಅವರು, ಕಮಿಷನರ್ ಕೊಠಡಿಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಒಂದೇ ಹುದ್ದೆಗೆ ಇಬ್ಬರು ಅಧಿಕಾರಿಗಳು ಜಟಾಪಟಿ ನಡೆಸಿದ ಘಟನೆ ಮೈಸೂರಿನ ಹೂಟಗಳ್ಳಿ ನಗರಸಭೆಯಲ್ಲಿ ದಾಖಲಾಗಿದೆ.
ನರಸಿಂಹಮೂರ್ತಿ ಅವರು ಕಮಿಷನರ್ ಕೊಠಡಿಗೆ ಬೀಗ ಹಾಕಿಕೊಂಡು ಹೋಗಿದ್ದು, ಬೆಳಿಗ್ಗೆ ಎಂದಿನಂತೆ ಕರ್ತವ್ಯಕ್ಕೆ ಬಂದ ಕಮಿಷನರ್ ಸಂದೀಪ್ಗೆ ಆತಂಕಕ್ಕೊಳಗಾಗಿದ್ದಾರೆ. ಕೊಡಲೇ ಕಮಿಷನರ್ ಕೊಠಡಿ ಆಚೆಯೇ ಟೇಬಲ್ ಹಾಕಿ ಕುಳಿತು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬಂದಂತಹ ಜನರ ಸಮಸ್ಯೆಯನ್ನ ಆಲಿಸುತ್ತಿದ್ದಾರೆ.
ಘಟನೆ ಸಂಬಂಧ ಹಾಲಿ ನಗರಸಭೆ ಕಮಿಷನರ್ ಸಂದೀಪ್ ಅವರು ನರಸಿಂಹಮೂರ್ತಿ ವಿರುದ್ಧ ವಿಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಮೈಸೂರು: ಮೈಸೂರಿನ ಎಲ್ಲಾ ಕೆರೆಗಳ ಸರ್ವೆ ನಡೆಸಿ, ಒತ್ತುವರಿ ತೆರವುಗೊಳಿಸುವಂತೆ ಮೈಸೂರು ಅಪರ ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ಅವರು ಅಧಿಕಾರಿಗಳಿಗೆ ಸೂಚನೆ…
ನವದೆಹಲಿ: ಭಾರತ ಸರ್ಕಾರವು ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾಗಳನ್ನು ಪುನರಾರಂಭಿಸಲು ಸಿದ್ಧತೆ ನಡೆಸುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ. ಗಾಲ್ವಾನ್ ಕಣಿವೆಯಲ್ಲಿ…
ಮುಂಬೈ: ಆರೋಗ್ಯ ಸಮಸ್ಯೆಯಿಂದ ಮುಂಬೈನ್ ಆಸ್ಪತ್ರೆಗೆ ದಾಖಲಾಗಿದ್ದ ಶರದ್ ಪವಾರ್ ಅವರನ್ನು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಶರದ್ ಪವಾರ್…
ಅಮರಾವತಿ: ವ್ಯಕ್ತಿಯೊಬ್ಬ ಪತ್ನಿ ಹಾಗೂ ತಾಯಿಯನ್ನು ಕತ್ತು ಹಿಸುಕಿ ಕೊಂದು ಬಳಿಕ ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ಮಗು ಸಾವನ್ನಪ್ಪಿರುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆಂದು…
ಹಾಸನ: ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ಮಾಡಿರುವ ಘಟನೆ ಬೇಲೂರು ತಾಲ್ಲೂಕಿನ ಚೀಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ…