ಮೈಸೂರು : ನಗರದೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಹಬ್ಬದ ಮುನ್ನಾ ದಿನವಾದ ಶನಿವಾರ ನಗರದ ಮಾರುಕಟ್ಟೆಗಳಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಜನರು ಮುಗಿಬಿದ್ದರು.
ನಗರದ ದೇವರಾಜ ಮಾರುಕಟ್ಟೆಗೆ ಲಗ್ಗೆ ಇಟ್ಟ ಜನರು ಅಗತ್ಯ ವಸ್ತುಗಳ ಖರೀದಿಗೆ ಮುಂದಾದರು. ಹಿಂದೂ ಸಂಪ್ರದಾಯದಲ್ಲಿ ಯುಗಾದಿ ಹಬ್ಬ ಪ್ರಮುಖವಾದದು. ಹೊಸ ಸಂವತ್ಸರದ ಆರಂಭಕ್ಕೆ ಮುನ್ನುಡಿ ಬರೆಯುವ ಹಬ್ಬವನ್ನು ಹಿಂದುಗಳು ಹೊಸ ವರ್ಷದ ಆಗಮನವೆಂದು ಸಂಭ್ರಮದಿಂದ ಆಚರಿಸುತ್ತಾರೆ.
ಹೀಗಾಗಿ, ನಾಳಿನ ಹಬ್ಬಕ್ಕೆ ಬೇಕಾದ ಪೂಜಾ ಸಾಮಗ್ರಿ, ಹಣ್ಣು-ಹಂಪಲು, ಹೂ ಖರೀದಿಯಲ್ಲಿ ಮುಂದಾಗಿದ್ದರು. ಬೆಲೆ ಏರಿಕೆ ಹಾಗೂ ಬಿರು ಬಿಸಿಲನ್ನು ಲೆಕ್ಕಿಸದೇ ಜನರು ಅಂಗಡಿಗಳತ್ತ ಮುಖ ಮಾಡಿದ್ದರು.
ಹಬ್ಬದ ಹಿನ್ನೆಲೆ ಧನ್ವಂತರಿ ರಸ್ತೆ, ಸಯ್ಯಾಜಿರಾವ್ ರಸ್ತೆ. ಕೆ.ಆರ್ ಮಾರುಕಟ್ಟೆ ರಸ್ತೆ, ದೇವರಾಜ ಅರಸು ರಸ್ತೆ ಸೇರಿದಂತೆ ಹಲವು ಕಡೆಗಳಲ್ಲಿ ಜನದಟ್ಟಣೆ ಹೆಚ್ಚಿತ್ತು.
ಗಗನಕ್ಕೇರಿದ ಬೆಲೆ: ಚೆಂಡು ಹೂವು, ಸೇವಂತಿಗೆ, ಮಲ್ಲಿಗೆ ಸೇರಿದಂತೆ ವಿವಿಧ ಬಗೆಯ ಹೂವುಗಳ ಬೆಲೆ ಮೀಟರ್ ಗೆ 100 ರಿಂದ 150 ರೂ ನಿಗದಿ ಮಾಡಲಾಗಿತ್ತು. ಬಾಳೆ ಹಣ್ಣು ಕೆ.ಜಿ ಗೆ ರೂ 120 ಸೇರಿದಂತೆ ಹಲವು ಹಣ್ಣುಗಳ ಬೆಲೆ ಏರಿಕೆಯೂ ಗಗನಕ್ಕೆ ಏರಿತ್ತು.
ಪೂಜಾ ಹಾಗೂ ಹಣ್ಣು, ಹೂ ಸಾಮಾಗ್ರಿ ಖರೀದಿ ಒಂದೆಡೆಯಾದರೆ ಹೊಸ ಬಟ್ಟೆ ಖರೀದಿಗೆ ಅನೇಕರು ಬಟ್ಟೆ ಅಂಗಡಿಗಳತ್ತ ಮುಖ ಮಾಡಿದ್ದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…