ಮೈಸೂರು : ನಗರದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಹಬ್ಬದ ಮುನ್ನಾ ದಿನವಾದ ಶನಿವಾರ ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದರು.
ನಗರದ ದೇವರಾಜ ಮಾರುಕಟ್ಟೆಗೆ ಲಗ್ಗೆ ಇಟ್ಟ ಜನರು ಅಗತ್ಯ ವಸ್ತುಗಳ ಖರೀದಿಗೆ ಮುಂದಾದರು. ಹಿಂದೂ ಸಂಪ್ರದಾಯದಲ್ಲಿ ಯುಗಾದಿ ಹಬ್ಬ ಪ್ರಮುಖವಾದದು. ಹೊಸ ಸಂವತ್ಸರದ ಆರಂಭಕ್ಕೆ ಮುನ್ನುಡಿ ಬರೆಯುವ ಹಬ್ಬವನ್ನು ಹಿಂದುಗಳು ಹೊಸ ವರ್ಷದ ಆಗಮನವೆಂದು ಸಂಭ್ರಮದಿಂದ ಆಚರಿಸುತ್ತಾರೆ.
ಹೀಗಾಗಿ, ನಾಳಿನ ಹಬ್ಬಕ್ಕೆ ಬೇಕಾದ ಪೂಜಾ ಸಾಮಗ್ರಿ, ಹಣ್ಣು-ಹಂಪಲು, ಹೂ ಖರೀದಿಯಲ್ಲಿ ಮುಂದಾಗಿದ್ದರು. ಬೆಲೆ ಏರಿಕೆ ಹಾಗೂ ಬಿರು ಬಿಸಿಲನ್ನು ಲೆಕ್ಕಿಸದೇ ಜನರು ಅಂಗಡಿಗಳತ್ತ ಮುಖ ಮಾಡಿದ್ದರು.
ಹಬ್ಬದ ಹಿನ್ನೆಲೆ ಧನ್ವಂತರಿ ರಸ್ತೆ, ಸಯ್ಯಾಜಿರಾವ್ ರಸ್ತೆ. ಕೆ.ಆರ್ ಮಾರುಕಟ್ಟೆ ರಸ್ತೆ, ದೇವರಾಜ ಅರಸು ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಜನದಟ್ಟಣೆ ಹೆಚ್ಚಿತ್ತು.
ಗಗನಕ್ಕೇರಿದ ಬೆಲೆ: ಚೆಂಡು ಹೂವು, ಸೇವಂತಿಗೆ, ಮಲ್ಲಿಗೆ ಸೇರಿದಂತೆ ವಿವಿಧ ಬಗೆಯ ಹೂವುಗಳ ಬೆಲೆ ಮೀಟರ್ ಗೆ 100 ರಿಂದ 150 ರೂ ನಿಗದಿ ಮಾಡಲಾಗಿತ್ತು. ಬಾಳೆ ಹಣ್ಣು ಕೆ.ಜಿ ಗೆ ರೂ 120 ಸೇರಿದಂತೆ ಹಲವು ಹಣ್ಣುಗಳ ಬೆಲೆ ಏರಿಕೆಯೂ ಗಗನಕ್ಕೆ ಏರಿತ್ತು.
ಪೂಜಾ ಹಾಗೂ ಹಣ್ಣು, ಹೂ ಸಾಮಾಗ್ರಿ ಖರೀದಿ ಒಂದೆಡೆಯಾದರೆ ಹೊಸ ಬಟ್ಟೆ ಖರೀದಿಗೆ ಅನೇಕರು ಬಟ್ಟೆ ಅಂಗಡಿಗಳತ್ತ ಮುಖ ಮಾಡಿದ್ದರು.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…