ಮೈಸೂರು : ನಗರದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಹಬ್ಬದ ಮುನ್ನಾ ದಿನವಾದ ಶನಿವಾರ ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದರು.
ನಗರದ ದೇವರಾಜ ಮಾರುಕಟ್ಟೆಗೆ ಲಗ್ಗೆ ಇಟ್ಟ ಜನರು ಅಗತ್ಯ ವಸ್ತುಗಳ ಖರೀದಿಗೆ ಮುಂದಾದರು. ಹಿಂದೂ ಸಂಪ್ರದಾಯದಲ್ಲಿ ಯುಗಾದಿ ಹಬ್ಬ ಪ್ರಮುಖವಾದದು. ಹೊಸ ಸಂವತ್ಸರದ ಆರಂಭಕ್ಕೆ ಮುನ್ನುಡಿ ಬರೆಯುವ ಹಬ್ಬವನ್ನು ಹಿಂದುಗಳು ಹೊಸ ವರ್ಷದ ಆಗಮನವೆಂದು ಸಂಭ್ರಮದಿಂದ ಆಚರಿಸುತ್ತಾರೆ.
ಹೀಗಾಗಿ, ನಾಳಿನ ಹಬ್ಬಕ್ಕೆ ಬೇಕಾದ ಪೂಜಾ ಸಾಮಗ್ರಿ, ಹಣ್ಣು-ಹಂಪಲು, ಹೂ ಖರೀದಿಯಲ್ಲಿ ಮುಂದಾಗಿದ್ದರು. ಬೆಲೆ ಏರಿಕೆ ಹಾಗೂ ಬಿರು ಬಿಸಿಲನ್ನು ಲೆಕ್ಕಿಸದೇ ಜನರು ಅಂಗಡಿಗಳತ್ತ ಮುಖ ಮಾಡಿದ್ದರು.
ಹಬ್ಬದ ಹಿನ್ನೆಲೆ ಧನ್ವಂತರಿ ರಸ್ತೆ, ಸಯ್ಯಾಜಿರಾವ್ ರಸ್ತೆ. ಕೆ.ಆರ್ ಮಾರುಕಟ್ಟೆ ರಸ್ತೆ, ದೇವರಾಜ ಅರಸು ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಜನದಟ್ಟಣೆ ಹೆಚ್ಚಿತ್ತು.
ಗಗನಕ್ಕೇರಿದ ಬೆಲೆ: ಚೆಂಡು ಹೂವು, ಸೇವಂತಿಗೆ, ಮಲ್ಲಿಗೆ ಸೇರಿದಂತೆ ವಿವಿಧ ಬಗೆಯ ಹೂವುಗಳ ಬೆಲೆ ಮೀಟರ್ ಗೆ 100 ರಿಂದ 150 ರೂ ನಿಗದಿ ಮಾಡಲಾಗಿತ್ತು. ಬಾಳೆ ಹಣ್ಣು ಕೆ.ಜಿ ಗೆ ರೂ 120 ಸೇರಿದಂತೆ ಹಲವು ಹಣ್ಣುಗಳ ಬೆಲೆ ಏರಿಕೆಯೂ ಗಗನಕ್ಕೆ ಏರಿತ್ತು.
ಪೂಜಾ ಹಾಗೂ ಹಣ್ಣು, ಹೂ ಸಾಮಾಗ್ರಿ ಖರೀದಿ ಒಂದೆಡೆಯಾದರೆ ಹೊಸ ಬಟ್ಟೆ ಖರೀದಿಗೆ ಅನೇಕರು ಬಟ್ಟೆ ಅಂಗಡಿಗಳತ್ತ ಮುಖ ಮಾಡಿದ್ದರು.
ಹುಣಸೂರು: ರಸ್ತೆ ಮಣ್ಣಿನ ವಿಚಾರಕ್ಕೆ ಗಲಾಟೆ ನಡೆದ ಪರಿಣಾಮ ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನ…
ಹುಣಸೂರು: ಪಾಳು ಬಾವಿಗೆ ಬಿದ್ದಿದ್ದ ಕಾಡುಹಂದಿಯನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ. ಹುಣಸೂರು ತಾಲ್ಲೂಕಿನ ಹನಗೋಡು ಗ್ರಾಮದಲ್ಲಿ…
ನವದೆಹಲಿ: ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ. ಬೆಂಗಳೂರಿನಲ್ಲಿ 991…
ಮಂಡ್ಯ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ತೀರ್ಪು ಮಂಡ್ಯ:ಪತ್ನಿಯನ್ನು ಕೊಲೆಗೈದಿದ್ದ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ಪತಿಗೆ ೨ನೇ ಅಪರ ಜಿಲ್ಲಾ…
ಜಾಗೃತಿ ಉಳುಮೆಗೆ ಮಳೆಯಿಲ್ಲದೆ ಕುಲುಮೆಯಾಗಿದೆ ಇಳೆ ಹೆಚ್ಚಿದ ತಾಪಮಾನ ಬದಲಾವಣೆಯ ಹವಾಮಾನಕೆ ದೇಹದ ಆಂತರಿಕ ತಂಪು ವಿಫಲ ಅದಕೆ ಹೆಚ್ಚುತ್ತಿದೆ…
ಶಾಲಾ ಕಾರ್ಯಕ್ರಮಗಳಲ್ಲಿ ಅಶ್ಲೀಲ ಹಾಡುಗಳಿಗೆ ಶಿಕ್ಷಣ ಇಲಾಖೆ ನಿಷೇಧ ಹೇರಿರುವುದು ಸ್ವಾಗತಾರ್ಹ. ಇಂದಿನ ಶೇ.೮೦ರಷ್ಟು ಸಿನಿಮಾ ಹಾಡುಗಳು ದ್ವಂದ್ವಾರ್ಥ ಹಾಗೂ…