ಮೈಸೂರು

ಮೈಸೂರು | ಯುಗಾದಿ ಹಬ್ಬ ; ಖರೀದಿ ಭರಾಟೆ ಜೋರು

ಮೈಸೂರು : ನಗರದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಹಬ್ಬದ ಮುನ್ನಾ ದಿನವಾದ ಶನಿವಾರ ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದರು.

ನಗರದ ದೇವರಾಜ ಮಾರುಕಟ್ಟೆಗೆ ಲಗ್ಗೆ ಇಟ್ಟ ಜನರು ಅಗತ್ಯ ವಸ್ತುಗಳ ಖರೀದಿಗೆ ಮುಂದಾದರು. ಹಿಂದೂ ಸಂಪ್ರದಾಯದಲ್ಲಿ ಯುಗಾದಿ ಹಬ್ಬ ಪ್ರಮುಖವಾದದು. ಹೊಸ ಸಂವತ್ಸರದ ಆರಂಭಕ್ಕೆ ಮುನ್ನುಡಿ ಬರೆಯುವ ಹಬ್ಬವನ್ನು ಹಿಂದುಗಳು ಹೊಸ ವರ್ಷದ ಆಗಮನವೆಂದು ಸಂಭ್ರಮದಿಂದ ಆಚರಿಸುತ್ತಾರೆ.

ಹೀಗಾಗಿ, ನಾಳಿನ ಹಬ್ಬಕ್ಕೆ ಬೇಕಾದ ಪೂಜಾ ಸಾಮಗ್ರಿ, ಹಣ್ಣು-ಹಂಪಲು, ಹೂ ಖರೀದಿಯಲ್ಲಿ ಮುಂದಾಗಿದ್ದರು. ಬೆಲೆ ಏರಿಕೆ ಹಾಗೂ ಬಿರು ಬಿಸಿಲನ್ನು ಲೆಕ್ಕಿಸದೇ ಜನರು ಅಂಗಡಿಗಳತ್ತ ಮುಖ ಮಾಡಿದ್ದರು.

ಹಬ್ಬದ ಹಿನ್ನೆಲೆ ಧನ್ವಂತರಿ ರಸ್ತೆ, ಸಯ್ಯಾಜಿರಾವ್‌ ರಸ್ತೆ. ಕೆ.ಆರ್‌ ಮಾರುಕಟ್ಟೆ ರಸ್ತೆ, ದೇವರಾಜ ಅರಸು ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಜನದಟ್ಟಣೆ ಹೆಚ್ಚಿತ್ತು.

 

ಗಗನಕ್ಕೇರಿದ ಬೆಲೆ: ಚೆಂಡು ಹೂವು, ಸೇವಂತಿಗೆ, ಮಲ್ಲಿಗೆ ಸೇರಿದಂತೆ ವಿವಿಧ ಬಗೆಯ ಹೂವುಗಳ ಬೆಲೆ ಮೀಟರ್ ಗೆ 100 ರಿಂದ 150 ರೂ ನಿಗದಿ ಮಾಡಲಾಗಿತ್ತು.  ಬಾಳೆ ಹಣ್ಣು ಕೆ.ಜಿ ಗೆ ರೂ 120 ಸೇರಿದಂತೆ ಹಲವು ಹಣ್ಣುಗಳ ಬೆಲೆ ಏರಿಕೆಯೂ ಗಗನಕ್ಕೆ ಏರಿತ್ತು.

ಪೂಜಾ ಹಾಗೂ ಹಣ್ಣು, ಹೂ ಸಾಮಾಗ್ರಿ ಖರೀದಿ ಒಂದೆಡೆಯಾದರೆ ಹೊಸ ಬಟ್ಟೆ ಖರೀದಿಗೆ ಅನೇಕರು ಬಟ್ಟೆ ಅಂಗಡಿಗಳತ್ತ ಮುಖ ಮಾಡಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

4 mins ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

42 mins ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

1 hour ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

2 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

2 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

2 hours ago